Ad Widget

ಕಾಂಕ್ರೀಟೀಕರಣಗೊಂಡ ಕಲ್ಮಕಾರು-ಮೆಂಟೆಕಜೆ-ಪಡ್ಪು ರಸ್ತೆ ಉದ್ಘಾಟಿಸಿದ ಸಚಿವ ಅಂಗಾರ

ಕಲ್ಮಕಾರು ಗ್ರಾಮದ ಕಲ್ಮಕಾರು-ಮೆಂಟೆಕಜೆ-ಪಡ್ಪು ರಸ್ತೆಯ ಸುಮಾರು ರೂ.80.00 ಲಕ್ಷ ಅನುದಾನದಲ್ಲಿ ನಡೆದ ಕಾಂಕ್ರೀಟ್ ರಸ್ತೆಯ ಕಾಮಗಾರಿಯನ್ನು ಸಚಿವರಾದ ಎಸ್. ಅಂಗಾರರವರು ಇಂದು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ. ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ ಬಿ.ಜೆ.ಪಿ ಪ್ರಧಾನ ಕಾರ್ಯದರ್ಶಿ ಕೇಶವ ಭಟ್ ಮುಳಿಯ,ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ...

ಪಂಬೆತ್ತಾಡಿ : ಹೃದಯಾಘಾತದಿಂದ ಯುವಕ ಮೃತ್ಯು

ಎದೆನೋವಿನಿಂದಾಗಿ ಆಸ್ಪತ್ರೆ ಸೇರಿದ ಯುವಕನೋರ್ವ ಹೃದಯಾಘಾತದಿಂದ ಮೃತಪಟ್ಟ ಘಟನೆ ಪಂಬೆತ್ತಾಡಿ ನಿಂದ ವರದಿಯಾಗಿದೆ. ಪಂಬೆತ್ತಾಡಿ ಗ್ರಾಮದ ಎದುರುಮಜಲು ಮಹಾಲಿಂಗ ನಾಯ್ಕ ರವರ ಪುತ್ರ ಜಗದೀಶ್ (33) ಮೃತ ಪಟ್ಟ ದುರ್ದೈವಿ. ಮೂರು ದಿನಗಳ ಹಿಂದೆ ಎದೆ ನೋವು ಕಾಣಿಸಿಕೊಂಡಿದ್ದು, ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೆ ಮಾ.23ರಂದು ಕೊನೆಯುಸಿರೆಳೆದಿದ್ದಾರೆ. ಮೃತರು ಅವಿವಾಹಿತರಾಗಿದ್ದು...
Ad Widget

ಕಲ್ಮಕಾರು : ನೂತನ ಸೇತುವೆ ನಿರ್ಮಾಣಕ್ಕೆ ಸಚಿವರಿಂದ ಗುದ್ದಲಿಪೂಜೆ – 2 ಕೋಟಿ ಅನುದಾನ ಮಂಜೂರು

ಕಲ್ಮಕಾರು ಗ್ರಾಮದ ಶೆಟ್ಟಿಕಟ್ಟ ಎಂಬಲ್ಲಿ ಬಹುಕಾಲದ ಬೇಡಿಕೆಯಾದ ಶೆಟ್ಟಿಕಟ್ಟ-ಬೈಲು ಸಂಪರ್ಕ ಸೇತುವೆಗೆ ರೂ. 2.00 ಕೋಟಿ ವೆಚ್ಚದಲ್ಲಿ ನೂತನ ಸೇತುವೆ ನಿರ್ಮಾಣಕ್ಕೆ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರರವರು ಇಂದು ಗುದ್ದಲಿಪೂಜೆ ನೆರವೇರಿಸಿದರು.ಈ ಸಂದರ್ಭದಲ್ಲಿ ಸುಳ್ಯ ಬಿ.ಜೆ.ಪಿ ಮಂಡಲಾಧ್ಯಕ್ಷರಾದ ಹರೀಶ್ ಕಂಜಿಪಿಲಿ, ದ.ಕ. ಜಿಲ್ಲಾ ಬಿ.ಜೆ.ಪಿ ಉಪಾಧ್ಯಕ್ಷರಾದ ವೆಂಕಟ್ ವಳಲಂಬೆ, ಜಿಲ್ಲಾ...

ಕುಲ್ಕುಂದ : ಶ್ರೀ ಬಸವೇಶ್ವರ ದೇವರ ವಾರ್ಷಿಕ ಜಾತ್ರಾ ಮಹೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

ಕುಲ್ಕುಂದ ಬಸವನಮೂಲೆ ಶ್ರೀ ಬಸವೇಶ್ವರ ದೇವಸ್ಥಾನದಲ್ಲಿ ಏಪ್ರಿಲ್ 19 ಮತ್ತು 20 ರಂದು ವಾರ್ಷಿಕ ಜಾತ್ರಾ ಮಹೋತ್ಸವ ನಡೆಯಲಿದ್ದು, ಮಾ.24 ರಂದು ಆಮಂತ್ರಣ ಪತ್ರಿಕೆ ಬಿಡುಗಡೆ ಕಾರ್ಯಕ್ರಮ ನಡೆಯಿತು.ಈ ಸಂದರ್ಭದಲ್ಲಿ ದೇವಳದ ಅಧ್ಯಕ್ಷರಾದ ಗಿರಿಧರ ಸ್ಕಂದ, ಪದ್ಮಯ್ಯ ಜಾಡಿಮನೆ, ಗಿರೀಶ್ ಆಚಾರ್ಯ ಕುಲ್ಕುಂದ, ಯತೀಶ್ ಪಳ್ಳಿಗದ್ದೆ, ಜಯಣ್ಣ ಪಳ್ಳಿಗದ್ದೆ, ಜಯಂತ್ ಕುದುರೆಮಜಲು, ಕವಿತಾ ಗಣೇಶ್, ಸೀನಪ್ಪ...

2018ರಲ್ಲಿ ಬಾಲಕಿಯನ್ನು ಬಲಿ ಪಡೆದ ಬಸ್ – ಚಾಲಕನಿಗೆ 1ವರ್ಷ ಜೈಲು ಶಿಕ್ಷೆ ವಿಧಿಸಿದ ನ್ಯಾಯಾಲಯ

ಅರಂತೋಡು ಗ್ರಾಮದ ಬಿಳಿಯಾರು ಎಂಬಲ್ಲಿ 2018 ಫೆ.12 ರಂದು ಕೆವಿಜಿಯ ಐಪಿಎಸ್ ಶಾಲೆಯ ಒಂದನೆಯ ತರಗತಿ ವಿದ್ಯಾರ್ಥಿನಿ ಆಗ್ನೆಯ ಬಾಲು ಬಸ್ಸಿನ ಚಕ್ರಕ್ಕೆ ಸಿಲುಕಿ ಮೃತಪಟ್ಟ ಘಟನೆಗೆ ಸಂಬಂಧಿಸಿ ಶಾಲಾ ಬಸ್ಸು ಚಾಲಕ ಧನಂಜಯ ಎಂಬುವರಿಗೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಈ ಘಟನೆಗೆ ಸಂಬಂಧಿಸಿದಂತೆ ಅಂದಿನ ತನಿಖಾಧಿಕಾರಿ ಸರ್ಕಲ್ ಇನ್ ಸ್ಪೆಕ್ಟರ್...

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಗೆ ಜಲಸಂಜೀವಿನಿ ಪಂಚಾಯತ್ ಪುರಸ್ಕಾರ

ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಲ್ಲಿ 2022-23ನೇ ಸಾಲಿನಲ್ಲಿ ಅತ್ಯುತ್ತಮ ಸಾಧನೆ ಮಾಡಿದ್ದಕ್ಕಾಗಿ ಜಲಸಂಜೀವಿನಿ ಪಂಚಾಯತ್ ಪುರಸ್ಕಾರಕ್ಕೆ ಆಯ್ಕೆಯಾಗಿದ್ದು, ಮಾ.24 ರಂದು ಬೆಂಗಳೂರಿನಲ್ಲಿ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ, ಹರಿಹರ ಪಲ್ಲತ್ತಡ್ಕ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಜಯಂತ ಬಾಳುಗೋಡು, ಉಪಾಧ್ಯಕ್ಷರಾದ ವಿಜಯ ಕುಮಾರ್ ಅಂಙಣ, ಗ್ರಾಮ ಪಂಚಾಯತ್...

ಪೆರುವಾಜೆ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರ ಭೇಟಿ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನಕ್ಕೆ ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತ ಗುರುಪ್ರಸಾದ್ ರವರು ಮಾ.24 ರಂದು ಭೇಟಿ ನೀಡಿದರು.ಶ್ರೀ ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪದ್ಮನಾಭ ಶೆಟ್ಟಿ, ಸದಸ್ಯರಾದ ವೆಂಕಟಕೃಷ್ಣ ರಾವ್,ದೇವಸ್ಥಾನದ ಸಿಬ್ಬಂದಿ ವಸಂತ ಆಚಾರ್ಯ ಹಾಗೂ ಭಕ್ತಾದಿಗಳು ಉಪಸ್ಥಿತರಿದ್ದರು.

ವಳಲಂಬೆ : 38ನೇ ವರ್ಷದ ಸಾಮೂಹಿಕ ಲಕ್ಷ್ಮೀ ಸಹಿತ ಶ್ರೀ ಸತ್ಯನಾರಾಯಣ ದೇವರ ಪೂಜೆ – ಮಾ.25 ರಂದು ರಾಜ್ಯ ದೈವ ಹಾಗೂ ಪುರುಷ ದೈವದ ನೇಮ

ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಮಾ.24 ರ ಬೆಳಗ್ಗೆ ಗಣಪತಿ ಹೋಮ, ಬೆಳಿಗ್ಗೆ ಶತ ರುದ್ರಾಭಿಷೇಕ, 38 ನೇ ವರ್ಷದ ಲಕ್ಷ್ಮೀ ಸಹಿತ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಕಂದ್ರಪ್ಪಾಡಿ ಮತ್ತು ತಳೂರಿನಿಂದ ಪುರುಷದೈವ ಮತ್ತು ರಾಜ್ಯ ದೈವದ ಭಂಡಾರ ಆಗಮಿಸಿದ್ದು ದೇವಸ್ಥಾನದ ಆಡಳಿತ ಮಂಡಳಿ ವತಿಯಿಂದ ಸ್ವಾಗತಿಸಿದರು.ಸಂಜೆ ಭಜನಾ ಕಾರ್ಯಕ್ರಮ, ಹಾಗೂ ರಾತ್ರಿ...

ನಿವೃತ್ತ ಅಂಚೆಪಾಲಕ ಜಯರಾಮ ಗೌಡ ನಿಧನ

ನಾಲ್ಕೂರು ಗ್ರಾಮದ ಹಾಲೆಮಜಲು ನಿವೃತ್ತ ಅಂಚೆ ಪಾಲಕರಾದ ಜಯರಾಮ ಗೌಡ (75) ಇಂದು ನಿದನಾರಾದರು. ಮೃತರು ಪತ್ನಿ ತಾರಾ, ಮಕ್ಕಳಾದ ಪುನಿತ್ ಹಾಲೆಮಜಲು, ಶ್ರಿಮತಿ ಪವಿತ್ರ ಹರೀಶ ನೆಡ್ಚಿಲು ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಕನಕಮಜಲು : ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಂಕಟ್ಟು ಮಹೋತ್ಸವದ ವೈಭವದ ಹಸಿರುವಾಣಿ ಮೆರವಣಿಗೆ

ಕನಕಮಜಲು ಗ್ರಾಮದ ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವಸ್ಥಾನದಲ್ಲಿ ಶ್ರೀ ವಯನಾಟ್ ಕುಲವನ್ ದೈವಂಕಟ್ಟು ಮಹೋತ್ಸವದ ಅಂಗವಾಗಿ ವೈಭವದ ಹಸಿರುವಾಣಿ ಮೆರವಣಿಗೆಯು ಮಾ.24ರಂದು ಬೆಳಿಗ್ಗೆ ಕನಕಮಜಲಿನ ಶ್ರೀ ಆತ್ಮಾರಾಮ ಭಜನಾ ಮಂದಿರದಿಂದ ಹೊರಟು ಬಾಳೆಹಿತ್ತಿಲು ಶ್ರೀ ವಯನಾಟ್ ಕುಲವನ್ ಶ್ರೀ ವಿಷ್ಣುಮೂರ್ತಿ ದೈವದ ಸನ್ನಿಧಿಗೆ ವಿವಿಧ ವಾಹನಗಳ ಮೂಲಕ, ಕೇರಳ ಚೆಂಡೆ, ನಾಸಿಕ್...
Loading posts...

All posts loaded

No more posts

error: Content is protected !!