Ad Widget

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವ – ಸಭಾ ಕಾರ್ಯಕ್ರಮದಲ್ಲಿ ಸಚಿವ ಎಸ್.ಅಂಗಾರ ಭಾಗಿ

ನಾಗಪಟ್ಟಣ ಶ್ರೀ ಸದಾಶಿವ ದೇವಸ್ಥಾನದ ಪ್ರತಿಷ್ಠಾ ವಾರ್ಷಿಕೋತ್ಸವದ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.ಕಾರ್ಯಕ್ರಮದಲ್ಲಿ ಸುಳ್ಯ ನಗರ ಪಂಚಾಯತ್ ಅಧ್ಯಕ್ಷರಾದ ವಿನಯ್ ಕುಮಾರ್ ಕಂದಡ್ಕ, ಆಲೆಟ್ಟಿ ಗ್ರಾ.ಪಂ. ಅಧ್ಯಕ್ಷೆ ಪುಷ್ಪಾವತಿ ಕುಡೆಕಲ್ಲು, ಸದಸ್ಯರಾದ ಮುತ್ತಪ್ಪ ಪೂಜಾರಿ, ಶ್ರೀಮತಿ ಕಮಲ ನಾಗಪಟ್ಟಣ,ಮೀನಾಕ್ಷಿ ಆಲೆಟ್ಟಿ ಪ್ರಾ.ಕೃ.ಪತ್ತಿನ...

ಮಡಪ್ಪಾಡಿ : ಬೆಂಕಿಗೆ ಆಹುತಿಯಾಗುತ್ತಿರುವ ಅರಣ್ಯ – ಬೆಂಕಿ ನಂದಿಸಲು ಅರಣ್ಯ ಸಿಬ್ಬಂದಿಗಳೊಂದಿಗೆ ನಾಗರಿಕರ ಸಾಥ್

ಮಡಪ್ಪಾಡಿಯ ಶೀರಡ್ಕ ಭಾಗದಲ್ಲಿ ಅರಣ್ಯಕ್ಕೆ ಬಿದ್ದ ಬೆಂಕಿ ದಿನದಿಂದ ದಿನಕ್ಕೆ ವ್ಯಾಪಿಸುತ್ತಲೇ ಇದ್ದು ರಬ್ಬರ್ ತೋಟದ ಕೃಷಿಕರು ಆತಂಕ ಪಡುವಂತಾಗಿದೆ. ಅರಣ್ಯ ಇಲಾಖೆಯವರು ಕಳೆದ ಕೆಲವು ದಿನಗಳಿಂದ ಬೆಂಕಿ ನಂದಿಸಲು ನಿರಂತರವಾಗಿ ಶ್ರಮವಹಿಸುತ್ತಿದ್ದರೂ ಬೆಂಕಿ ನಿಯಂತ್ರಣಕ್ಕೆ ಬರುತ್ತಿಲ್ಲವೆಂದು ತಿಳಿದು ಬಂದಿದೆ. ನೂರಾರು ಎಕರೆಯಷ್ಟು ಹೊತ್ತಿ ಉರಿದ ಹಾಗೆ ಕಾಣಿಸುತ್ತಿದೆ. ಇದೀಗ ಅರಣ್ಯ ಇಲಾಖೆ ಸಿಬ್ಬಂದಿಗಳ ಜೊತೆಗೆ...
Ad Widget

ಮರಕತ ಸೇತುವೆ ಲೋಕಾರ್ಪಣೆಗೆ ಸಿದ್ಧ – ಜನರ ಬಹುದಿನದ ಬೇಡಿಕೆ ಈಡೇರಿಕೆ- ಮಾ.13 ರಂದು ಸಚಿವ ಅಂಗಾರರಿಂದ ಉದ್ಘಾಟನೆ

ಮರಕತ ದುರ್ಗಾಪರಮೇಶ್ವರಿ ದೇವಸ್ಥಾನದ ಬಳಿಯ ನದಿಗೆ ಪಶ್ಚಿಮ ವಾಹಿನಿ ಯೋಜನೆಯಿಂದ ಸುಮಾರು 6.5 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣಗೊಂಡ ಕಿಂಡಿ ಅಣೆಕಟ್ಟು ಮತ್ತು ನಾಲ್ಕೂರು ಮತ್ತು ಏನೆಕಲ್ಲು ಗ್ರಾಮಗಳಿಗೆ ಹೋಗುವ ಸಂಪರ್ಕ ಸೇತುವೆ ಲೋಕಾರ್ಪಣೆಗೆ ಸಿದ್ಧಗೊಂಡಿದೆ. ಈ ಮೂಲಕ ಈ ಭಾಗದ ಜನರ ಬಹುದಿನದ ಬೇಡಿಕೆ ಈಡೇರಿದಂತಾಗಿದೆ. ಇದರ ಉದ್ಘಾಟನಾ ಕಾರ್ಯಕ್ರಮ ಮಾ.13 ರಂದು ನಡೆಯಲಿದೆ....

ಜಟ್ಟಿಪಳ್ಳ ದುಗಲಡ್ಕ ರಸ್ತೆ ಕಾಮಗಾರಿ ಶೀಘ್ರ ಆರಂಭ ; ನ.ಪಂ. ಅಧ್ಯಕ್ಷ ವಿನಯ ಕಂದಡ್ಕ

ಜಟ್ಟಿಪಳ್ಳ ಕೊಡಿಯಾಲಬೈಲ್ ದುಗಲಡ್ಕ ರಸ್ತೆಯ ಅಭಿವೃದ್ಧಿಗೆ ಈಗಾಗಲೇ 50 ಲಕ್ಷ ರೂಗಳ ಕಾಮಗಾರಿ ನಡೆದಿದ್ದು ವಿವಿಧ ಮೂಲಗಳಿಂದ ಇನ್ನೂ 65 ಲಕ್ಷ ರೂಗಳ ಕಾಮಗಾರಿಗಳಿಗೆ ಮಂಜೂರಾತಿ ದೊರಕಿದ್ದು ಶೀಘ್ರದಲ್ಲಿಯೇ ಈ ಕಾಮಗಾರಿಯು ಆರಂಭಗೊಳ್ಳಲಿದೆಈ ಹಿಂದೆ ಪ್ರತಿಭಟನೆ ನಡೆದಿದ್ದ ಸಂದರ್ಭದಲ್ಲಿ 50 ಲಕ್ಷ ರೂಗಳ ಕಾಮಗಾರಿಯನ್ನು ತಕ್ಷಣ ಕೈಗೊತ್ತಿಕೊಳ್ಳಲಿದ್ದು ಇನ್ನೂ 50 ಲಕ್ಷ ರೂಗಳ ಕಾಮಗಾರಿಯನ್ನು ಮಾಡಲಿದ್ದೇವೆ...

ಕಲ್ಲಪ್ಪಳ್ಳಿಯಲ್ಲಿ ನಡೆದ ಪ್ರಪ್ರಥಮ ಮ್ಯಾಟ್ ಕಬಡ್ಡಿ – ಮಾತೃಶ್ರೀ ಕಲ್ಲಪ್ಪಳ್ಳಿ ಪ್ರಥಮ, ಎನ್.ಎಂ.ಸಿ. ದ್ವಿತೀಯ

ಕಲ್ಲಪಳ್ಳಿಯ ಪ್ರೀತಿ ಕಲಾ ಮತ್ತು ಕ್ರೀಡಾ ಸಂಘದ ವತಿಯಿಂದ ದಿ.ಮೋನಪ್ಪ ಗೌಡ ನೆಡ್ಚಿಲು ಮೂಲೆಹಿತ್ಲು ಇವರ ಸ್ಮರಣಾರ್ಥ ಹೊನಲು ಬೆಳಕಿನ ಪುರುಷರ ಮ್ಯಾಟ್ ಕಬಡ್ಡಿ ಪಂದ್ಯಾಟ ಮಾ.11ರಂದು ನಡೆಯಿತು. ಪ್ರಥಮ ಬಹುಮಾನ ರೂ.20,001 ನ್ನು ಮಾತೃಶ್ರೀ ಕಲ್ಲಪಳ್ಳಿ ತಂಡ ಹಾಗೂ ದ್ವಿತೀಯ ಬಹುಮಾನ 15,001 ನ್ನು ಎನ್‌ಎಂಸಿ‌ ಸುಳ್ಯ ಪಡೆದುಕೊಂಡಿತು. ಸೆಮಿಫೈನಲ್ ನಿರ್ಗಮಿತ ತಂಡಗಳಿಗೆ 5001...

ಮಾ‌. 19 ರಂದು ಪಂಜದಲ್ಲಿ ಮಹಿಳಾ ಮೋರ್ಚಾದ ಜಿಲ್ಲಾ ಸಮಾವೇಶ – ಪೂರ್ವಭಾವಿ ಸಭೆ

ದ.ಕ. ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಜಿಲ್ಲಾ ಸಮಾವೇಶ ಮಾ.19 ರಂದು ಪಂಜದಲ್ಲಿ ನಡೆಯಲಿದ್ದು, ಪೂರ್ವಭಾವಿ ಸಭೆಯು ಇಂದಯ ಅಯ್ಯನಕಟ್ಟೆ ದೀನ್ ದಯಾಳ್ ಸಭಾಂಗಣದಲ್ಲಿ ಜರಗಿತು. ಈ ಸಭೆಯಲ್ಲಿ ಸಚಿವರಾದ ಅಂಗಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ವೆಂಕಟ್ ವಳಲಂಬೆ, ಜಿ.ಪಂ.ಮಾಜಿ ಅಧ್ಯಕ್ಷ ವೆಂಕಟ್ ದಂಬೆಕೋಡಿ, ಜಿ.ಪಂ.ಮಾಜಿ ಸದಸ್ಯೆ ಪುಷ್ಪಾವತಿ ಬಾಳಿಲ, ವಸಂತ ನಡುಬೈಲು ಹಾಗೂ...

ರಾಮಕೃಷ್ಣ ನಾಯರ್ ಸಾಲ್ತಾಡಿ ನಿಧನ

ನಾಲ್ಕೂರು ಗ್ರಾಮದ ಸಾಲ್ತಾಡಿ ರಾಮಕೃಷ್ಣ ನಾಯರ್ ಅವರು ಸ್ವಗೃಹದಲ್ಲಿ ನಿಧನರಾದರು. ಅವರಿಗೆ 87 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ರುಕ್ಮಿಣಿ, ಪುತ್ರರಾದ ಉಣ್ಣಿಕೃಷ್ಣನ್, ಶಿವಪ್ರಸಾದ್ ಹಾಗೂ ಸೊಸೆಯಂದಿರು ಮತ್ತು ಮೊಮ್ಮಕ್ಕಳನ್ನು ಅಗಲಿದ್ದಾರೆ.

ಮಲ್ಲಾರ ರಾಮಚಂದ್ರ ಗೌಡ ನಿಧನ

ಕಡಬ ತಾಲೂಕಿನ ಏನೆಕಲ್ಲು ಗ್ರಾಮದ ಮಲ್ಲಾರ ರಾಮಚಂದ್ರ ಗೌಡರು(59) ಮಾ.೪ ರಂದು ನಿಧನರಾದರು.ಇವರು ಕೆಲ ದಿನಗಳಿಂದ ಅಸೌಖ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಮಾ.೪ರಂದು ನಿಧನರಾದರು. ಇವರು ಪತ್ನಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.

ದೊಡ್ಡಡ್ಕ : ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಿದ ನೂತನ ಬಸ್ ತಂಗುದಾಣ ಲೋಕಾರ್ಪಣೆ

ಸಂಪಾಜೆ ಗ್ರಾಮದ ದೊಡ್ಡಡ್ಕ ಮೊಗೇರ್ಕಳ ದೇವಸ್ಥಾನ ಬಳಿ ಲಯನ್ಸ್ ಕ್ಲಬ್ ವತಿಯಿಂದ ನಿರ್ಮಿಸಿದ ನೂತನ ಬಸ್ ತಂಗುದಾಣ ಲೋಕಾರ್ಪಣೆ ಕಾರ್ಯಕ್ರಮ ಇಂದು ನಡೆಯಿತು.

ತೊಡಿಕಾನ : ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ನೇಮೋತ್ಸವ

ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ದೈವಸ್ಥಾನ ದೊಡ್ಡಕುಮೇರಿ, ತೊಡಿಕಾನದಲ್ಲಿ ವಾರ್ಷಿಕ ನೇಮೋತ್ಸವ ನಡೆಯಿತು. ಇದರ ಅಂಗವಾಗಿ ನಡೆದ ಧಾರ್ಮಿಕ ಸಭಾ ಕಾರ್ಯಕ್ರಮವನ್ನು ಸಚಿವರಾದ ಎಸ್. ಅಂಗಾರರವರು ಉದ್ಘಾಟಿಸಿದರು.*ಕಾರ್ಯಕ್ರಮದಲ್ಲಿ ಅರಂತೋಡು ದೈವಸ್ಥಾನದ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ಸಂತೋಷ್ ಕುತ್ತಮೊಟ್ಟೆ, ಸುಳ್ಯ ಮಂಡಲ ಬಿಜೆಪಿ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ, ತೊಡಿಕಾನ ಶ್ರೀ ಮಲ್ಲಿಕಾರ್ಜುನ ದೇವಾಲಯದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಕಿಶೋರ್...
Loading posts...

All posts loaded

No more posts

error: Content is protected !!