Ad Widget

ಭಾಗೀರಥಿ ಮುರುಳ್ಯ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ : ಸಮಾಜದ ಕಟ್ಟಕಡೆಯ ಕಾರ್ಯಕರ್ತರನ್ನೂ ಪಕ್ಷ ಗುರುತಿಸಿದೆ – ಕೋಟಾ ಅಭಿಮತ

ಸುಳ್ಯ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕು. ಭಾಗೀರಥಿ ಮುರುಳ್ಯರ ಮನೆಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿಯವೆಉ ಇಂದು ಬೆಳಗ್ಗೆ ಭೇಟಿ ನೀಡಿದ್ದಾರೆ.
ಅವರನ್ನು ಭಾಗೀರಥಿ ಮುರುಳ್ಯ ಹಾಗೂ ಸುಳ್ಯ ಬಿಜೆಪಿ ಮಂಡಲ ಸಮಿತಿ ವತಿಯಿಂದ ಸ್ವಾಗತಿಸಲಾಯಿತು.

. . . . . . . . .

ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ ಸಚಿವರು “ಪಕ್ಷ ಸಮಾಜದ ಕಟ್ಟಕಡೆಯ ಕಾರ್ಯಕರ್ತರನ್ನೂ ಗುರುತಿಸಿದೆ. ಇದಕ್ಕೆ ಭಾಗೀರಥಿ ಅವರೇ ಸಾಕ್ಷಿ. ಇದು ಬಿಜೆಪಿ ಪಕ್ಷದಲ್ಲಿ ಮಾತ್ರ ಸಾಧ್ಯ, ಕಾರ್ಯಕರ್ತರಿಗೆ ರಾಷ್ಟ್ರಪತಿ ಆಗುವ ಅವಕಾಶ ಕೂಡ ಸಿಗಬಹುದು. ನಾವೆಲ್ಲರೂ ಒಟ್ಟಾಗಿ ಕೆಲಸ ಮಾಡಿ ಭಾಗೀರಥಿ ಮುರುಳ್ಯರನ್ನು ಬಹುಮತದಿಂದ ಗೆಲ್ಲಿಸಬೇಕು” ಎಂದರು.

. . . . . . .

ಈ ಸಂದರ್ಭದಲ್ಲಿ ಭಾಗೀರಥಿ ಮುರುಳ್ಯ ಮತದಾರರ ಸಹಕಾರ ಬಯಸಿದರು.
ಸುಳ್ಯ ಬಿಜೆಪಿ ಮಂಡಲ ಸಮಿತಿ ಅಧ್ಯಕ್ಷ ಹರೀಶ್ ಕಂಜಿಪಿಲಿ, ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ. ತೀರ್ಥರಾಮ, ಮಂಡಲ ಸಮಿತಿ ಸದಸ್ಯ ಅನೂಪ್ ಬಿಳಿಮಲೆ, ಸಾಮಾಜಿಕ ಜಾಲತಾನ ಸಂಚಾಲಕ ಪ್ರಸಾದ್ ಕಾಟೂರ್, ಸುಳ್ಯ ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಪ್ರಮುಖ್ ವಿನಯ್ ಕುಮಾರ್ ಮುಳುಗಾಡು, ಬಿಜೆಪಿ ಬೆಳ್ಳಾರೆ ಮಹಾಶಕ್ತಿಕೇಂದ್ರದ ಅಧ್ಯಕ್ಷ ವಸಂತ ನಡುಬೈಲು, ಎಣ್ಮೂರು ಮುರುಳ್ಯ ಪ್ರಾ.ಕೃ.ಪ.ಸ.ಸಂಘದ ಮಾಜಿ ಅಧ್ಯಕ್ಷ ವಸಂತ ಹುದೇರಿ, ಮುರುಳ್ಯ ಗ್ರಾ.ಪಂ. ಅಧ್ಯಕ್ಷೆ ಕು. ಜಾನಕಿ ಮುರುಳ್ಯ, ಉಪಾಧ್ಯಕ್ಷೆ ಶ್ರೀಮತಿ ವನಿತಾ ಸುವರ್ಣ, ಬೂತ್ ಸಮಿತಿ ಅಧ್ಯಕ್ಷರಾದ ಮೋನಪ್ಪ ಆಲೇಕಿ, ಬೂತ್ ಕಾರ್ಯದರ್ಶಿ ಕರುಣಾಕರ ಕಳತ್ತಜೆ, ನೇಮೀಶ್ ಕಡೀರ, ಮುರುಳ್ಯ ಹಾಲು ಉತ್ಪಾದಕರ ಸಹಕಾರಿ ಸಂಘದ ಅಧ್ಯಕ್ಷ ಅಶೋಕ್ ಕುಮಾರ್ ರೈ, ಊರುಸಾಗು, ಮುರುಳ್ಯ ಗ್ರಾ.ಪಂ. ಸದಸ್ಯರುಗಳಾದ ಕರುಣಾಕರ ಗೌಡ, ಶೀಲಾವತಿ ಗೋಳ್ತಿಲ, ಪುಷ್ಪಾವತಿ ಕುಕ್ಕಟೆ, ಸೋಮನಾಥ ಪೂಜಾರಿ, ಹಿಂದುಳಿದ ಮೋರ್ಚಾ ಜಿಲ್ಲಾಧ್ಯಕ್ಷ ಆರ್.ಸಿ. ನಾರಾಯಣ ಬೂತ್ ಸಮಿತಿ ಅಧ್ಯಕ್ಷ ಮೋನಪ್ಪ ಗೌಡ ಅಲೇಕಿ, ಸುಳ್ಯ ಪಿ.ಎಲ್.ಡಿ. ಬ್ಯಾಂಕ್ ಅಧ್ಯಕ್ಷ ನಿಂತಿಕಲ್ಲು ವನದುರ್ಗಾ ಸಾನಿಧ್ಯ ಸಮಿತಿ ಅಧ್ಯಕ್ಷ ರೂಪರಾಜ್ ರೈ ಕೆ, ಸಮಿತಿ ಸದಸ್ಯ ಉಮೇಶ್ ರೈ ಮರುವಂಜ, ಪೂದೆ ಗಣಪತಿ ಮಲ್ಲಿಕಾರ್ಜುನ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ವರ ಪೂದೆ, ಬೆಳಂದೂರು ಮಹಾಶಕ್ತಿ ಕೇಂದ್ರದ ಅಧ್ಯಕ್ಷ ಅನೂಪ್ ಆಳ್ವ, ಸಾಮಾಜಿಕ ಜಾಲತಾನದ ರವಿವರ್ಮ, ಅರುಣ್ ರೈ ಗೆಜ್ಜೆ, ಕರುಣಾಕರ ರೈ ಮರಿಕೈ ಮತ್ತಿತರ ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಸಂತ ನಡುಬೈಲು ವಂದಿಸಿದರು.


Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading