- Tuesday
- May 6th, 2025

ಮುರುಳ್ಯದ ಕು. ರಸಿಕ ಅಭಿನಯನದ ಶ್ರೀರಕ್ಷೆ ಬಾಂಧವ್ಯದ ತೋಳಿನಲ್ಲಿ ಎಂಬ ಅಣ್ಣ ತಂಗಿಯ ಸಂಬಂಧವನ್ನು ಸಾರುವ ಕನ್ನಡ ಆಲ್ಬಮ್ ಸಾಂಗ್ ನ ಪೋಸ್ಟರ್ ವಿಟ್ಲ ಶ್ರಿ ಪಂಚಲಿಂಗೇಶ್ವರ ಸನ್ನಿದಿಯಲ್ಲಿ ಕೃಷ್ಣಯ್ಯ ಕೆ ಅರಮನೆ ವಿಟ್ಲ ಇವರ ಮಾರ್ಗದರ್ಶನದಲ್ಲಿ ಬಿಡುಗಡೆಗೊಂಡಿತು. ಕಾರ್ತಿಕ್ ಕುಮಾರ್ ಇವರ ಕಥೆ ಹಾಗೂ ನಿರ್ದೇಶನದಲ್ಲಿ ಮೂಡಿಬಂದಿರುವ ಈ ಸಾಂಗ್ ಗೆ ಅಚಲ್ ವಿಟ್ಲ...

ಆ.07 ರಂದು ನಡುಗಲ್ಲು ಶಾಲೆಯ ಹತ್ತಿರದಿಂದ ಅಂಬೆಕಲ್ಲು, ಹಲ್ಗುಜಿ, ಕಲ್ಲಾಜೆಯವರೆಗೆ ವಿದ್ಯುತ್ ಲೈನ್ ಗೆ ತಾಗುವ ಗೆಲ್ಲು ಕಡಿಯುವ ಮೂಲಕ ಶ್ರಮದಾನ ಮಾಡಲಾಯಿತು. ಊರಿನವರು ಈ ಶ್ರಮದಾನದಲ್ಲಿ ಭಾಗವಹಿಸಿದ್ದರು. ಹಾಗೂ ಮೆಸ್ಕಾಂ ನವರು ಸಹಕರಿಸಿದರು. ವರದಿ :- ಉಲ್ಲಾಸ್ ಕಜ್ಜೋಡಿ

ಮಾನಸ ಮಹಿಳಾ ಮಂಡಲದ ವಾರ್ಷಿಕ ಮಹಾಸಭೆ ಮತ್ತು ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭವು ಆ.07 ರಂದು ಜಟ್ಟಿಪಳ್ಳದ ಯುವ ಸದನದಲ್ಲಿ ಜರುಗಿತು. ನಗರ ಪಂಚಾಯತ್ ಉಪಾಧ್ಯಕ್ಷೆ ಸರೋಜಿನಿ ಪುರುಷೋತ್ತಮ ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಮುಖ್ಯ ಅತಿಥಿಗಳಾಗಿ ಕೆವಿಜಿ ಕಾನೂನು ಮಹಾವಿದ್ಯಾಲಯದ ಉಪನ್ಯಾಸಕಿ ಅರ್ಚನಾ ಆರ್ ರೈ ಆಗಮಿಸಿ ಪ್ರಮಾಣ ವಚನ ಭೋದಿಸಿದರು. ಮಹಿಳಾ...

ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣದಲ್ಲಿ ಮತ್ತೆ ಇಬ್ಬರು ಆರೋಪಿಗಳನ್ನು ಬಂಧಿಸಲಾಗಿದ್ದು ಬಂಧಿತರ ಸಂಖ್ಯೆ ಆರಕ್ಕೇರಿದೆ.ಸುಳ್ಯದ ನಾವೂರು ಬಳಿಯ ನಿವಾಸಿ ಆಬಿದ್ (22) ಹಾಗೂ ಬೆಳ್ಳಾರೆ ಗೌರಿ ಹೊಳೆ ನಿವಾಸಿ ನೌಫಲ್ (28) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.

ಅರಂತೋಡು ಮರ್ಕಂಜ ಎಲಿಮಲೆ ರಸ್ತೆಯಲ್ಲಿ ವೈ.ಎಂ.ಕೆ.ಚಡಾವು ಬಳಿ ಅಡ್ತಲೆ ನಿವಾಸಿಗಳು ಅಳವಡಿಸಿದ್ದ ಚುನಾವಣಾ ಬಹಿಷ್ಕಾರದ ಬ್ಯಾನರನ್ನು ಕಿಡಿಗೇಡಿಗಳು ನದಿಗೆ ಎಸೆದಿದ್ದರು. ಅಂದೇ ಮುಖ್ಯಮಂತ್ರಿಗಳು ಅದೇ ರಸ್ತೆಯಲ್ಲಿ ಸುಳ್ಯಕ್ಕೆ ಬರುವವರಿದ್ದರು. ಈ ಹಿನ್ನೆಲೆಯಲ್ಲಿ ಕಿಡಿಗೇಡಿಗಳು ಬ್ಯಾನರ್ ತೆಗಿದಿದ್ದಾರೆಂದು ಖಂಡಿಸಿ ಅಡ್ತಲೆಯ ನಾಗರಿಕರು ಬ್ಯಾನರ್ ಕಿತ್ತೆಸೆದವರಿಗೆ ಶಿಕ್ಷೆ ನೀಡುವಂತೆ ದೈವದ ಮೊರೆ ಹೋಗಿದ್ದರು. ಆ.7 ರಂದು ಪುನಃ ರಸ್ತೆಯ...

ಕಳೆದ ಕೆಲವು ದಿನಗಳಿಂದ ಹರಿಹರ ಪಲ್ಲತ್ತಡ್ಕ, ಕೊಲ್ಲಮೊಗ್ರು, ಕಲ್ಮಕಾರು, ಬಾಳುಗೋಡು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದಾಗಿ ಭಾರೀ ಹಾನಿಗಳಾಗುತ್ತಿರುವ ಘಟನೆಗಳು ಮುಂದುವರಿದಿವೆ. ಈ ಸಂದರ್ಭದಲ್ಲಿ ವಿವಿಧ ಸಂಘ ಸಂಸ್ಥೆಗಳು ಹಾಗೂ ಸ್ಥಳಿಯರು ಸಂಕಷ್ಟಕ್ಕೆ ಸಿಲುಕಿದ ಜನರಿಗೆ ನೆರವಾಗುವ ಕಾರ್ಯ ಮಾಡುತ್ತಿದ್ದು, ವಿವಿಧ ಸಂಘ ಸಂಸ್ಥೆಗಳು ಹಾಗೂ ಸ್ಥಳಿಯರ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ...

ಮರಾಟಿ ಸಮಾಜ ಸೇವಾ ಸಂಘ ಕಲ್ಮಡ್ಕ ಇದರ ವಾರ್ಷಿಕ ಮಹಾಸಭೆ ಆ. 07ರಂದು ಸಂಘದ ಅಧ್ಯಕ್ಷರಾದ ತಿಮ್ಮಪ್ಪ ನಾಯ್ಕ ಉಡುವೆಕೋಡಿಯವರ ಅಧ್ಯಕ್ಷತೆಯಲ್ಲಿ ನಡೆಯಿತು.ಮರಾಟಿ ಸಮಾಜ ಸೇವಾ ಸಂಘದ ಕಾರ್ಯದರ್ಶಿ ತೀರ್ಥಾನಂದ ಕಲ್ಮಡ್ಕ ಲೆಕ್ಕಪತ್ರ ಮತ್ತು ವಾರ್ಷಿಕ ವರದಿಯನ್ನು ಮಂಡಿಸಿದರು.ನಂತರ ಸಂಘದ ಕಾರ್ಯಚಟುವಟಿಕೆಗಳ ಬಗ್ಗೆ ಸಮಾಲೋಚನೆ ನಡೆಸಲಾಯಿತು. ವೆಂಕಪ್ಪ ನಾಯ್ಕ ಮಂಞನಕಾನ ಮರಾಟಿ ಸಮುದಾಯದ ಬಗ್ಗೆ ಮತ್ತು...

ಸುಳ್ಯ ತಾಲೂಕಿನ ವಿವಿಧ ಕಡೆಗಳಲ್ಲಿ ಭಾರೀ ಮಳೆಗೆ ಹಾನಿ ಸಂಭವಿಸಿದ್ದು, ವಿವಿಧ ಸಂಘ ಸಂಸ್ಥೆಗಳ ಜೊತೆಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರುಗಳು ಶ್ರಮಸೇವೆಯಲ್ಲಿ ನಿರತರಾಗಿದ್ದಾರೆ. ಶ್ರಮಸೇವೆಯ ಸಂದರ್ಭದಲ್ಲಿ ಸುಬ್ರಹ್ಮಣ್ಯ ವಲಯ ವಿಪತ್ತು ನಿರ್ವಹಣಾ ಘಟಕದ ಸದಸ್ಯರಾದ ಕುಶಾಲಪ್ಪ ಜಾಲುಮನೆ ಅವರ ಕಾಲಿಗೆ ಮರ ಕೊಯ್ಯುವ ಮಿಷನ್...

ಕವಿ “ನಾ ಕೃ ಸತ್ಯನಾರಾಯಣ” ಅವರು ಬರೆದ ಸುಂದರ ಭಾವಗೀತೆ “ಸ್ನೇಹ ಅತಿ ಮಧುರ , ಸ್ನೇಹ ಅದು ಅಮರ……” ಎಂಬ ಹಾಡಿನ ಸಾಲುಗಳನ್ನು ನೆನಪಿಸಿಕೊಳ್ಳುತ್ತಾ,ಅಗೋಸ್ತು ತಿಂಗಳ ಮೊದಲ ಭಾನುವಾರ ಬಂತೆಂದರೆ ನೆನೆಪಿಸಬೇಕಾದ ವಿಷಯವೆಂದರೆ ‘ “ಸ್ನೇಹದಿನ”. ಹ್ಯಾಪಿ ಫ್ರೆಂಢ್ ಶಿಪ್ ಡೇ ಎಂದು ಕೈ ಕುಲುಕುವ ಮಾತ್ರಕ್ಕೆ ಇಂದು ಸ್ನೇಹ-ಸಂಬಂಧ ನಿಂತಿದೆ. ಪ್ರತಿವರ್ಷ ಅಗೋಸ್ತು...

ಮರ್ಕಂಜ ಗ್ರಾಮದ ಬಾಣೂರು ಜಯಾನಂದ ರವರ ಕೊಟ್ಟಿಗೆ ಬಿದ್ದು ಅಪಾರ ನಷ್ಟ ಸಂಭವಿಸಿದ ಘಟನೆ ಇಂದು (ಆ.7) ನಡೆದಿದೆ. ದೈನಂದಿನ ಕೆಲಸದಲ್ಲಿ ನಿರತರಾಗಿದ್ದ ವೇಳೆ ಮಾಡಿನಿಂದ ಹಂಚು ಬೀಳಲು ಆರಂಭಿಸಿದಾಗ ಅಪಾಯ ಅರಿತ ಜಯಾನಂದ ರವರು ಹೊರಗೆ ಓಡಿ ಪ್ರಾಣಪಾಯದಿಂದ ಪಾರಾಗಿದ್ದಾರೆ. ಕೊಟ್ಟಿಗೆಯಲ್ಲಿದ ವಸ್ತುಗಳಿಗೆ ಹಾನಿಯಾಗಿ ಅಪಾರ ನಷ್ಟ ಸಂಭವಿಸಿದೆ. ಕೊಟ್ಟಿಗೆಯಲ್ಲಿದ್ದ ಹಸುಗಳುಗಳನ್ನು ತೋಟದಲ್ಲಿ ಮೇಯಲು...

All posts loaded
No more posts