Ad Widget

ಸ್ವಾತಂತ್ರ್ಯದ ಉಳಿವಿಗೆ ನಿರಂತರ ಜಾಗೃತಿ ಅಗತ್ಯ – ಡಾ. ಪ್ರಭಾಕರ ಭಟ್ ಕಲ್ಲಡ್ಕ

. . . . . . . . .

. . . . . . .

“ಸಂಸ್ಕೃತಿ ಎಂದರೆ ಏನೆಂದು ತಿಳಿಯದಿದ್ದ ಬ್ರಿಟಿಷರು ಭಾರತೀಯರಿಗೆ ನಾಗರಿಕತೆಯ ಪಾಠವನ್ನು ಹೇಳಿ, ಭಾರತೀಯರ ಬುದ್ಧಿವಂತಿಕೆಯನ್ನು ಸಂಪೂರ್ಣವಾಗಿ ಆಂಗ್ಲಮಯ ಮಾಡಲು ಹೊರಟಿದ್ದರು. ಆದರೆ ಯುರೋಪಿಗಿಂತ ಮೊದಲೇ ಭಾರತೀಯರಲ್ಲಿ ಪರಿಶುದ್ಧವಾದ ಸಂಸ್ಕೃತಿ, ಸಂಸ್ಕಾರ, ನಾಗರಿಕತೆ ಮತ್ತು ಸುಜ್ಞಾನವಿತ್ತು. ಭಾರತೀಯರ ಸಜ್ಜನಿಕೆಯೇ ಅವರಿಗೆ ಮುಳುವಾಯಿತು. ತಕ್ಕಡಿ ಹಿಡಿದು ವ್ಯಾಪಾರಕ್ಕೆ ಬಂದವರು ಭಾರತೀಯರನ್ನು ತಮ್ಮ ತೆಕ್ಕೆಗೆ ತೆಗೆದುಕೊಂಡು ಆಳತೊಡಗಿದಾಗ ದೇಶದ ಮೂಲೆಮೂಲೆಗಳಲ್ಲಿ ಸ್ವಾತಂತ್ರ್ಯದ ಕಹಳೆ ಮೊಳಗಿತು. ಸ್ವಂತ ಸುಖವನ್ನು ನೋಡದೆ ಹೋರಾಟಕ್ಕೆ ಇಳಿದ ಅದೆಷ್ಟೋ ವೀರರ ಕಥೆಯೇ ನಮಗೆ ಗೊತ್ತಿಲ್ಲ. ಅಂತಹ ಅಪ್ರಕಾಶಿತ ಹೋರಾಟಗಾರರ ಕಥೆಯನ್ನೇ ಈ ಕೃತಿಯಲ್ಲಿ ದಾಮ್ಲೆಯವರು ಸಂಗ್ರಹಿಸಿ ಕೊಟ್ಟಿದ್ದಾರೆ. ಸ್ನೇಹ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಮಾಡಿರುವ ಈ ಒಳ್ಳೆಯ ಕೆಲಸಕ್ಕಾಗಿ ಅವರನ್ನು ಅಭಿನಂದಿಸುತ್ತೇನೆ. ಏನಿದ್ದರೂ ಸ್ವಾತಂತ್ರ್ಯವೆಂಬುದು ಒಬ್ಬ ವ್ಯಕ್ತಿಗಾಗಲೀ ಒಂದು ಪಕ್ಷಕ್ಕಾಗಲೀ ದೊರಕಿದ್ದಲ್ಲ. ಅದು ಸಮಗ್ರ ಭಾರತವೇ ಗಳಿಸಿದ ಪ್ರಜ್ಞೆ. ಅದನ್ನು ಉಳಿಸಿಕೊಳ್ಳುವ ಜಾಗೃತಿ ನಮ್ಮಲ್ಲಿರಬೇಕು ಎಂಬುದಾಗಿ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆಗಳ ಅಧ್ಯಕ್ಷ ಡಾ. ಪ್ರಭಾಕರ ಭಟ್ ರವರು ಹೇಳಿದರು ಅವರು ದಿನಾಂಕ 20 10 2022 ರಂದು ಸ್ನೇಹ ಶಿಕ್ಷಣ ಸಂಸ್ಥೆಯಲ್ಲಿ ನಡೆದ 75 ಅಪ್ರಕಾಶಿತ ಸ್ವಾತಂತ್ರ್ಯ ಹೋರಾಟಗಾರರ ಸ್ಮರಣೆ ಕೃತಿಯನ್ನು ಬಿಡುಗಡೆಗೊಳಿಸಿ ಮಾತನಾಡಿದರು. ಕಾರ್ಯಕ್ರಮದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಡಾ. ಗಿರೀಶ್ ಭಾರದ್ವಾಜ್ ಇವರು ಮಾತನಾಡಿ “ಸ್ವಾತಂತ್ರ್ಯದ ಅಮೃತ ಮಹೋತ್ಸವದ ಸಂದರ್ಭದಲ್ಲಿ ವಿಶೇಷವಾಗಿ ಹೊರತರಲಾದ ಕೃತಿ ಅಪ್ರಕಾಶಿತ ಸ್ವಾತಂತ್ರ್ಯ ಹೋರಾಟಗಾರರಿಗೆ ನೀಡಿದ ಶ್ರದ್ಧಾಂಜಲಿಯಾಗಿದೆ. ಇನ್ನು ಅದೆಷ್ಟೋ ಕಾಲಕ್ಕೆ ಅವರ ಸ್ಮರಣೆ ಜಾಗೃತವಾಗಿರುವಂತೆ ಈ ಕೃತಿ ಉಪಯುಕ್ತವಾಗಿದೆ” ಎಂದು ಹೇಳಿದರು.

ಆರಂಭದಲ್ಲಿ ವಿದ್ಯಾರ್ಥಿನಿಯರಿಂದ ಪ್ರಾರ್ಥನೆಯ ಬಳಿಕ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಡಾ. ಚಂದ್ರಶೇಖರ ದಾಮ್ಲೆಯವರು ಗಣ್ಯ ಅತಿಥಿಗಳನ್ನು ಸ್ವಾಗತಿಸಿದರು. ಸಂಸ್ಥೆಯ ಮುಖ್ಯೋಪಾಧ್ಯಾಯನಿ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿ 75 ಸ್ವಾತಂತ್ರ್ಯ ಸೇನಾನಿಗಳ ಸರಣಿ ಸ್ಮರಣೆ ಕಾರ್ಯಕ್ರಮದ ಹಾಗೂ ಪ್ರಸ್ತುತ ಕೃತಿರಚನೆಯ ಉದ್ದೇಶವನ್ನು ತಿಳಿಸಿದರು.

ಈ ಸಂದರ್ಭದಲ್ಲಿ ಶ್ರೀಮತಿ ಕಮಲ ಪ್ರಭಾಕರ ಭಟ್, ಎನ್. ಏ ರಾಮಚಂದ್ರ, ಎಸ್. ಎನ್ ಮನ್ಮಥ, ಶ್ರೀಮತಿ ಭಾಗೀರಥಿ, ಶ್ರೀಮತಿ ಯಶೋಧ ರಾಮಚಂದ್ರ, ಶ್ರೀನಿವಾಸ್ ಉಬರಡ್ಕ, ಪಿಕೆ ಉಮೇಶ,ಡಾ. ಶ್ರೀ ಕೃಷ್ಣ ಭಟ್, ಡಾ. ವಿದ್ಯಾ ಶಾರದ, ಆಶಾ ಬೆಳ್ಳಾರೆ, ಸಂತೋಷ್ ಕುತ್ತಮೊಟ್ಟೆ, ಶಾಲಾ ಶಿಕ್ಷಕ ವೃಂದದವರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.
ಕಾರ್ಯಕ್ರಮದ ಕೊನೆಯಲ್ಲಿ ಶಿಕ್ಷಕ ದೇವಿಪ್ರಸಾದ ಜಿ. ಸಿ. ಕಾಯರ್ತೋಡಿ ಧನ್ಯವಾದವಿತ್ತರು. ಶಿಕ್ಷಕಿ ಶ್ರೀಮತಿ ಸವಿತಾ ಎಂ ನಿರೂಪಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading