ಬಿಜೆಪಿ ಅಭ್ಯರ್ಥಿ ಭಾಗೀರಥಿ ಮುರುಳ್ಯರವರು ನಾಯಕರು ಹಾಗೂ ಕಾರ್ಯಕರ್ತರ ಜತೆ ಗುತ್ತಿಗಾರಿನಲ್ಲಿ ಇಂದು ರೋಡ್ ಶೋ ಮೂಲಕ ಪ್ರಚಾರ ನಡೆಸಿದರು. ಪಂಜ ಕ್ರಾಸ್ ನಿಂದ ನೂರಾರು ಕಾರ್ಯಕರ್ತರೊಂದಿಗೆ ಆರಂಭವಾದ ರೋಡ್ ಶೊ ಮುಖ್ಯ ಪೇಟೆಯಲ್ಲಿ ಸಾಗಿ ಮುತ್ತಪ್ಪ ನಗರದವರೆಗೆ ಸಾಗಿ ಬಂದು ಪೇಟೆಯ ಬಸ್ಸುತಂಗುದಾಣದಲ್ಲಿ ಸಂಪನ್ನಗೊಂಡಿತ್ತು. ಅಭ್ಯರ್ಥಿ ಭಾಗೀರಥಿ ಮುರುಳ್ಯ, ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ,ಎಸ್,ಎನ್ ಮನ್ಮಥ, ಎ.ವಿ.ತೀರ್ಥರಾಮ, ವೆಂಕಟ್ ವಳಲಂಬೆ, ವಿನಯ್ ಕುಮಾರ್ ಮುಳುಗಾಡು, ವೆಂಕಟ್ ದಂಬೆಕೋಡಿ, ಶೈಲೇಶ್ ಅಂಬೆಕಲ್ಲು ಹಾಗೂ ಪಕ್ಷದ ಪ್ರಮುಖರು,ಹಿರಿಯರು,ಮಹಿಳಾ ಪ್ರಮುಖರು, ಮಹಾ ಶಕ್ತಿಕೇಂದ್ರ ಪ್ರಮುಖರು, ಗ್ರಾಮಪಂಚಾಯತ್ ಸದಸ್ಯರು,ಕಾರ್ಯಕರ್ತರು ಉಪಸ್ಥಿತರಿದ್ದರು.
- Saturday
- September 21st, 2024