Ad Widget

ಕಲ್ಮಡ್ಕ : ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯೋತ್ಸವ

75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವದ ಅಂಗವಾಗಿ ಕಲ್ಮಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣವನ್ನು ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಹಾಜಿರಾ ಗಫೂರ್ ನೆರವೇರಿಸಿದರು. ಸದಸ್ಯರುಗಳಾದ ಲೋಕೇಶ್ ಆಕ್ರಿಕಟ್ಟೆ, ಲೋಕಯ್ಯ ನಾಯ್ಕ ಬೊಳಿಯೂರು, ಪವಿತ್ರ ಕುದ್ವ, ಹರೀಶ್ ಮಾಳಪ್ಪಮಕ್ಕಿ, ಮೀನಾಕ್ಷಿ ಕೆ, ಮೋಹಿನಿ ಎಂ, ಜಯಲತ ಕೆ.ಡಿ, ಗ್ರಾಮ ಪಂಚಾಯತ್ ಕಾರ್ಯದರ್ಶಿ ಗೋಪಾಲಕೃಷ್ಣ...

ಅರಂತೋಡು ಸಿರಿ ಸೌಧದಲ್ಲಿ 75 ನೇ ಸ್ವಾತಂತ್ರ್ಯ ಅಮೃತ ಮಹೋತ್ಸವ

ಅರಂತೋಡು ಗ್ರಾಮ ಪಂಚಾಯತ್ ಅರಂತೋಡು ತೊಡಿಕಾನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ,ಸುದ್ದಿ ಸಮೂಹ ಸಂಸ್ಥೆ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು,ಅರಂತೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ಇಲಾಖೆಗಳು,ಸರಕಾರಿ ಹಿರಿಯ ಪ್ರಾಥಮಿಕ ಶಾಲೆ,ದುರ್ಗಾ ಮಾತಾ ಸಂಜೀವಿನಿ ಒಕ್ಕೂಟ,ಅರಂತೋಡು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಇವುಗಳ ಸಹಯೋಗದೊಂದಿಗೆ 75 ನೇ ಅಮೃತ ಮಹೋತ್ಸವವು ಅರಂತೋಡು ಸಿರಿ...
Ad Widget

ತೊಡಿಕಾನ: ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವ

ಸುಳ್ಯ ಸೀಮೆಯ ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ 75ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ಧ್ವಜಾರೋಹಣವನ್ನು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಶ್ರೀ ಯು.ಯಂ.ಕಿಶೋರಕುಮಾರ್ ನೆರವೇರಿಸಿದರು. ಈ ಸಂದರ್ಭದಲ್ಲಿ ಅಮ್ರತಮಹೋತ್ಸವದ ಬಗ್ಗೆ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಂಪಾಜೆ ವಲಯ ಮಟ್ಟದ ಮೇಲ್ವಿಚಾರಕರಾದ ಸುಧೀರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರು ಭಕ್ತಾದಿಗಳು ಉಪಸ್ಥಿತರಿದ್ದರು.

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ 75ನೇ ಸ್ವಾತಂತ್ರ್ಯ ದಿನಾಚರಣೆ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ನಲ್ಲಿ ಆ.15 ರಂದು ಧ್ವಜಾರೋಹಣ ಮಾಡಿ 75ನೇ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರು, ಉಪಾಧ್ಯಕ್ಷರು, ಪಿ.ಡಿ.ಓ, ಗ್ರಾಮ ಪಂಚಾಯತ್ ಸದಸ್ಯರುಗಳು, ಸಂಜೀವಿನಿ ಒಕ್ಕೂಟದ ಸದಸ್ಯರುಗಳು, ಆಶಾ ಕಾರ್ಯಕರ್ತೆಯರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ :- ಉಲ್ಲಾಸ್ ಕಜ್ಜೋಡಿ

ಬೆಳ್ಳಾರೆ:ಬಂಗ್ಲೆಗುಡ್ಡೆಯಲ್ಲಿ ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ

ಬೆಳ್ಳಾರೆ: ಸ್ವಾತಂತ್ರ್ಯದ ಅಮೃತಮಹೋತ್ಸವ ಆಚರಣೆ ಬಂಗ್ಲೆಗುಡ್ಡೆಯಲ್ಲಿ ನಡೆಯಿತು. ಸಚಿವ ಎಸ್.ಅಂಗಾರರವರು ಧ್ವಜಾರೋಹಣ ನೆರವೇರಿಸಿ ಬೆಳ್ಳಾರೆಯ ಐತಿಹಾಸಿಕ ಸ್ಥಳ ಬಂಗ್ಲೆಗುಡ್ಡೆಯ ಮಹತ್ವವನ್ನು ವಿವರಿಸಿದರು.ವೇದಿಕೆಯಲ್ಲಿ ತಹಶೀಲ್ದಾರ್ ಅನಿತಾಲಕ್ಷ್ಮೀ, ಗ್ರಾಮ ಪಂಚಾಯತ್ ಅಧ್ಯಕ್ಷ ಚಂದ್ರಶೇಖರ ಪನ್ನೆ ಸಿ.ಡಿ.ಪಿ.ಒ ಶ್ರೀಮತಿ ರಶ್ಮಿ ಕೆ.ಎಂ, ಗ್ರಾಮ ಪಂಚಾಯತ್ ಪಿ.ಡಿ.ಒ ಶ್ರೀಮತಿ ಅನುಷಾ, ಚಂದ್ರ ಕೋಲ್ಚಾರು, ಗ್ರಾಮ ಪಂಚಾಯತ್ ಉಪಾಧ್ಯಕ್ಷೆ ಗೌರಿ ನೆಟ್ಟಾರು,ಶ್ರೀನಾಥ್ ಬಾಳಿಲ...

ಸುಳ್ಯ: ರೋಟರಿ ಸಭಾಭವನದಲ್ಲಿ ಆಟಿ ಆಚರಣೆ

ಸುಳ್ಯ ರೋಟರಿ ಕ್ಲಬ್, ರೋಟರಿ ಕ್ಲಬ್ ಸುಳ್ಯ ಸಿಟಿ, ಇನ್ನ‌ ವೀಲ್ ಕ್ಲಬ್ ಸುಳ್ಯ ಇದರ ಆಶ್ರಯದಲ್ಲಿ ವಿವಿಧ ಆಟಿ ಖಾದ್ಯಗಳ ಪ್ರದರ್ಶನ ಹಾಗೂ ಸ್ಪರ್ಧೆಗಳ ಮೂಲಕ ಆಟಿ ಆಚರಣೆ ಕಾರ್ಯಕ್ರಮ ಆ.11ರಂದು ರೋಟರಿ ಸಭಾ ಭವನದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಭಾ ಅಧ್ಯಕ್ಷತೆಯನ್ನು ರೋಟರಿ ಸುಳ್ಯ ಅಧ್ಯಕ್ಷ ಚಂದ್ರಶೇಖರ ಪೇರಾಲು ವಹಿಸಿದ್ದರು. ಆಟಿ ಆಚರಣೆ ಕುರಿತು...

ಸುಳ್ಯ: ಕನಕಮಜಲಿನಿಂದ ಜಾಲ್ಸೂರಿನ ತನಕ ಬೃಹತ್ ಪಂಜಿನ ಮೆರವಣಿಗೆ

ಜಾಲ್ಸೂರು ವಲಯ ಹಿಂದೂ ಜಾಗರಣ ವೇದಿಕೆಯ ವತಿಯಿಂದ ಅಖಂಡ ಭಾರತ ಸಂಕಲ್ಪ ದಿನದ ಅಂಗವಾಗಿ ಕನಕಮಜಲಿನ ಶ್ರೀ ಆತ್ಮರಾಮ ಭಜನಾ ಮಂದಿರದದಿಂದ ಜಾಲ್ಸೂರಿನ ತನಕ ಆ.13ರಂದು ಸಂಜೆ ಬೃಹತ್ ಪಂಜಿನ ಮೆರವಣಿಗೆಯು ನಡೆಯಿತು. ನಂತರ ಜಾಲ್ಸೂರಿನ ಶ್ರೀನಿವಾಸ್ ಕಾಂಪ್ಲೆಕ್ಸ್ ವಠಾರದಲ್ಲಿ ಜರುಗಿದ ಕಾರ್ಯಕ್ರಮದಲ್ಲಿ ಜಾಲ್ಸೂರು ವಲಯದ ಹಿಂದೂ ಜಾಗರಣ ವೇದಿಕೆಯ ಅಧ್ಯಕ್ಷ ತೀರ್ಥರಾಮ ಬಾಳೆಕೋಡಿ ಅಧ್ಯಕ್ಷತೆ...

ಭಕ್ತಿಗೀತೆ ಸಂಗೀತ ರಸಮಂಜರಿಗೆ ಗಾಯಕರಿಗೆ ಅವಕಾಶ

ಸುಳ್ಯದ ವಾಷ್ಠರ್ ಫೈವ್ ಸ್ಟಾರ್ ಸಂಗೀತ ಬಳಗದ ವತಿಯಿಂದ ಆ. 19 ರಂದು ಶುಕ್ರವಾರ ದಿನ ಶ್ರೀ ಕೃಷ್ಣ ಜನ್ಮಾಷ್ಟಮಿ ದಿನ ಸಂಜೆ 4-30 ಕ್ಕೆ ಸುಳ್ಯದ ಬ್ರಹ್ಮಕುಮಾರಿ ಈಶ್ವರೀಯ ವಿಶ್ವವಿದ್ಯಾಲಯದಲ್ಲಿ ಭಕ್ತಿಗೀತೆ ರಸಮಂಜರಿ ಕಾರ್ಯಕ್ರಮ ಆಯೋಜಿಸಿದ್ದೇವೆ . ಹಾಡು ಹಾಡಲು ಆಸಕ್ತ ಇರುವ ಹಿರಿಯ ಮತ್ತು ಕಿರಿಯ ಗಾಯಕರು ತಮ್ಮ ಹೆಸರನ್ನು 9845309239 ಈ...

ಐನೆಕಿದು :- 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

ನಿಸರ್ಗ ಯುವಕ ಮಂಡಲ ಐನೆಕಿದು ಇದರ ಆಶ್ರಯದಲ್ಲಿ ಆ.21 ರಂದು ಐನೆಕಿದು ಸಭಾಭವನದಲ್ಲಿ ಶ್ರೀ ಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ 7ನೇ ವರ್ಷದ ಮೊಸರು ಕುಡಿಕೆ ಮತ್ತು ಧಾರ್ಮಿಕ ಉಪನ್ಯಾಸ ಹಾಗೂ ಸ್ಪರ್ಧಾ ಕಾರ್ಯಕ್ರಮ ನಡೆಯಲಿದ್ದು, ಇದರ ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮವು ಆ.14 ರಂದು ನಡೆಯಿತು. ಶ್ರೀ ಹರಿಹರೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಕಿಶೋರ್...

ಕಲ್ಮಕಾರು ಭಾಗದಲ್ಲಿ ಕಂಪಿಸಿದ ಭೂಮಿ

ಕಲ್ಮಕಾರು ಭಾಗದಲ್ಲಿ ಆ.14 ರಂದು ಸಂಜೆ 6:18 ರ ಸುಮಾರಿಗೆ ದೊಡ್ಡ ಶಬ್ದದೊಂದಿಗೆ ಸಣ್ಣ ಪ್ರಮಾಣದಲ್ಲಿ ಭೂಮಿ ಕಂಪಿಸಿದೆ ಎಂದು ತಿಳಿದುಬಂದಿದೆ. ವರದಿ :- ಉಲ್ಲಾಸ್ ಕಜ್ಜೋಡಿ
Loading posts...

All posts loaded

No more posts

error: Content is protected !!