- Monday
- March 9th, 2026
ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡುಗಲ್ಲು 75ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಇದರ ಅಂಗವಾಗಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರು ಧ್ವಜಾರೋಹಣ ನಡೆಸಿಕೊಟ್ಟರು. ಸಭಾ ಕಾರ್ಯಕ್ರಮದ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಂದ ಪ್ರಾರ್ಥನೆ, ಭಾಷಣ, ಯೋಧರ ಚರಿತ್ರೆ ಓದುವುದು, ದೇಶಭಕ್ತಿ ಗೀತೆ ಹಾಡುವುದು ನಡೆಯಿತು. ಶಾಲಾ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ಮೋಹನ್ ಉತ್ರಂಬೆ ಮತ್ತು ಮೋಹನ್...
ಇಂದು ಬೆಳ್ಳಾರೆ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಬೆಳ್ಳಾರೆ ಗ್ರಾಮ ಪಂಚಾಯತ್ ನ ಅಧ್ಯಕ್ಷರಾದ ಚಂದ್ರಶೇಖರ ಪನ್ನೆ ಮತ್ತು ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ. ಗಿರೀಶ್ ಎಂ ಧ್ವಜಾರೋಹಣ ನೆರವೇರಿಸಿದರು. ಕಾರ್ಯಕ್ರಮದಲ್ಲಿ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಾಧಿಕಾರಿ ಬೇಬಿ ಸಿಸಿ, ಬೆಳ್ಳಾರೆ ಆರೋಗ್ಯ ಕೇಂದ್ರದ ಸಿಬ್ಬಂದಿಗಳು ಮತ್ತು ಬೆಳ್ಳಾರೆ 108...
ಅಮರಮುಡ್ನೂರು ಗ್ರಾಮದ ಚೊಕ್ಕಾಡಿ ವಿದ್ಯಾಸಂಸ್ಥೆ ಕುಕ್ಕುಜಡ್ಕದಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ಅಮೃತ ಮಹೋತ್ಸವ ಆಚರಣೆಯು ಆ.15 ರಂದು ನಡೆಯಿತು. ಬೆಳಗ್ಗೆ ನಿವೃತ್ತ ಮುಖ್ಯ ಶಿಕ್ಷಕ ಶ್ರೀ ವಿ.ಸುಬ್ರಾಯ ರವರು ಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಿದರು. ಅನಂತರ ನಡೆದ ಸಭಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಇವರು ಸ್ವಾತಂತ್ರ್ಯ ಪೂರ್ವದ ನೆನಪುಗಳು, ಸ್ವಾತಂತ್ರ್ಯ ಸಿಕ್ಕಿದ ಸಂಭ್ರಮ, ಸ್ವಾತಂತ್ರ್ಯ...
ವಿದ್ಯಾಬೋಧಿನೀ ಪ್ರೌಢಶಾಲೆಯಲ್ಲಿ ಸ್ವಾತಂತ್ರ್ಯೋತ್ಸವವನ್ನು ಧ್ವಜಾರೋಹಣವನ್ನು ವಿದ್ಯಾಬೋಧಿನೀ ಎಜ್ಯುಕೇಶನಲ್ ಸೊಸೈಟಿಯ ಅಧ್ಯಕ್ಷರಾದ ಎನ್ ವೆಂಕಟ್ರಮಣ ಭಟ್ ನೆರವೇರಿಸಿ ಶುಭಾಶಂಸನೆ ಮಾಡಿದರು. ಸಭಾ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎನ್ ವೆಂಕಟ್ರಮಣ ಭಟ್ ವಹಿಸಿದ್ದರು. ಕಳಂಜ ಬಾಳಿಲ ಕೃಷಿ ಪತ್ತಿನ ಸಹಕಾರಿ ಸಂಘ ಇದರ ಮಾಜಿ ಅಧ್ಯಕ್ಷರು ,ಪ್ರಗತಿಪರ ಕೃಷಿಕರೂ ಆದ ವಿಶ್ವನಾಥ ರೈ ಕಳಂಜ ಮುಖ್ಯ ಅತಿಥಿಗಳಾಗಿದ್ದರು. ವೇದಿಕೆಯಲ್ಲಿ ಸಂಸ್ಥೆಗಳ...
75ನೇ ಸ್ವಾತಂತ್ರ್ಯದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಭಾರತೀಯ ಜನತಾ ಪಾರ್ಟಿ ಉಡುಪಿ ಜಿಲ್ಲೆ ವತಿಯಿಂದ ಕಡಿಯಾಳಿಯಲ್ಲಿರುವ ಪಕ್ಷದ ಕಛೇರಿಯಿಂದ ಸರ್ವೀಸ್ ಬಸ್ ನಿಲ್ದಾಣದ ಕ್ಲಾಕ್ ಟವರ್ ವರೆಗೆ ಆಯೋಜಿಸಿದ ತಿರಂಗಾ ಯಾತ್ರೆಗೆ ಉಸ್ತುವಾರಿ ಸಚಿವರಾದ ಎಸ್.ಅಂಗಾರರವರು ಚಾಲನೆ ನೀಡಿ ಜಾಥಾದಲ್ಲಿ ಪಾಲ್ಗೊಂಡು ಕ್ಲಾಕ್ ಟವರ್ ಬಳಿ ಇರುವ ಗಾಂಧಿ ಪ್ರತಿಮೆಗೆ ಪುಷ್ಪಾರ್ಚಣೆ ಮಾಡಿದರು. ಈ ಸಂದರ್ಭದಲ್ಲಿ...
ಪಂಬೆತ್ತಾಡಿ ಹಾಲು ಉತ್ಪಾದಕರ ಸಂಘದಲ್ಲಿ ಅಧ್ಯಕ್ಷ ಜಯರಾಮ ಭಟ್ ಧ್ವಜಾರೋಹಣ ನೆರವೇರಿಸಿದರು. ಈ ಸಂದರ್ಭದಲ್ಲಿ ನಿವೃತ್ತ ಸೈನಿಕ ಜಾಕೆ ದಯಾನಂದ, ಸಂಘದ ನಿರ್ದೇಶಕರಾದ ಕುಲದೀಪ್, ದಿನೇಶ್ ಪಂಜದ ಬೈಲು, ನಾಗಪ್ಪ ಗೌಡ,ಗಣೇಶ್ ಭಟ್,ಕಾರ್ತಿಕ್ ಭೀಮಗುಳಿ,ಊರಿನ ಪ್ರಮುಖರು ಉಪಸ್ಥಿತರಿದ್ದರು.
ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ ಅಮೃತ ಮಹೋತ್ಸವದ ಅಂಗವಾಗಿ ಮಡಪ್ಪಾಡಿ ಗ್ರಾಮ ಪಂಚಾಯತ್ ನಲ್ಲಿ ಆಗಸ್ಟ್15 ರಂದು ಧ್ವಜಾರೋಹಣ ವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀ ಮಿತ್ರದೇವ ಮಡಪ್ಪಾಡಿ ರವರು ನೆರವೇರಿಸಿದರು ಹಾಗೂ ಮೆರವಣಿಗೆ ಮುಖಾಂತರ ಯುವಕ ಮಂಡಲ ದಲ್ಲಿ ಸಭಾ ಕಾರ್ಯಕ್ರಮವನ್ನೂ ಆಯೋಜಿಸಲಾಯಿತು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ, ಸನ್ಮಾನ ಕಾರ್ಯಕ್ರಮ ಮತ್ತು...
ಸ್ವಾತಂತ್ರ್ಯ ಅಮೃತ ಮಹೋತ್ಸವ ದ ಶುಭ ಸಮಾರಂಭದಲ್ಲಿ ಯೋಧರನ್ನು ಗೌರವಿಸುವುದು ಶ್ರೇಷ್ಟ ಮತ್ತು ಹೆಮ್ಮೆಯ ಕ್ಷಣವಾಗಿದೆ. ನಿವೃತ್ತ ಯೋಧರಿಗೆ ಗೌರವ ನೀಡುವುದು ದೇಶ ಪ್ರೇಮದ ಭಾವನೆಗಳ ಔನತ್ಯಕ್ಕೆ ಅಡಿಗಲ್ಲಾಗಿದೆ. ಭಾರತೀಯ ಸಂಸ್ಕೃತಿ ಮತ್ತು ಸಂಸ್ಕಾರ ವನ್ನು ಉಳಿಸಿ ಬೆಳೆಸುವತ್ತ ಆಧುನಿಕ ಯುಗದಲ್ಲಿ ಯುವ ಜನಾಂಗ ಕಟಿಬದ್ಧವಾಗಬೇಕು ಎಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ...
ಸುಬ್ರಹ್ಮಣ್ಯ ಗ್ರಾ.ಪಂ ವತಿಯಿಂದ ಸುಬ್ರಹ್ಮಣ್ಯ ಪಂಚಾಯತ್ ವ್ಯಾಪ್ತಿಯ ಯೇನೆಕಲ್ಲುನ ಬಾನಡ್ಕ-ಬೋಳಡ್ಕ ಪಂಚಾಯತ್ ರಸ್ತೆಗೆ ಅಜಾದಿ ಕಾ ಅಮೃತ ಮಹೋತ್ಸವದ ಅಂಗವಾಗಿ ಸೈನಿಕ ರಸ್ತೆ ಎಂದು ನಾಮಕರಣ ಮಾಡಲಾಯಿತು.ಕಡಬ ತಾಲೂಕು ನಿವೃತ್ತ ಸೈನಿಕರ ಸಂಘದ ಅಧ್ಯಕ್ಷ ಜೆ.ಪಿ.ಎಂ ಚೆರಿಯನ್ ರಸ್ತೆ ನಾಮಕರಣ ಫಲಕವನ್ನು ಅನಾವರಣಗೊಳಿಸಿದರು.ಈ ಮೂಲಕ ಬಾನಡ್ಕ-ಬೋಳಡ್ಕ ರಸ್ತೆಯು ಅಧಿಕೃತವಾಗಿ ಸೈನಿಕ ರಸ್ತೆ ಎಂದು ಉಲ್ಲೇಖಿತವಾಯಿತು. ಗ್ರಾಮೀಣ...
ಕೊಡಗು ಸಂಪಾಜೆ ಗ್ರಾಮದ ಪಯಸ್ವಿನಿ ಸಹಕಾರಿ ಸಂಘದ ಕಚೇರಿಯಲ್ಲಿ 75 ನೇ ಸ್ವಾತಂತ್ರ್ಯ ದಿನದ ದ್ವಜಾರೋಹಣದ ಕಾರ್ಯಕ್ರಮವನ್ನು ಸಂಸ್ಥೆಯ ಉಪಾಧ್ಯಕ್ಷರಾದ ರಾಜಾರಾಮ್ ಕಳಗಿ ರವರು ನೆರವೇರಿಸಿದರು. ಈ ಶುಭ ಸಮಾರಂಭದಲ್ಲಿ ಸಹಕಾರಿ ಸಂಘದ ನಿರ್ದೇಶಕರುಗಳು ರವೀಂದ್ರ ಯು.ಪಿ, ಪಯಶ್ವಿನಿ ಸಹಕಾರಿ ಸಂಸ್ಥೆಯ ಸಿಇಓ ಆನಂದ, ಸಂಸ್ಥೆಯ ಸಿಬ್ಬಂದಿವರ್ಗ ಹಾಗೂ ಹಿರಿಯರು, ಊರಿನವರು ಉಪಸ್ಥಿತರಿದ್ದರು.
Loading posts...
All posts loaded
No more posts
