Ad Widget

ಬೆಳ್ಳಾರೆ : ಹಿಂದೂ ಕಾರ್ಯಕರ್ತನಿಗೆ ಕೊಲೆ ಬೆದರಿಕೆ – ಆರೋಪಿಯನ್ನು ಬಂಧಿಸುವಂತೆ ಒತ್ತಾಯಿಸಿ ಠಾಣೆ ಮುಂದೆ ಜಮಾಯಿಸಿದ ಕಾರ್ಯಕರ್ತರು

ಹಿಂದೂ ಸಂಘಟನೆಯ ಕಾರ್ಯಕರ್ತ ಹಾಗೂ ಬೆಳ್ಳಾರೆಯ ಅಮ್ಮುರೈ ಕಾಂಪ್ಲೆಕ್ಸ್‌ನ ಮ್ಯಾನೇಜರ್ ಪ್ರಶಾಂತ್ ರೈವರಿಗೆ ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಪ್ರಶಾಂತ್ ಕೊಲೆ ಆರೋಪಿ ಶಫೀಕ್ ನ ತಮ್ಮ ಸಫ್ರಿದ್ ಜೀವ ಬೆದರಿಕೆ ಒಡ್ಡಿರುವುದಾಗಿ ಸಂಘಟನೆಯ ಕಾರ್ಯಕರ್ತರು ಆರೋಪಿಸಿದ್ದಾರೆ. ಈತ ಪ್ರವೀಣ್ ನೆಟ್ಟಾರ್ ಅವರ ಕೋಳಿ ಫಾರ್ಮ್ ನಲ್ಲಿ ಕ್ಲಿನಿಂಗ್ ಕೆಲಸ ಮಾಡುತ್ತಿದ್ದ ಇಬ್ರಾಹಿಂ ಎಂಬವರ ಪುತ್ರ. ಇಂದು ಸಂಜೆ ಪ್ರಶಾಂತ್ ರೈಯವರಿಗೆ ಕರೆ ಮಾಡಿರುವ ಸಫ್ರಿದ್ ಅವಾಚ್ಯ ಶಬ್ದಗಳಿಂದ ನಿಂದಿಸಿ, ಕೊಲೆ ಬೆದರಿಕೆ ಹಾಕಿರುವನೆಂದೂ ಆರೋಪಿಸಲಾಗಿದೆ. ಈ ಬಗೆಗಿನ ಆಡಿಯೋ ರೆಕಾರ್ಡ್ ಪ್ರಶಾಂತ್ ಬಳಿ ಇದೆ ಎನ್ನಲಾಗುತ್ತಿದೆ. ಪ್ರಶಾಂತ್ ಅವರು ದೂರು ನೀಡಲು ಠಾಣೆಗೆ ತೆರಳಿರುವುದಾಗಿ ತಿಳಿದು ಬಂದಿದೆ. ಈ ಬಗ್ಗೆ ಮಾಹಿತಿ ತಿಳಿಯುತ್ತಲೇ ನೂರಾರು ಮಂದಿ ಹಿಂದೂ ಸಂಘಟನೆಯ ಕಾರ್ಯಕರ್ತರು ಠಾಣೆ ಮುಂದೆ ಜಮಾಯಿಸಿದ್ದಾರೆ. ಸಫ್ರೀದ್ ನನ್ನು ಕೂಡಲೇ ಬಂಧಿಸುವಂತೆ ಅಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಬೆಳ್ಳಾರೆ ಮತ್ತೆ ಉದ್ವಿಗ್ನ ಪರಿಸ್ಥಿತಿಯತ್ತ ಮುಖಮಾಡಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!