Ad Widget

ಸುಳ್ಯ: ಇನ್ನರ್ ವಿಲ್ ಕ್ಲಬ್ ನ ಅಧ್ಯಕ್ಷರಾಗಿ ನಯನಾ ಹರಿಪ್ರಸಾದ್ ಆಯ್ಕೆ.

ಸುಳ್ಯದ ಇನ್ನರ್ ವಿಲ್ ಕ್ಲಬ್‌ನ ೨೦೨೨-೨೩ನೇ ಸಾಲಿನ ಅಧ್ಯಕ್ಷರಾಗಿ ಶ್ರೀಮತಿ ನಯನಾ ಹರಿಪ್ರಸಾದ್ ಬಾಳೆಕೋಡಿ ಆಯ್ಕೆಯಾಗಿದ್ದಾರೆ.ಉಪಾಧ್ಯಕ್ಷರಾಗಿ ಯೋಗಿತಾ ಗೋಪಿನಾಥ್, ಐ.ಪಿ.ಪಿ. ಪೂಜಾ ಸಂತೋಷ್, ಕಾರ್ಯದರ್ಶಿಯಾಗಿ ಸವಿತಾ ನಾರ್ಕೋಡು, ಜತೆ ಕಾರ್ಯದರ್ಶಿಯಾಗಿ ಲತಾ ರೈ, ಕೋಶಾಧಿಕಾರಿಯಾಗಿ ಚೈತನ್ಯ ಸುಬ್ರಹ್ಮಣ್ಯ, ಐ.ಎಸ್.ಒ. ಸವಿತಾ ಸಿ.ಕೆ., ಕ್ಲಬ್ ಎಡಿಟರ್ ಕೃಪಾ ಚಂದ್ರಶೇಖರ್, ವೆಬ್ ಕೋ-ಆರ್ಡಿನೇಟರ್ ಮಮತಾ ನಾರ್ಕೋಡು, ಇಸಿ ಮೆಂಬರ್‌ಗಳಾಗಿ...

ಚರಿಷ್ಮಾ ಕಾನಾವು ಹಾಡಿರುವ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯನ ಭಕ್ತಿಗೀತೆ ಯೂಟ್ಯೂಬ್ ನಲ್ಲಿ ಬಿಡುಗಡೆ

ವಳಲಂಬೆಯ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವರ ಭಕ್ತಿಗೀತೆ ಯನ್ನು ಯೂಟ್ಯೂಬ್ ನಲ್ಲಿ ಬಿಡುಗಡೆಗೊಂಡಿದ್ದು ಚರಿಷ್ಮಾ ಕಾನಾವು ಸ್ವರ ನೀಡಿದ್ದಾರೆ. https://youtu.be/MgNL5SehvGQ ಅದ್ವೈತಮ್ ಕ್ರಿಯೇಷನ್ ಯೂಟ್ಯೂಬ್ ಚಾನೆಲ್ ನಲ್ಲಿ ಮನೀಶ್ ಪ್ರಜ್ವಲ್ ಸಾಹಿತ್ಯಕ್ಕೆ ಚರಿಷ್ಮಾ ಕಾನಾವು ಮತ್ತು ಅಭಿಷೇಕ್ ಆಚಾರ್ಯ ಧ್ಚನಿಗೂಡಿಸಿದ್ದಾರೆ.ಈಕೆ ದೇವಚಳ್ಳ ಗ್ರಾಮದ ಅಡ್ಡನಪಾರೆ ಕಾನಾವು ರವೀಂದ್ರ ಹಾಗೂ ಶ್ರೀಮತಿ ತಾರಾ ದಂಪತಿಗಳ ಪುತ್ರಿ.
Ad Widget

ನಿಂತಿಕಲ್ಲು: ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ

ನಿಂತಿಕಲ್ಲಿನ ಶ್ರೀ ಪರಿವಾರ ಪಂಚಲಿಂಗೇಶ್ವರ ಕೈಗಾರಿಕಾ ತರಬೇತಿ ಕೇಂದ್ರ ವರ್ಷನಗರ ಇದರಲ್ಲಿ 2020 -22 ನೇ ಸಾಲಿನಲ್ಲಿ ವ್ಯಾಸಂಗ ಮಾಡಿದ ಹಿರಿಯ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಸಮಾರಂಭ ಆಗಸ್ಟ್ 8 ರಂದು ಕೈಗಾರಿಕಾ ತರಬೇತಿ ಕೇಂದ್ರದಲ್ಲಿ ನಡೆಯಿತು. ಕಾರ್ಯಕ್ರಮದಲ್ಲಿ ಸಂಸ್ಥೆಯ ಪ್ರಾಚಾರ್ಯರಾದ ಗುರುಪ್ರಸಾದ್ ತೋಟ ಅಧ್ಯಕ್ಷತೆ ವಹಿಸಿದ್ದರು .ಮುಖ್ಯ ಅತಿಥಿಗಳಾಗಿ ಪದವಿಪೂರ್ವ ಕಾಲೇಜಿನ ಪ್ರಾಚಾರ್ಯರಾದ ಸದಾನಂದ ರೈ...

ಆ.21 ರಂದು ಸುಳ್ಯದಲ್ಲಿ ಅಮೃತ ಸಾಹಿತ್ಯೋತ್ಸವ

ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆ, ಜಲಶ್ರೀ ಪ್ರತಿಷ್ಠಾನ ಕಡ್ಲಾರು, ಕಲಾಮಾಯೆ(ರಿ.) ಏನೆಕಲ್ ಇವುಗಳ ವತಿಯಿಂದ ಆ.21 ರಂದು ಸುಳ್ಯ ಶ್ರೀ ಚೆನ್ನಕೇಶವ ದೇವಸ್ಥಾನದ ಸಭಾಭವನದಲ್ಲಿ ಅಮೃತ ಸಾಹಿತ್ಯೋತ್ಸವ ನಡೆಯಲಿದ್ದು, ಕಾರ್ಯಕ್ರಮದಲ್ಲಿ ಬಹುಭಾಷಾ ಕವಿಗೋಷ್ಠಿ, ಕನ್ನಡ ಕಥಾಗೋಷ್ಠಿ, ಸಾಧಕರಿಗೆ ಕಿರಣ ಗೌರವ ಸನ್ಮಾನ ಹಾಗೂ ಈ ಹಿಂದೆ ನಡೆದ ಆನ್ಲೈನ್ ಅರೆಭಾಷೆ ಪದ್ಯ ಕವನಗಳ ಗಮ್ಮತ್...

ಜಾಲ್ಸೂರು: ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಲೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮ

ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕ ಸಂಘದ ಜಾಲ್ಲೂರು ಘಟಕದ ವತಿಯಿಂದ ಆಟಿ ಆಚರಣೆ ಹಾಗೂ ಸನ್ಮಾನ ಕಾರ್ಯಕ್ರಮವನ್ನು ಆ.12ರಂದು ಜಾಲ್ಲೂರು ಗ್ರಾ.ಪಂ. ಸಭಾಭವನದಲ್ಲಿ ಸುಳ್ಯ ತಾಲೂಕು ಸಂಧ್ಯಾಚೇತನ ಹಿರಿಯ ನಾಗರಿಕರ ಸಂಘದ ಅಧ್ಯಕ್ಷ ಬಾಪೂ ಸಾಹೇಬ್ ಅವರ ಮೂಲಕ ದೀಪಬೆಳಗಿಸಿ ಉದ್ಘಾಟಿಸಲಾಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪಯಸ್ವಿನಿ ಎಜುಕೇಶನ್ ಸೊಸೈಟಿ ಅಧ್ಯಕ್ಷ ಜಾಕೆ ಸದಾನಂದ ಅವರು...

ಅರಂತೋಡು: ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಧ್ವಜ ವಿತರಣೆ

ಅರಂತೋಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಲ್ಲಿ ಆ.12 ರಂದು ಧ್ವಜ ವಿತರಣೆ ನಡೆಯಿತು. ಸಂಘದ ನಿರ್ದೇಶಕರುಗಳಿಗೆ ಹಾಗೂ ಸಿಬ್ಬಂದಿಗಳಿಗೆ ಧ್ವಜ ವಿತರಿಸಲಾಯಿತು. ಈ ಸಂದರ್ಭ ಸಂಘದ ಅಧ್ಯಕ್ಷ ಸಂತೋಷ್ ಕುತ್ತಮೊಟ್ಟೆ, ಉಪಾಧ್ಯಕ್ಷ ದಯಾನಂದ ಕುರುಂಜಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾಸುದೇವ ನಾಯಕ್, ನಿರ್ದೇಶಕರು, ಸೊಸೈಟಿ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಯಾರಿಗೆ ಬಂತು ?ಎಲ್ಲಿಗೆ ಬಂತು !ನಲವತ್ತೇಳರ ಸ್ವಾತಂತ್ರ್ಯ ?

ನಾವು ಸ್ವಾತಂತ್ರ್ಯದ ಅಮೃತಮಹೋತ್ಸವದಲ್ಲಿದ್ದೇವೆ 75 ಸಂವತ್ಸರಗಳನ್ನು ಪೂರೈಸಿದ್ದೇವೆ ಈ ಸ್ವಾತಂತ್ರ್ಯಕ್ಕಾಗಿ ಅನೇಕ ಮಹಾನೀಯರು ವೀರವನಿತೆಯರು ವೀರ ಪುರುಷರು ತಮ್ಮ ಜೀವವನ್ನು, ತಮ್ಮ ಕುಟುಂಬವನ್ನು ಬಲಿಕೊಟ್ಟು, ನಮ್ಮ ರಾಷ್ಟ್ರಕ್ಕಾಗಿ ತಮ್ಮ ಪ್ರಾಣವನ್ನು ಬಲಿದಾನವಾಗಿ ನೀಡಿದ್ದಾರೆ. ಬಿಸಿ ರಕ್ತವನ್ನು ನಮಗಾಗಿ ನಮ್ಮ ದೇಶಕ್ಕಾಗಿ ಅರ್ಪಿಸಿದ್ದಾರೆ ಅದರ ಮೌಲ್ಯವನ್ನು ನಾವಿಂದು ವಿಮರ್ಶೆ ಮಾಡಬೇಕಿದೆ ಇಂದು ನಾವೆತ್ತ ಈ ಸ್ವಾತಂತ್ರ್ಯವನ್ನು ಕೊಂಡೊಯ್ಯುತ್ತೇವೆ...

ಎನ್ ಎಂ ಪಿ ಯು ಕಾಲೇಜು ಅರಂತೋಡಿನಲ್ಲಿ ಯೂತ್ ರೆಡ್ ಕ್ರಾಸ್ ಘಟಕ ಉದ್ಘಾಟನೆ

ಇಂಡಿಯನ್ ರೆಡ್ ಕ್ರಾಸ್ ಸಂಸ್ಥೆಯ ಆಶ್ರಯದಲ್ಲಿ ಪದವಿ ಪೂರ್ವ ಶಿಕ್ಷಣ ಇಲಾಖೆ‌ ಬೆಂಗಳೂರು ಇವರ ವತಿಯಿಂದ ನಡೆದ ಅರಂತೋಡು ನೆಹರು ಸ್ಮಾರಕ ಪದವಿ ಪೂರ್ವ ಕಾಲೇಜು ಮತ್ತು ಪ್ರೌಢಶಾಲೆ ವಿಭಾಗದ ಯೂತ್ ರೆಡ್ ಕ್ರಾಸ್ ಘಟಕ ಆ.12 ರಂದು ಉದ್ಘಾಟನೆಗೊಂಡಿತು.ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸುಳ್ಯ ತಾಲೂಕಿನ ಸಭಾಪತಿ ಪಿ.ಬಿ ಸುಧಾಕರ್ ರೈ ಕಾರ್ಯಕ್ರಮವನ್ನು ಉದ್ಘಾಟಿಸಿ...

ದೇಶಭಕ್ತಿ ಗೀತೆ ಗಾಯನ ಅಭಿಯಾನದ ಸಮಾರೋಪ ಮತ್ತು ಸನ್ಮಾನ ಸಮಾರಂಭ

ಸುಳ್ಯ ತಾಲೂಕಿನ ಕನ್ನಡ ಸಾಹಿತ್ಯ ಪರಿಷತ್ತು ಮತ್ತು ಭಾವನಾ ಸುಗಮ ಸಂಗೀತ ಬಳಗ ಸುಳ್ಯ ಇವರ ಆಶ್ರಯದಲ್ಲಿ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ತಾಲೂಕಿನ ವಿವಿಧ ವಿದ್ಯಾಲಯಗಳಲ್ಲಿ ನಡೆಯುತ್ತಿರುವ ದೇಶಭಕ್ತಿ ಗೀತೆ ಗಾಯನ ಅಭಿಯಾನದ ಸಮಾರೋಪ ಮತ್ತು ಸನ್ಮಾನ ಸಮಾರಂಭ ಸರಕಾರಿ ಪ್ರೌಢಶಾಲೆ ಎಲಿಮಲೆಯಲ್ಲಿ ನಡೆಯಿತು. ಸಮಾರಂಭದ ಅಧ್ಯಕ್ಷತೆಯನ್ನು  ವಹಿಸಿದ ಸುಳ್ಯ ತಾಲೂಕು ಕನ್ನಡ ಸಾಹಿತ್ಯ...

ಅಜ್ಜಾವರ: ಆಟಿ ಆಚರಣೆ ಕಾರ್ಯಕ್ರಮ.

ಅಜ್ಜಾವರದ ಧನಲಕ್ಷ್ಮೀ ಮಹಿಳಾ ಮಂಡಲದ ಆಶ್ರಯದಲ್ಲಿ ಇತ್ತೀಚೆಗೆ ಆಟಿ ಆಚರಣೆ ಕಾರ್ಯಕ್ರಮ ಜರಗಿತು.ಕಾರ್ಯಕ್ರಮದ ಉದ್ಘಾಟನೆಯನ್ನು ಅಜ್ಞಾವರ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಶ್ರೀಮತಿ ಸತ್ಯವತಿ ಬಸವನಪಾದೆ ರವರು ಚೆನ್ನಮಣೆ ಆಡುವುದರ ಮೂಲಕ ನೆರವೇರಿಸಿದರು. ಸಭಾಧ್ಯಕ್ಷತೆಯನ್ನು ಧನಲಕ್ಷ್ಮಿ ಮಹಿಳಾ ಮಂಡಲದ ಅಧ್ಯಕ್ಷೆ ಶ್ರೀಮತಿ ಶಶ್ಮಿಭಟ್ ವಹಿಸಿದ್ದರು. ವೇದಿಕೆಯಲ್ಲಿ ಶ್ರೀ ಮಹಿಷಮರ್ದಿನಿ ದೇವಸ್ಥಾನದ ಧರ್ಮದರ್ಶಿ ಎ ಭಾಸ್ಕರ ರಾವ್ ಬಯಂಬು,...
Loading posts...

All posts loaded

No more posts

error: Content is protected !!