Ad Widget

ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ

ವಿಧಾನ ಸಭಾ ಚುನಾವಣೆಯಲ್ಲಿ ಸುಳ್ಯ ಕೇತ್ರದ ಬಿಜೆಪಿ ಅಭ್ಯರ್ಥಿ ಕು.ಭಾಗೀರಥಿ ಮುರುಳ್ಯರವರು ಭರ್ಜರಿ ಜಯಗಳಿಸಿದ ಹಿನ್ನಲೆಯಲ್ಲಿ ಸುಳ್ಯದಲ್ಲಿ ಬಿಜೆಪಿ ವಿಜಯೋತ್ಸವ ಆಚರಿಸಿತು.ಬಿಜೆಪಿ ಕಚೇರಿ ಎದುರು ನಡೆದ ವಿಜಯೋತ್ಸವದಲ್ಲಿ ಮಾತನಾಡಿದ ಮೀನುಗಾರಿಕಾ ನಿಗಮಾಧ್ಯಕ್ಷ ಎ.ವಿ.ತೀರ್ಥರಾಮರವರು ಸುಳ್ಯ ಬಿಜೆಪಿಯ ಭದ್ರಕೋಟೆಯೆಂದು ಸುಳ್ಯದ ಮತದಾರರು ಮತ್ತೊಮ್ಮೆ ಸಾಬೀತು ಪಡಿಸಿದ್ದಾರೆ. ಕಳೆದ ಬಾರಿಯ ಅಂತರದಿಂದ 5 ಸಾವಿರ ಹೆಚ್ಚು ಅಂತರದಿಂದ ಭಾಗೀರಥಿ ಮುರುಳ್ಯ ಗೆದ್ದಿದ್ದಾರೆ. ಇಲ್ಲಿ ಜನರಿಗೆ ನ್ಯಾಯ ಒದಗಿಸುವ ರೀತಿಯಲ್ಲಿ ನಾವು ಕೆಲಸ ಮಾಡಲಿzವೆ ಎಂದು ಹೇಳಿದರು. ಬಿಜೆಪಿಯ ಹಿರಿಯ ಮುಖಂಡ ಎಸ್.ಎನ್.ಮನ್ಮಥ ಮಾತನಾಡಿ ನಮ್ಮ ಆಭ್ಯರ್ಥಿ ಭಾಗೀರಥಿ ಮುರುಳ್ಯರವರು 30 ಸಾವಿರ ಮತಗಳ ಅಂತರದಿಂದ ಗೆದ್ದಿದ್ದಾರೆ. ಇದು ಕಾರ್ಯಕರ್ತರ ಗೆಲುವು. ಕಾಂಗ್ರೆಸ್ ಚುನಾವಣೆ ಸಂದರ್ಭ ಪ್ರಚಾರ ಮಾಡಿ ಭಾಗೀರಥಿಯವರು ಸ್ವಾಭಿಮಾನಿಗಳ ಅಭ್ಯರ್ಥಿ ಎಂದು ಹೇಳಿಕೊಂಡು ಹೋಗುತ್ತಿದ್ದರು. ಆದರೆ ಈ ಚುನಾವಣೆಯ ಮೂಲಕ ಅವರಿಗೆ ಮತದಾರ ಉತ್ತರ ನೀಡಿದ್ದಾನೆ. ಚುನಾವಣೆ ಸಂದರ್ಭ ನೀಡಿದ ಭರವಸೆ ಈಡೇರಿಕೆಗೆ ಭಾಗೀರಥಿಯವರ ಜತೆಗೆ ನಿಂತು ನಾವು ಕೆಲಸ ಮಾಡುತ್ತೇವೆ ಎಂದು ಹೇಳಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!