- Saturday
- April 19th, 2025

ಮುರುಳ್ಯ ಎಣ್ಣೂರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಕ್ಕೆ ಡಿ.ಸಿ.ಸಿ ಬ್ಯಾಂಕಿನಿಂದ 2021-22ನೇ ಸಾಲಿನ ಪ್ರೋತ್ಸಾಹಕ ಪ್ರಶಸ್ತಿ ಲಭಿಸಿದೆ. ಸಂಘದ ಅಧ್ಯಕ್ಷ ವಸಂತ ಹುದೇರಿ, ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ರೈ ಎನ್ ಪ್ರಶಸ್ತಿ ಸ್ವೀಕರಿಸಿದರು. ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ. ಎಂ.ಎನ್. ರಾಜೇಂದ್ರ ಕುಮಾರ್, ನಿರ್ದೇಶಕ ಶಶಿಕುಮಾರ್ ರೈ ಬಾಲ್ಯೂಟ್ಟು, ಸಹಕಾರಿ...

ಕಾಯರ್ತೋಡಿ ಶ್ರೀನಿಧಿ ಮಹಿಳಾ ಮಂಡಲದ ಮಹಾಸಭೆ ಆ. 20 ರಂದು ನಡೆಯಿತು. ಮಹಿಳಾ ಮಂಡಲದ ಅಧ್ಯಕ್ಷೆ ಮಹಿಳಾ ಮಂಡಲದ ಅಧ್ಯಕ್ಷೆ ಹೇಮ ವೇಣುಗೋಪಾಲ್ ರಕಾಯರ್ತೋಡಿ ಅಧ್ಯಕ್ಷತೆ ವಹಿಸಿದ್ದರು. ಈ ಸಂದರ್ಭದಲ್ಲಿ 2022-23ನೇ ಸಾಲಿನ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು. ಗೌರವಾಧ್ಯಕ್ಷರಾಗಿ ಹೇಮ್ ವೇಣುಗೋಪಾಲ್, ಅಧ್ಯಕ್ಷರಾಗಿ ಶೃತಿ ಮಂಜುನಾಥ, ಕಾರ್ಯದರ್ಶಿಯಾಗಿ ವನಿತಾ ಸಂತೋಷ್, ಕೋಶಾಧಿಕಾರಿಯಾಗಿ ಲತಾ ರಾಧಾಕೃಷ್ಣ...

ಐವರ್ನಾಡು ಗ್ರಾಮ ಪಂಚಾಯತ್ ಸಭಾ ಭವನದಲ್ಲಿ ಆ.22 ರಂದು ಐವರ್ನಾಡು ಗ್ರಾಮ ಪಂಚಾಯತ್ ವ್ಯಾಪ್ತಿಗೆ ಒಳಪಟ್ಟ ವಿಕಲಚೇತನರ ಸಂಜೀವಿನಿ ಸಂಘಗಳ ಉದ್ಘಾಟನೆಯನ್ನು ಸಮಗ್ರ ಸಂಜೀವಿನಿ ಒಕ್ಕೂಟದ ಅಧ್ಯಕ್ಷರು ಹಾಗೂ ಸಭಾಧ್ಯಕ್ಷರಾದ ಶ್ರೀಮತಿ ರೇವತಿ ಬೋಳುಗುಡ್ಡೆ ದೀಪ ಬೆಳಗಿಸಿ ಸಂಘ ಉದ್ಘಾಟನೆ ಮಾಡಿದರು. ಸುಳ್ಯ ತಾಲೂಕು ಸಂಜೀವಿನಿ ಸಂಘಗಳ ಮೇಲ್ವಿಚಾರಕ ಮಹೇಶ್ ಸಂಜೀವಿನಿ ಸಂಘದ ಮಹತ್ವದ ಬಗ್ಗೆ...

ಹಲವಾರು ವರ್ಷಗಳಿಂದ ಬೆಂಗಳೂರಿನ ಪ್ರಮುಖ ಸಾರಿಗೆ ಸಂಸ್ಥೆಯಾಗಿರುವ ಬಿಎಂಟಿಸಿ ಅಪಘಾತ ರಹಿತ ಚಾಲಕರನ್ನು ಗುರುತಿಸಿ ಗೌರವಿಸಿದೆ. ಬೆಂಗಳೂರಿನಲ್ಲಿ ಇವರು ಬಸ್ ಚಾಲಕರಾಗಿ ನಿಸ್ವಾರ್ಥ ಸೇವೆ ಸಲ್ಲಿಸಿ ವೃತ್ತಿ ಜೀವನದಲ್ಲಿ ಯಾವುದೇ ಅಪಘಾತಗಳಿಗೆ ಆಸ್ಪದ ನೀಡದೆ ಸುರಕ್ಷಿತವಾಗಿ ಬಸ್ ಚಾಲನೆಯನ್ನು ನಿರ್ವಹಿಸಿದಕ್ಕೆ ಬಿ.ಎಂ.ಟಿ.ಸಿ. ಅಪಘಾತ ರಹಿತ ಚಾಲಕರೆಂದು ಗುರುತಿಸಿ ಗೂನಡ್ಕದ ಎಂ.ಎ.ಬಾಷ ರವರಿಗೆ ಬೆಳ್ಳಿ ಪದಕ ನೀಡಿ...

ವೀರಮಾರುತಿ ಸ್ಪೋರ್ಟ್ಸ್ ಕ್ಲಬ್ ಗುತ್ತಿಗಾರು ಇದರ ಮಹಾಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ಆ.28 ರಂದು ನಡೆಯಿತು. ಅಧ್ಯಕ್ಷರಾಗಿ ಅಚ್ಚುತ ಗುತ್ತಿಗಾರು, ಪ್ರಧಾನ ಕಾರ್ಯದರ್ಶಿ ಲೋಹಿತ್ ಚೈಪೆ, ಗೌರವಾಧ್ಯಕ್ಷರಾಗಿ ಮಾಧವ ಎರ್ದಡ್ಕ, ಉಪಾಧ್ಯಕ್ಷರಾಗಿ ಸಚಿನ್ ಮೊಟ್ಟೆ, ಜತೆ ಕಾರ್ಯದರ್ಶಿ ಜಯಪ್ರಕಾಶ್ ಬಾಕಿಲ, ಕೋಶಾಧಿಕಾರಿಯಾಗಿ. ವಿನ್ಯಾಸ್ ಕೊಚ್ಚಿ ಆಯ್ಕೆಯಾಗಿದ್ದಾರೆ. .

ತಾಲೂಕಿನಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡ ಕುಟುಂಬಗಳಿಗೆ ಪ್ರಾಕೃತಿಕ ವಿಕೋಪ ಯೋಜನೆಯಡಿ ಹೊಸ ಮನೆ ನಿರ್ಮಾಣ ಮಾಡಲು ಸರಕಾರದಿಂದ ಒದಗಿಸಲಾಗುವ ರೂ.5 ಲಕ್ಷ ಮೊತ್ತದ ಪರಿಹಾರ ಧನದ ಮೊದಲ ಹಂತದ ರೂ.95,100 ಮೊತ್ತದ ಚೆಕ್ ನ್ನು 7 ಜನ ಫಲಾನುಭವಿಗಳಿಗೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು...

ಡಿ.ಜೆ ಮೀನಾಕ್ಷಿ ದೇವಶ್ಯ ನಿಧನ ಗುತ್ತಿಗಾರು ಗ್ರಾಮದ ದಿ.ಜಿನ್ನಪ್ಪ ಗೌಡರ ಪತ್ನಿ ಡಿ.ಜೆ ಮೀನಾಕ್ಷಿ ದೇವಶ್ಯ ಅವರು ಅಲ್ಪಕಾಲದ ಅಸೌಖ್ಯದಿಂದ ಇಂದು(ಆ.27) ನಿಧನರಾಧರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪುತ್ರರಾದ ರೋಹಿತಾಶ್ವ ದೇವಶ್ಯ, ಜನಾರ್ಧನ ದೇವಶ್ಯ, ಚಂದ್ರಶೇಖರ ದೇವಶ್ಯ ಹಾಗೂ ಪುತ್ರಿಯರಾದ ಭಾನುಮತಿ ಗಂಗಾಧರ ಬಾಳಿಕಳ ಹಾಗೂ ತ್ರಿವೇಣಿ ಯಶವಂತ ಕೆಳಗಿನಮನೆ ಮತ್ತು ಕುಟುಂಬಸ್ಥರು...

ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು ಸುಳ್ಯ ತಾಲೂಕು ಘಟಕದ ವತಿಯಿಂದ ಆ.12 ರಂದು ಪಿತಾಮಹ ಡಾ.ಎಸ್.ಆರ್.ರಂಗನಾಥನ್ ರವರ ಜನ್ಮದಿನೋತ್ಸವದ ಅಂಗವಾಗಿ ನಡೆದ ಸ್ಪರ್ಧಾ ವಿಜೇತರಿಗೆ ಅಭಿನಂದನಾ ಕಾರ್ಯಕ್ರಮ ಮತ್ತು ಪುಸ್ತಕ ಪ್ರದರ್ಶನ ಕಾರ್ಯಕ್ರಮ ಆ.30 ರಂದು ಗುತ್ತಿಗಾರು ಗ್ರಾಮ ಪಂಚಾಯತ್ ಗ್ರಂಥಾಲಯ...

ಐನೆಕಿದು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಆ.25 ರಂದು ಕ್ಲಸ್ಟರ್ ಮಟ್ಟದ ಪ್ರತಿಭಾ ಕಾರಂಜಿ ನಡೆಯಿತು.ಇಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹರಿಹರ ಪಲ್ಲತ್ತಡ್ಕದ ವಿದ್ಯಾರ್ಥಿಗಳು ಹಿರಿಯ ವಿಭಾಗದಲ್ಲಿ ಪ್ರಥಮ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದ್ದಾರೆ. ಹಿರಿಯ ವಿಭಾಗದಲ್ಲಿ ಕಥೆ ಹೇಳುವುದರಲ್ಲಿ ಪ್ರಜ್ಞಾ.ಪಿ.ಎಸ್ ಪ್ರಥಮ, ಕ್ಲೇ ಮಾಡಲಿಂಗ್ ನಲ್ಲಿ ಯನ್ವಿತ್ ಪ್ರಥಮ, ಇಂಗ್ಲಿಷ್ ಕಂಠಪಾಠದಲ್ಲಿ ಕವನ ಡಿ.ಯನ್...

All posts loaded
No more posts