Ad Widget

ಬೆಂಗಳೂರುನಲ್ಲಿ ನಡೆದ ಮ್ಯಾರಥಾನ್ ನಲ್ಲಿ ಜಸ್ಮಿತಾ ಕೊಡೆಂಕಿರಿ ದ್ವಿತೀಯ

ಮಾರ್ಚ್ 26 ರಂದು ಬೆಂಗಳೂರುನಲ್ಲಿ ನಡೆದ 18 ಕಿ. ಮೀ.ಮ್ಯಾರಥಾನ್ ಸ್ಪರ್ಧೆಯಲ್ಲಿ ಬಳ್ಪ ಗ್ರಾಮದ ಜಸ್ಮಿತಾ ಕೊಡೆಂಕಿರಿ ಇವರು ದ್ವಿತೀಯ ಸ್ಥಾನದೊಂದಿಗೆ ₹7500/ ನಗದು ಪುರಸ್ಕಾರ ಹಾಗೂ ಶಾಶ್ವತ ಫಲಕ ಪಡೆದುಕೊಂಡಿದ್ದಾರೆ. ಕೆ.ಎಸ್. ಎಸ್ ಕಾಲೇಜು ಸುಬ್ರಮಣ್ಯ ಹಾಗೂ ಆಳ್ವಾಸ್ ಕಾಲೇಜ್ ನ ಹಳೆ ವಿದ್ಯಾರ್ಥಿನಿಯಾದ ಇವರು ಮಂಗಳೂರಿನ ಕೇಂಬ್ರಿಡ್ಜ್ ವಿದ್ಯಾ ಸಂಸ್ಥೆಯಲ್ಲಿ ದೈಹಿಕ ಶಿಕ್ಷಕಿಯಾಗಿ...

ಕ್ರೈಸ್ತ ಸಮುದಾಯ ಹಾಗೂ ಶಿಕ್ಷಣ ಸಂಸ್ಥೆಗಳ ಬಗ್ಗೆ ಅವಹೇಳನ – ಬಿಟ್ಟಿ ಬಿ. ನೆಡುನಿಲಂ ಖಂಡನೆ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕ್ರೈಸ್ತ ಸಮುದಾಯವು ತನ್ನದೇ ರೀತಿಯಲ್ಲಿ ಸಾಮಾಜಿಕ ಸೇವೆಯನ್ನು ನಡೆಸಿಕೊಂಡು ಬರುತ್ತಿದೆ. ಶೈಕ್ಷಣಿಕ, ಆರೋಗ್ಯ ಹಾಗೂ ಸೇವಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ. ಅತ್ಯಂತ ಸಾಮರಸ್ಯದಿಂದ ಜಿಲ್ಲೆಯಲ್ಲಿ ಎಲ್ಲಾ ಸಮುದಾಯದೊಂದಿಗೆ ಬದುಕುತ್ತಿದೆ. ಆದರೆ ಇತ್ತೀಚೆಗೆ ಪುತ್ತೂರಿನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಪುತ್ತೂರಿನ ಪ್ರಸಿದ್ಧ ವೈದ್ಯರಾಗಿರುವ ಡಾ.ಪ್ರಸಾದ್‌ ಭಂಡಾರಿ ಅವರು ಕ್ರೈಸ್ತ ಸಮುದಾಯದ ಬಗ್ಗೆ ಹಾಗೂ ಶಿಕ್ಷಣ ಸಂಸ್ಥೆಗಳ...
Ad Widget

ಚುನಾವಣೆಯಲ್ಲಿ ಆರೋಗ್ಯ, ಶಿಕ್ಷಣ, ಉದ್ಯೋಗದ ಪ್ರಶ್ನೆಗಳ ಚರ್ಚೆಯಾಗಬೇಕೇ ಹೊರತು, ಕೋಮುದ್ವೇಷದ ಅಜೆಂಡಾವಾಗಿರ ಬಾರದು_ ಸಿ.ಪಿ.ಐ.ಎಂ, ಸ್ಥಳೀಯರಿಗೆ ಉದ್ಯೋಗ ಅವಕಾಶ ನೀಡಬೇಕು: ಮುನೀರ್ ಕಾಟಿಪಳ್ಳ

ಬಿಜೆಪಿಯು ಚುನಾವಣೆ ಎದುರಿಸಲು ಕೋಮು ದ್ವೇಷದ ಅಜೆಂಡಾಗಳನ್ನು ಮುಂದೆ ತಂದು ಮತೀಯ ವಿಭಜನೆಗೆ ಯತ್ನಿಸುತ್ತಿದೆ. ಬಿಜೆಪಿ ಸರಕಾರವು ಭ್ರಷ್ಟಾಚಾರ, ಬೆಲೆಯೇರಿಕೆ, ಮುಂತಾದ ಕೆಟ್ಟ ಆಡಳಿತದಿಂದ ಜನರು ಆಕ್ರೋಶಗೊಂಡಿದ್ದಾರೆ. ಸಾಮಾನ್ಯ ಜನರ ಬದುಕನ್ನು ಮತ್ತಷ್ಟು ಸಂಕಷ್ಟಕ್ಕೆ ತಳ್ಳುವ ಇಂತಹ ಕೋಮು ದ್ವೇಷದ ರಾಜಕೀಯ ಆಟಗಳನ‌್ನು ಸಿಪಿಐಎಂ ಪಕ್ಷವು ಬಲವಾಗಿ ವಿರೋಧಿಸುತ್ತಿದ್ದು ಶಿಕ್ಷಣ, ಉದ್ಯೋಗ, ಆರೋಗ್ಯದಂತಹ ಜನರ ಮೂಲಭೂತ...

ವಿಧಾನಸಭಾ ಚುನಾವಣೆ ಕಾಂಗ್ರೆಸ್ ಅಭ್ಯರ್ಥಿ ಆಯ್ಕೆಯಲ್ಲಿ ಅಸಮಾಧಾನ ವಿಚಾರ ಮೀಸಲಾತಿ ರದ್ದುಗೊಳಿಸಿರುವುದು ಸರಕಾರದ ರಂಝಾನ್ ಕಿಟ್ : ಟಿ.ಎಂ. ಶಹೀದ್ ವ್ಯಂಗ್ಯ

ಚುನಾವಣೆ ಸಂದರ್ಭದಲ್ಲಿ ಅಭ್ಯರ್ಥಿ ಗಳ ಆಯ್ಕೆ ವಿಚಾರದಲ್ಲಿ ಅಸಮಾಧಾನ ಸ್ವಾಭಾವಿಕ. ‌ಎಲ್ಲ ಕಡೆ ಇರುವಂತೆ ಇಲ್ಲಿಯೂ ಆಗಿದೆ.‌ ಅದನ್ನು ಪಕ್ಷದ ಹೈಕಮಾಂಡ್ ಸರಿಪಡಿಸುತ್ತದೆ” ಎಂದು ಕೆಪಿಸಿಸಿ ಮಾಧ್ಯಮ ವಕ್ತಾರ ಟಿ.ಎಂ. ಶಹೀದ್ ಹೇಳಿದ್ದಾರೆ. ಮಾ.28 ರಂದು‌ ಸುಳ್ಯದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಅವರು “ಪಕ್ಷ ಯಾರನ್ನು ಸೂಚಿಸುತ್ತದೆಯೋ ಅವರ ಪರ ನಾವು ಕೆಲಸ ಮಾಡುತ್ತೇವೆ. ಆದರೆ ಕೆಲವು...

ಗುರುಂಪು ಬರೆ ಕುಸಿತ : ಮೃತ ಕಾರ್ಮಿಕ ಕುಟುಂಬಕ್ಕೆ ಪರಿಹಾರ ಒದಗಿಸುವಲ್ಲಿ ಶ್ರಮಿಸಿದ್ದು ಬಿಎಂಎಸ್ ಕಾರ್ಮಿಕ ಸಂಘಟನೆ

ಅಕ್ರಮ ಕಟ್ಟಡ ಕಾಮಗಾರಿ‌ ನಡೆಸುವವರ ವಿರುದ್ಧ ನ.ಪಂ. ಕಠಿಣ ಕ್ರಮ ಕೈಗೊಳ್ಳಲಿ : ಒತ್ತಾಯ ಕಳೆದ ವಾರ ಸುಳ್ಯದ ಗುರುಂಪಿನಲ್ಲಿ ಬರೆ ಕುಸಿತದಿಂದ ಮೂವರು ಕಾರ್ಮಿಕರು ಮೃತಪಟ್ಟ ದುರ್ಘಟನೆ ನಡೆದಿದ್ದು, ಅವರ ಕುಟುಂಬಕ್ಕೆ ಪರಿಹಾರ ಒದಗಿಸಿ ಕೊಡುವಲ್ಲಿ ಬಿಎಂಎಸ್ ಕಾರ್ಮಿಕ ಸಂಘಟನೆ ಶ್ರಮವಹಿಸಿದೆ. ಹಾಗೂ ನಗರ ವ್ಯಾಪ್ತಿಯಲ್ಲಿ ನಡೆಯುವ ಅಕ್ರಮ ಕೆಲಸ ಕಾರ್ಯಗಳ ವಿರುದ್ಧ ನಗರ...

ನಂದಕುಮಾರ್ ಗೆ ಟಿಕೇಟ್ ನೀಡುವಂತೆ ಆಗ್ರಹಿಸಿ ಜಿಲ್ಲಾ ಕಾಂಗ್ರೇಸ್ ಕಚೇರಿ ಎದುರು ಸುಳ್ಯದ ಕಾಂಗ್ರೇಸ್ ಕಾರ್ಯಕರ್ತರಿಂದ ಬೃಹತ್ ಪ್ರತಿಭಟನೆ

ಮಂಗಳೂರು: ಸುಳ್ಯ ವಿಧಾನಸಭಾ ಕ್ಷೇತ್ರಕ್ಕೆ (Sullia Congress) ಕೆಪಿಸಿಸಿ ಘೋಷಿಸಿರುವ ಅಭ್ಯರ್ಥಿ ಜಿಗಣಿ ಕೃಷ್ಣಪ್ಪ ಅವರನ್ನು ಬದಲಿಸಬೇಕು ಎಂದು ಒತ್ತಾಯಿಸಿ ಸುಳ್ಯ ಭಾಗದ ಕಾಂಗ್ರೆಸ್ ಕಾರ್ಯಕರ್ತರು 15 ಬಸ್ ಗಳಲ್ಲಿ ಮಂಗಳೂರಿಗೆ ಬಂದು ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟನೆಗೆ ನಡೆಸಿದ್ದಾರೆ. ‘ನಾಯಕರ ಅಭ್ಯರ್ಥಿ ನಮಗೆ ಬೇಡ, ಗೆಲ್ಲುವ ಅಭ್ಯರ್ಥಿಗೆ ಟಿಕೆಟ್‌ ನೀಡಬೇಕು’. ‘ನಂದಕುಮಾರ್ ಅವರಿಗೆ...

ಎ.11-18 ರಂಗ ಮಯೂರಿಯಲ್ಲಿ ” ಬಣ್ಣ ” ಬೇಸಿಗೆ ಶಿಬಿರ

ರಂಗಮಯೂರಿಯಲ್ಲಿ ಎ.11 ರಿಂದ 18ರವರೆಗೆ ರಾಜ್ಯ ಮಟ್ಟದ ರಂಗಶೈ ಲಿಯ ಆಕರ್ಷಕ ಮಕ್ಕಳ ಬೇಸಿಗೆ ಶಿಬಿರವಾದ "ಬಣ್ಣ" ಕಾಯರ್ತೋಡಿ ದೇವಸ್ಥಾನದ ಸಭಾಭವನದಲ್ಲಿ ನಡೆಯಲಿದೆ. ನುರಿತ ಸಂಪನ್ಮೂಲ ವ್ಯಕ್ತಿಗಳು ತರಬೇತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ನಿರೂಪಣಾ ಕೌಶಲ್ಯ, ರಂಗ ತರಬೇತಿ, ನಾಟಕ ನಿರ್ಮಾಣ, ಸಾಹಿತ್ಯ, ಸಂಸ್ಕೃತಿ, ನೃತ್ಯ ತರಬೇತಿ, ಹಳ್ಳಿಮದ್ದು, ರಂಗ ಹೋಳಿ, ಗಾಳಿಪಟ ಉತ್ಸವ, ಯಕ್ಷಗಾನ ವೇಷಭೂಷಣ ಪ್ರಾತ್ಯಕ್ಷಿಕೆ,...

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರ ಆಯ್ಕೆ

ಅಜಪಿಲ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ನೂತನ ಸದಸ್ಯರ ಆಯ್ಕೆ ನಡೆದಿದೆ. ಸದಸ್ಯರಾಗಿ ಎಂ ಚಂದ್ರಕಾಂತ, ಶ್ರೀಮತಿ ಎ ನವಪ್ರಭ, ಶ್ರೀಮತಿ ಶಮಿತ ಪಿ ರೈ, ಕೆ ವಿಶ್ವನಾಥ ಭಟ್, ಪಿ ಗಂಗಾಧರ ರೈ, ಸುರೇಶ್ ಕುಮಾರ್ ಶೆಟ್ಟಿ, ಬಿ ಉದಯಪ್ರಸಾದ್, ಪಿ ರಾಧಾಕೃಷ್ಣ ಹಾಗೂ ಪ್ರಧಾನ ಅರ್ಚಕರು ಆಯ್ಕೆಯಾಗಿದ್ದಾರೆ.

ನಾಲ್ಕೂರು : ಅರಣ್ಯ ಪ್ರದೇಶದಲ್ಲಿ ಕಾಣಿಸಿಕೊಂಡ ಬೆಂಕಿ

ಸುಳ್ಯ ತಾಲೂಕಿನ ನಾಲ್ಕೂರಿನ ಚಾರ್ಮತ, ವಲ್ಪಾರೆ ಭಾಗದ ಅರಣ್ಯ ಪ್ರದೇಶದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಕಾಡು ಹೊತ್ತಿ ಉರಿಯುತ್ತಿದೆ ಎಂದು ತಿಳಿದುಬಂದಿದ್ದು, ಆಸುಪಾಸಿನ ಪ್ರದೇಶದಲ್ಲಿ ಹೊಗೆ ಆವರಿಸಿದೆ ಎಂದು ತಿಳಿದುಬಂದಿದೆ.ಅರಣ್ಯ ಇಲಾಖೆ, ಶೌರ್ಯ ವಿಪತ್ತು ನಿರ್ವಹಣಾ ಘಟಕ ಹಾಗೂ ಸ್ಥಳಿಯರು ಬೆಂಕಿ ನಂದಿಸಲು ಶ್ರಮಿಸುತ್ತಿದ್ದಾರೆ.(ವರದಿ : ಉಲ್ಲಾಸ್ ಕಜ್ಜೋಡಿ)

ಸಂಪಾಜೆಯ ಅರೆಕಲ್ಲು ಭಾಗದಲ್ಲಿ ಕಾಣಿಸಿಕೊಂಡ ಬೆಂಕಿ

ಮಡಿಕೇರಿ ಉಪ ವಿಭಾಗದ ಸಂಪಾಜೆ ವಲಯ ಕಡಮಕಲ್ಲು ಮೀಸಲು ಅರಣ್ಯ ಅರೆಕಲ್ಲು ಬಳಿ ಕಾಡ್ಗಿಚ್ಚಿನಿಂದ ವ್ಯಾಪಕ ಬೆಂಕಿ ಆವರಿಸಿಕೊಂಡಿದೆ.ಬೆಂಕಿ ನಂದಿಸಲು ಅರಣ್ಯ ಇಲಾಖಾಧಿಕಾರಿಗಳು ಸಿಬ್ಬಂದಿ ,ಸ್ಥಳೀಯರು ಅರ ಸಾಹಸ ಪಡುತ್ತಿದ್ದು, ನೂರಾರು ಮರಗಳು ಬೆಂಕಿಗಾಹುತಿಯಾಗಿದೆ ಎಂದು ತಿಳಿದು ಬಂದಿದೆ.
Loading posts...

All posts loaded

No more posts

error: Content is protected !!