Ad Widget

ಎನ್ಎಮ್ ಸಿ: ಅತಿಥಿ ಉಪನ್ಯಾಸ ಕಾರ್ಯಕ್ರಮ

ನೆಹರೂ ಮೆಮೋರಿಯಲ್ ಕಾಲೇಜು ಕುರುಂಜಿಭಾಗ್ ಸುಳ್ಯ ಇಲ್ಲಿನ ಭೌತಶಾಸ್ತ್ರ ಹಾಗೂ ಗಣಿತಶಾಸ್ತ್ರ ವಿಭಾಗದ ವತಿಯಿಂದ 28ರಂದು ಆಕಾಶ ಕಾಯದಲ್ಲಿ ಕಪ್ಪು ರಂಧ್ರದ ಕುರಿತು ಅತಿಥಿ ಉಪನ್ಯಾಸವು ನಡೆಯಿತು. ಈ ಸಮಾರಂಭದ ಅಧ್ಯಕ್ಷತೆಯನ್ನು ಪ್ರೊ ರುದ್ರಕುಮಾರ್.ಎಮ್.ಎಮ್ ಪ್ರಾಂಶುಪಾಲರು ಎನ್.ಎಮ್.ಸಿ ಸುಳ್ಯ ಇವರು ವಹಿಸಿದ್ದರು. ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಮ್.ಬಾಲಚಂದ್ರ ಗೌಡ ಇವರ ಮೊಮ್ಮಗನಾದ ವಿಹಾನ್ ದೊರೆ...

ಎನ್ ಎಂ‌‌ ಸಿ: ಇನ್ವೆಸ್ಟರ್ಸ್ ಅವಾರ್ನೆಸ್ ಕಾರ್ಯಾಗಾರ

ಸುಳ್ಯ: ನೆಹರು ಮೆಮೋರಿಯಲ್ ಕಾಲೇಜು ಸುಳ್ಯದ ಕಾಮರ್ಸ್ ಡಿಪಾರ್ಟ್‌ಮೆಂಟ್ ಮತ್ತು ಅಸೋಸಿಯೇಶನ್ ವತಿಯಿಂದ 'ಇನ್ವೆಸ್ಟರ್‍ಸ್ ಅವಾರ್ನೆಸ್'ನ ಬಗ್ಗೆ ಒಂದು ದಿನದ ಕಾರ್ಯಾಗಾರವು ಕಾಲೇಜಿನ ಸಭಾಂಗಣದಲ್ಲಿ . ಜ.23ರಂದು ನಡೆಯಿತು. ಕಾರ್ಯಾಗಾರವನ್ನು ಕಾಲೇಜಿನ ಶೈಕ್ಷಣಿಕ ನಿರ್ದೇಶಕರಾದ ಪ್ರೊ. ಬಾಲಚಂದ್ರ ಗೌಡರವರು ಉದ್ಘಾಟಿಸಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ರುದ್ರಕುಮಾರ್ ಎಂ.ಎಂ ರವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ಜರುಗಿತು. ವಾಣಿಜ್ಯ ಶಾಸ್ತ್ರ...
Ad Widget

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರಿನಲ್ಲಿ      ಗಣರಾಜ್ಯೋತ್ಸವ ಮತ್ತು ಪ್ರತಿಭಾದಿನ

ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಎಣ್ಮೂರು ಇಲ್ಲಿ ದಿನಾಂಕ 26.01.2023ನೇ ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮವನ್ನು ಮತ್ತು ಪ್ರತಿಭಾದಿನೋತ್ಸವ ಕಾರ್ಯಕ್ರಮವನ್ನು ವಿಜೃಂಭಣೆಯಿಂದ ಆಚರಿಸಲಾಯಿತು. 74ನೇ ಗಣರಾಜ್ಯೋತ್ಸವದ ಧ್ವಜಾರೋಹಣಹವನ್ನು ನಮ್ಮ ಶಾಲೆಯ ಎಸ್ಡಿಎಂಸಿ ಅಧ್ಯಕ್ಷರಾದ ಶ್ರೀಯುತ ಅಬ್ದುಲ್ ಶರೀಫ್ ನೆರವೇರಿಸಿದರು ಮಕ್ಕಳಿಂದ ಪಥ ಸಂಚಲನವು ನಡೆಯಿತು. ಸಭಾ ಕಾರ್ಯಕ್ರಮದಲ್ಲಿ ಊರಿನ ಗಣ್ಯರಾದ ಶ್ರೀಯುತ ಲೋಕನಾಥ್ ರೈ ಪಟ್ಟೆ, ರಘುನಾಥ...

ಅಯ್ಯನಕಟ್ಟೆ ಜಾತ್ರೋತ್ಸವ; ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ನೇಮ ನಡಾವಳಿ

ಇತಿಹಾಸ ಪ್ರಸಿದ್ಧ ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ನಡೆಯುತ್ತಿದ್ದು, ಇಂದು ಶ್ರೀ ಇಷ್ಟದೇವತಾ ಉಳ್ಳಾಕುಲು ದೈವದ ನೇಮ ನಡಾವಳಿ ನಡೆಯಿತು. ಇಂದು ಬೆಳಗ್ಗೆ ಮೂರುಕಲ್ಲಡ್ಕದಿಂದ ಶ್ರೀ ಇಷ್ಟದೇವತಾ ಉಳ್ಳಾಕುಲು, ಸಪರಿವಾರ ದೈವಗಳು ಹಾಗೂ ತೋಟದಮೂಲೆಯಿಂದ ರುದ್ರಚಾಮುಂಡಿ ದೈವಗಳ ಕಿರುವಾಲು ಹೊರಟು, ಕಳಂಜ ಗ್ರಾಮದ ಕಲ್ಲಮಾಡದಲ್ಲಿ ಶ್ರೀ ಉಳ್ಳಾಕುಲು ದೈವದ ಸಿರಿಮುಡಿ...

ಉಡುಪಿ : ಪರಶುರಾಮ ಥೀಮ್ ಪಾರ್ಕ್ ಉದ್ಘಾಟನೆ – ಸಚಿವ ಎಸ್ ಅಂಗಾರ ಭಾಗಿ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಬೈಲೂರಿನ ಉಮಿಕಲ್ ಬೆಟ್ಟದ ಮೇಲೆ ನಿರ್ಮಾಣವಾಗಿರುವ ತುಳುನಾಡಿನ ಸೃಷ್ಟಿಕರ್ತ ಪರಶುರಾಮನ ಮೂರ್ತಿಯನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಲೋಕಾರ್ಪಣೆಗೊಳಿಸಿದರು. ಕಾರ್ಯಕ್ರಮದಲ್ಲಿ ಬಂದರು, ಮೀನುಗಾರಿಕೆ, ಒಳನಾಡು ಜಲಸಾರಿಗೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್. ಅಂಗಾರ, ಇಂಧನ ಸಚಿವ ಹಾಗೂ ದ.ಕ.ಉಸ್ತುವಾರಿ ಸಚಿವ ಸುನಿಲ್ ಕುಮಾರ್ ಮತ್ತಿತರರು ಉಪಸ್ಥಿತರಿದ್ದರು.

ಬಂಟ್ವಾಳ : ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸನ್ಮಾನ

ಬಂಟ್ವಾಳ ಪುರಸಭೆಯ ಅಧ್ಯಕ್ಷರಾದ ಮಹಮ್ಮದ್ ಶರೀಫ್ ಹಾಗೂ ಬಂಟ್ವಾಳ ಪುರಸಭೆಯ ಸದಸ್ಯರಾದ ಸುಳ್ಯದ ಭಾರತ್ ಮೆಡಿಕಲ್ಸ್ ನಲ್ಲಿಕಾರ್ಯನಿರ್ವಹಿಸುತ್ತಿರುವ ಜಯರಾಮ್ ಎಂಬವರಿಗೆ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಸುಳ್ಯದಲ್ಲಿ ಸನ್ಮಾನಿಸಲಾಯಿತು  ಈ ಸಂದರ್ಭದಲ್ಲಿ ಮಾತನಾಡಿ ದ ಮಹಮ್ಮದ್ ಶರೀಫ್ ರಿಯಾಜ್ ನೇತೃತ್ವದ ಟ್ರಸ್ಟ್ ನ ಸಮಾಜ  ಸೇವೆ ಯುವಕರಿಗೆ ಅನುಕರಣೀಯ  ಅವರ  ಅರೋಗ್ಯ ಸೇವೆ, ನಿಗಮದ  ಮನೆ...

ಮುಸ್ಲಿಂ ಸೆಂಟ್ರಲ್ ಕಮಿಟಿಯ ಸಂಘಟನಾ ಕಾರ್ಯದರ್ಶಿಯಾಗಿ ಎಸ್ ಸಂಶುದ್ದೀನ್ ನೇಮಕ

ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳನ್ನು ಒಳಗೊಂಡ ಮುಸ್ಲಿಂ ಸೆಂಟ್ರಲ್ ಕಮಿಟಿ ಗೆ ಸಂಘಟನಾ ಕಾರ್ಯದರ್ಶಿಯನ್ನಾಗಿ ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷರು, ಕೆಪಿಸಿಸಿ ಅಲ್ಪಸಂಖ್ಯಾತ ಘಟಕದ ಮಾಜಿ ಕಾರ್ಯದರ್ಶಿ, ಕರ್ನಾಟಕ ರಾಜ್ಯ ವಕ್ಫ್ ಕೌನ್ಸಿಲ್ ಮಾಜಿ ಸದಸ್ಯ, ಎಸ್ ಸಂಶುದ್ದೀನ್ ರವರನ್ನು ನೇಮಕ ಮಾಡಲಾಗಿದೆ. ಮುಸ್ಲಿಂ ಸೆಂಟ್ರಲ್ ಕಮಿಟಿಯ ಅಧ್ಯಕ್ಷರಾದ, ಮಾಜಿ ವಿಧಾನ ಪರಿಷತ್...

ದೇವಚಳ್ಳ : ಜಲ ಜೀವನ್ ಮಿಷನ್ ವತಿಯಿಂದ ಜಾಗೃತಿ ಕಾರ್ಯಕ್ರಮ

ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ, ತಾಲೂಕು ಪಂಚಾಯತ್ ಸುಳ್ಯ, ಜಿಲ್ಲಾ ಪಂಚಾಯತ್, ಗ್ರಾಮ ಪಂಚಾಯತ್ ದೇವಚಳ್ಳ ಹಾಗೂ ದ.ಕ. ಜಿಲ್ಲಾ ಅನುಷ್ಠಾನ ಬೆಂಬಲ ಸಂಸ್ಥೆಗಳಾದ ಸಮುದಾಯ ಮಂಗಳೂರು ಮತ್ತು ಗ್ರಾಮ್ಸ್ ಮಂಗಳೂರು ಇವರ ಸಹಯೋಗದಲ್ಲಿ ಜಲ್ ಜೀವನ್ ಮಿಷನ್ ಯೋಜನೆಯಡಿಯಲ್ಲಿ ದೇವಚಳ್ಳ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಜಲ ಜೀವನ್ ಮಿಷನ್ ವಿಶೇಷ ಗ್ರಾಮ...

ಫೆ.18 : ಕೊಯನಾಡು ಗಣಪತಿ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಮಹೋತ್ಸವ

ಕೊಯನಾಡು ಶ್ರೀ ಮಹಾಗಣಪತಿ ದೇವಸ್ಥಾನದಲ್ಲಿ ವರ್ಷಂಪ್ರತಿಯಂತೆ ಮಹಾಶಿವರಾತ್ರಿ ಮಹೋತ್ಸವವು ಫೆ.18 ನೇ ಶನಿವಾರದಂದು ನಡೆಯಲಿದೆ.ಫೆ.18 ರಂದು ಪೂರ್ವಾಹ್ನ ಘಂಟೆ 9.30ಕ್ಕೆ ಧ್ವಹರೋಹಣ, ಕ್ರೀಡಾಕೂಟ (ಸ್ಥಳೀಯರಿಗೆ), ಮಧ್ಯಾಹ್ನ ಘಂಟೆ 12.00ಕ್ಕೆ ಗಣಪತಿ ಅಥರ್ವ ಶೀರ್ಷ ಅಭಿಷೇಕ ಮತ್ತು ನಿತ್ಯ ಪೂಜಾ ಕಾರ್ಯಕ್ರಮ, ಸಾಯಂಕಾಲ ಘಂಟೆ 6.38ಕ್ಕೆ ದೀಪಾರಾಧನೆ, ಸಾಯಂಕಾಲ ಘಂಟೆ 7.00ಕ್ಕೆ ಸಭಾ ಕಾರ್ಯಕ್ರಮ, ರಾತ್ರಿ ಘಂಟೆ...

ಚಿನ್ನಮ್ಮ ಕುಕ್ಕೇಟಿ ನಿಧನ

ಮಂಡೆಕೋಲು ಗ್ರಾಮದ ಕುಕ್ಕೇಟಿ ದಿ. ಕೂಸಪ್ಪ ಗೌಡರ ಪತ್ನಿ ಚಿನ್ನಮ್ಮ(76) ಎಂಬವರು ಜ‌. 27ರಂದು ಅಲ್ಪಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಅವರು ಪುತ್ರರಾದ ದೇವಯ್ಯ ಗೌಡ, ಪೂವಯ್ಯ, ರಾಘವ, ರಾಮಚಂದ್ರ, ಪುತ್ರಿಯರಾದ ಪುಷ್ಪಾವತಿ ಬಾಲಕೃಷ್ಣ, ಮಮತಾ ಲಿಂಗಪ್ಪ, ಚಿತ್ರಲೇಖ ಆನಂದ, ಸೊಸೆಯಂದಿರಾದ ಸುಶೀಲಾ, ಭವಾನಿ, ಜಯಂತಿ, ಹರಿಣಾಕ್ಷಿ ಹಾಗೂ ಮೊಮ್ಮಕ್ಕಳು, ಮರಿಮಕ್ಕಳು ಕುಟುಂಬಸ್ಥರು ಮತ್ತು ಬಂಧುಗಳನ್ನು...
Loading posts...

All posts loaded

No more posts

error: Content is protected !!
ವಾಟ್ಸ್‌ಆಪ್‌ ಗ್ರೂಪ್‌ಗೆ ಸೇರಿ