- Monday
- May 20th, 2024
ಗುತ್ತಿಗಾರು : ವಿಜ್ರಂಭಣೆಯಿಂದ ನಡೆದ ಮುತ್ತಪ್ಪ ತಿರುವಪ್ಪ ದೈವದ ಪುನರ್ ಪ್ರತಿಷ್ಠೆ ಗುತ್ತಿಗಾರಿನ ಮುತ್ತಪ್ಪನಗರದಲ್ಲಿರುವ ಶ್ರೀ ಮುತ್ತಪ್ಪೇಶ್ವರ ದೈವಸ್ಥಾನದಲ್ಲಿ ಶ್ರೀ ದೈವಗಳ ಪುನರ್ ಪ್ರತಿಷ್ಠೆ ಹಾಗೂ ಶ್ರೀ ಮುತ್ತಪ್ಪ ತಿರುವಪ್ಪ ದೈವದ ನೇಮೋತ್ಸವ ಮಾ. 03 ಮತ್ತು ಮಾ. 04 ರಂದು ಪುನರ್ ಪ್ರತಿಷ್ಠೆ ಹಾಗೂ ವಾರ್ಷಿಕ ಜಾತ್ರೋತ್ಸವ ನಡೆಯಲಿದೆ.ಮಾ. 03 ರಂದು ಬೆಳಿಗ್ಗೆ ಶ್ರೀ...
ಪಂಬೆತ್ತಾಡಿ ಗ್ರಾಮದ ಕರಿಕ್ಕಳ ವಿಶ್ವನಾಥ ಮತ್ತು ಗಾಯತ್ರಿ ದಂಪತಿ ಮನೆಗೆ ಕೆಲಸಕ್ಕೆ ಬಂದವರು ಆಕ್ರಮಣ ನಡೆಸಿ ಕೊಲೆಗೆ ಯತ್ನಿಸಿದ ಘಟನೆ ಮಾ.2ರಂದು ರಾತ್ರಿ ನಡೆದಿದೆ.ಈ ವೇಳೆ ಮನೆಯವರು ಬೊಬ್ಬೆ ಹೊಡೆದ ಪರಿಣಾಮ ಅಕ್ಕಪಕ್ಕದ ಮನೆಯವರು ಬಂದ ಕಾರಣ ಅಪಾಯ ಉಂಟಾಗಲಿಲ್ಲ. ಘಟನೆ ಸಂಬಂಧಿಸಿ ವರದರಾಜ್ ಮತ್ತು ಸೈಫನ್ ಎಂಬುವರನ್ನು ಸುಬ್ರಮಣ್ಯ ಪೊಲೀಸರು ಬಂಧಿಸಿದ್ದಾರೆ. ಗಾಯತ್ರಿಯವರ ಕುತ್ತಿಗೆಗೆ...
ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮಕರಣಿಕರೊಬ್ಬರಿಗೆ ಮಂಗಳೂರಿನ ನ್ಯಾಯಾಲಯ ನಾಲ್ಕು ವರ್ಷ ಜೈಲು ಶಿಕ್ಷೆ ಮತ್ತು 70 ಸಾವಿರ ದಂಡ ವಿಧಿಸಿ ಆದೇಶ ನೀಡಿದೆ.ಸುಳ್ಯ ಮಂಡೆಕೋಲಿನ ಗೋಪಾಲಕೃಷ್ಣ ಅವರ ಅಕ್ರಮ ಸಕ್ರಮದ ಅರ್ಜಿ ವಿಲೇವಾರಿಗೆ 60,000 ರೂ. ಲಂಚದ ಹಣಕ್ಕೆ ಗ್ರಾಮಕರಣಿಕ ಮಹೇಶ್ ಎಂಬವರು ಬೇಡಿಕೆ ಇಟ್ಟಿದ್ದು, 2016ರ ಜೂ. 7ರಂದು 45,000 ರೂ.ಗಳನ್ನು ಲಂಚದ ಹಣವಾಗಿ...
ಪ್ರತಿಷ್ಟಿತ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ (VTU) ಮಾನ್ಯ ಉಪಕುಲಪತಿಗಳ ನಿರ್ದೇಶನದಂತೆ ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ, ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಮತ್ತು ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರಾದಡಾ. ಉಜ್ವಲ್ ಊರುಬೈಲು ವಿಶ್ವವಿದ್ಯಾಲಯದ ಮಾಲ್ ಪ್ರಾಕ್ಟೀಸ್ ಕೇಸಸ್ ಕನ್ಸಿಡರೇಶನ್ ಕಮಿಟಿ (MPCC) ಅಧ್ಯಕ್ಷರಾಗಿ ನೇಮಕಗೊಂಡಿರುತ್ತಾರೆ. ಇವರಿಗೆ ಡಾ| ರೇಣುಕಾಪ್ರಸಾದ್ ಕೆ.ವಿ. ಮತ್ತು...
ಸುಳ್ಯದಲ್ಲಿ ವಕೀಲರಾಗಿರುವ ಸಂದೀಪ್ ಮದುವೆಗದ್ದೆ ಯವರು ಚೀಟಿ ನಿಧಿ ಅಧಿನಿಯಮ 1982 ರಡಿ ಚೀಟಿ ದಾವೆಗಳನ್ನು ಇತ್ಯರ್ಥಪಡಿಸಲು ಚೀಟಿ ನಿಬಂಧಕರ ನಾಮಿನಿ ವಕೀಲರಾಗಿ ನೇಮಕಗೊಂಡಿರುತ್ತಾರೆ.ಇವರನ್ನು ಸಹಕಾರ ಸಂಘಗಳ ನಿಬಂಧಕರು ಹಾಗೂ ಚೀಟಿ ಮಹಾ ಪ್ರಬಂಧಕರು ಕರ್ನಾಟಕ ರಾಜ್ಯ, ಬೆಂಗಳೂರು ಇವರು ಬೆಂಗಳೂರು ನಗರ ಜಿಲ್ಲೆಯ ಚೀಟಿ ಸಂಸ್ಥೆಗೆ ಸಂಬಂಧಿಸಿದ ದಾವೆಗಳನ್ನು ಇತ್ಯರ್ಥಪಡಿಸಲು ನೇಮಕಗೊಳಿಸಿರುತ್ತಾರೆ.
ರೈಟ್ ಟು ಲಿವ್ (ಕೋಟೆ ಫೌಂಡೇಶನ್) ಹಾಗೂ ಸ್ನೇಹ ಶಾಲೆಯ ಸಹಯೋಗಿತ್ವದಲ್ಲಿ ನಡೆಯುತ್ತಿರುವ ‘ಸ್ಫೂರ್ತಿ ಕೌಶಲ್ಯ ತರಬೇತಿ ಕೇಂದ್ರ’ದಲ್ಲಿ, ಮೊದಲ ಬ್ಯಾಚ್ ನ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರಗಳನ್ನು ಮಾ. 2ರಂದು ವಿತರಿಸಲಾಯಿತು. ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಡಾ. ಚಂದ್ರಶೇಖರ ದಾಮ್ಲೆ ಹಾಗೂ ಶ್ರೀಮತಿ ಜಯಲಕ್ಷ್ಮಿ ದಾಮ್ಲೆ ಇವರು ಹಾಜರಿದ್ದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕೋಟೆ ಫೌಂಡೇಶನ್...
ರಾಜ್ಯ ಒಕ್ಕಲಿಗರ ಸಂಘದ ಆಶ್ರಯದಲ್ಲಿ ಪ್ರಾರಂಭಿಸಲು ಉದ್ದೇಶಿಸಿರುವ ರಾಜ್ಯ ಒಕ್ಕಲಿಗರ ಸಂಘ ವಿಶ್ವವಿದ್ಯಾಲಯ (ಆರ್.ವಿ.ಎಸ್.ಯು)ದ ಸ್ಥಾಪನೆಗೆ ಸರಕಾರದಿಂದ ಅನುಮೋದನೆ ದೊರೆತಿದೆ. ರಾಜ್ಯ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾ ಪ್ರಸಾದ್ ಕೆ.ವಿ ಯವರ ಅಧ್ಯಕ್ಷತೆಯಲ್ಲಿ 15 ಜನರ ಸದಸ್ಯರುಗಳನ್ನೊಳಗೊಂಡ ಸಮಿತಿಯನ್ನು ರಚಿಸಿ ಸರಕಾರಕ್ಕೆ ವಿಶ್ವವಿದ್ಯಾಲಯ ಸ್ಥಾಪನೆಗೆ ಪ್ರಸ್ತಾಪನೆಯನ್ನು ತಯಾರು ಮಾಡಿ ಸಲ್ಲಿಸಲಾಗಿತ್ತು.ಈ ಪ್ರಸ್ತಾವನೆಯನ್ನು ಸಲ್ಲಿಸಲು ಡಾ....