Ad Widget

🩸ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ🩸

ಸುಳ್ಯ ರೆಡ್ ಕ್ರಾಸ್ ಘಟಕದ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆ.ಜೀವ ರಕ್ಷಿಸುವ ರಕ್ತದಾನ ಕ್ಕಿಂತ ಮಿಗಿಲಾದ ದಾನವಿಲ್ಲ, ಹಕ್ಕು ಮತ್ತು ಕರ್ತವ್ಯದ ಮತದಾನಕ್ಕಿಂತ ಮಿಗಿಲಾದ ಸೇವೆಯಿಲ್ಲ :ಪಿ. ಬಿ. ಸುಧಾಕರ್ ರೈ ಸುಳ್ಯ ರೆಡ್ ಕ್ರಾಸ್ ವತಿಯಿಂದ ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನು ವರ್ತಕರ ಸಮುದಾಯ ಭವನದಲ್ಲಿ ಆಚರಿಸಲಾಯಿತು. ಅಧ್ಯಕ್ಷತೆಯನ್ನು ರೆಡ್ ಕ್ರಾಸ್ ಸುಳ್ಯ ಘಟಕದ ಸಭಾಪತಿ ಪಿ.ಬಿ.ಸುಧಾಕರ್ ರೈ ವಹಿಸಿದ್ದರು. ಉಪ ಸಭಾಪತಿ ಕೆ.ಎಂ. ಮುಸ್ತಫ, ಸುಳ್ಯ ನಗರ ಪಂಚಾಯತ್ ಸದಸ್ಯ ಸುಧಾಕರ್, ರೆಡ್ ಕ್ರಾಸ್ ಖಜಾಂಚಿ ವಿನಯಕುಮಾರ್, ನಿರ್ದೇಶಕರುಗಳಾದ ಶ್ರೀಮತಿ ಪದ್ಮಿನಿ, ಪ್ರಥ್ವಿಕುಮಾರ್ ಮೊದಲಾದವರು ಭಾಗವಹಿಸಿದ್ದರು, ಸಭಾಪತಿ ಪಿ ಬಿ ಸುಧಾಕರ್ ರೈ ಕೆವಿಜಿ ಬ್ಲಡ್ ಬ್ಯಾಂಕ್ ರಕ್ತದಾನ ಮಾಡಿ ದಿನಾಚರಣೆಯನ್ನು ಅರ್ಥಪೂರ್ಣವಾಗಿಸಿದರು1828 ಮೇ 8 ರಂದು ಜನಿಸಿದ ರೆಡ್ ಕ್ರಾಸ್ ಸಂಸ್ಥೆಯ ಸಂಸ್ಥಾಪಕ ಸರ್, ಹೆನ್ನಿ ಡುವಾನಾತ್ ಇವರ ಜನ್ಮದಿನಾಚರಣೆಯನ್ನು ವಿಶ್ವ ರೆಡ್ ಕ್ರಾಸ್ ದಿನಾಚರಣೆಯನ್ನಾಗಿ ಆಚರಿಸಲಾಗುತ್ತಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!