Ad Widget

ಆರ್ ಕೆ ನಾಯರ್ ಗೆ ರೋಟರಿ ವನ ಸಿರಿ ಪ್ರಶಸ್ತಿ ಪ್ರದಾನ

ಪರಿಸರದ ಪ್ರತಿಯೊಂದು ಜೀವಿಗೂ ಪ್ರಾಮುಖ್ಯತೆಯನ್ನು ನೀಡುವ ಜವಾಬ್ದಾರಿ ಮಾನವನಿಗೆ ಇದ್ದರೆ ಮಾತ್ರ ಪರಿಸರ ಸಂರಕ್ಷಣೆ ಮಾಡಬಹುದು. ಇದರ ಸೂಕ್ಷ್ಮತೆಯನ್ನು ಅರಿತು ಪ್ರತಿಯೊಬ್ಬರೂ ಪರಿಸರ ಸ್ನೇಹಿಯಾಗಿ ಬದುಕಬೇಕು ಎಂದು ಗ್ರೀನ್ ಹೀರೋ ಆಫ್ ಇಂಡಿಯಾ ಆರ್ ಕೆ ನಾಯರ್ ಇವರು ಕಾಡುಗಳು ಹಾಗೂ ಪರಿಸರ ಪ್ರಜ್ಞೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು ಹಾಗೂ ಪ್ರತಿ ರೋಟರಿ...

ಸುಳ್ಯ: ಅರಳು ಮಲ್ಲಿಗೆ ಬೇಸಿಗೆ ಶಿಬಿರ ಸಮಾರೋಪ ಸಮಾರಂಭ

ರಾಜ್ಯ ಬಾಲಭವನ ಸೊಸೈಟಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ತಾಲೂಕು ಬಾಲಭವನ ಸಮಿತಿ ಸುಳ್ಯ, ಸಮಗ್ರ ಶಿಶು ಅಭಿವೃದ್ಧಿ ಸೇವಾ ಯೋಜನೆ ಸುಳ್ಯ ದ.ಕ. ಸ್ವರ ಮಾಧುರ್ಯ ಬಳಗ ಪುತ್ತೂರು ದ.ಕ. ವತಿಯಿಂದ ಸುಳ್ಯ ತಾಲೂಕು ಸ್ತ್ರೀಶಕ್ತಿ ಭವನದಲ್ಲಿ ಒಂದು ವಾರ ನಡೆದ ಅರಳು ಮಲ್ಲಿಗೆ ಬೇಸಿಗೆ ಶಿಬಿರದ ಸಮಾರೋಪ ಸಮಾರಂಭ ಮೇ.26ರಂದು ನಡೆಯಿತು....
Ad Widget

ನ.ಪಂ ಕಸ ವಿಲೇವಾರಿ ಮುಕ್ತಾಯ: ಶಾರಿಖ್

ಮೇ.24ರಂದು ಸುಳ್ಯದ ನಗರ ಪಂಚಾಯತ್ ನಲ್ಲಿ ಡಿ.ಯಂ ಶಾರಿಖ್ ನವರು ಈ ಹಿಂದೆ ಲೋಕಾಯುಕ್ತಕ್ಕೆ 2019ನೇ ಇಸವಿಯಲ್ಲಿ ನೀಡಿದ ದೂರಿನ ಕುರಿತು ದ. ಕ ಜಿಲ್ಲಾ ನಗರಾಭಿವೃದ್ಧಿ ಕೋಶ ಮಂಗಳೂರು ಇದರ ಯೋಜನಾ ನಿರ್ದೇಶಕರ ಸೂಚನೆ ಮೇರೆಗೆ (ಲೋಕಾಯುಕ್ತ ಅಧಿಕಾರಿಗಳ ಸೂಚನೆ ಪ್ರಕಾರ) ಕಾರ್ಯನಿರ್ವಹಕ ಇಂಜಿನಿಯರ್ ಶ್ರೀ ಅರುಣ್ ಕುಮಾರ್ ತನಿಖೆ ನಡೆಸಿದ್ದು ಪಂಚಾಯಿತ್ ನ...

ತುಳುನಾಡಿನ ವಿಶಿಷ್ಟ ಪರ್ವ ದಿನ ಪತ್ತನಾಜೆ

ಅನಾದಿ ಕಾಲದಿಂದಲೇ ತುಳುನಾಡಿನ ಜನ ತಮಗೆ ತಾವೇ ವಿಧಿಸಿಕೊಂಡು ಬಂದ ಧಾರ್ಮಿಕ, ಸಾಮಾಜಿಕ ಆಚರಣೆಗಳ ಗಡುವೇ ಈ ಪತ್ತನಾಜೆ. ತುಳುನಾಡಿನಲ್ಲಿ ಹಬ್ಬದ ಋತುವಿನ ಕೊನೆಯ ಒಂದು ದಿನದ ಆಚರಣೆ ಇದಾಗಿದೆ. ಇದು ಒಂದು ನಿಗದಿತ ದಿನದ ಆಚರಣೆಯಾಗಿದ್ದು, ತುಳುವಿನಲ್ಲಿ ಪಗ್ಗು, ಬೇಸ, ಕಾರ್ತಿಲ್, ಆಟಿ, ಸೋಣ, ನಿರ್ನಾಲ್, ಬೊಂತೆಲ್ ಜಾರ್ದೆ, ಪೆರಾರ್ದೆ, ಪೊನ್ನಿ, ಮಾಯಿ, ಸುಗ್ಗಿ...

ಸುಳ್ಯ: ಪ್ರಾಕೃತಿಕ ವಿಕೋಪ – ಮುಂಜಾಗ್ರತಾ ಸಭೆ ಟಾಸ್ಕ್ ಫೋರ್ಸ್ ರಚಿಸಲು ಸೂಚನೆ

ಮಳೆಗಾಲ ಆರಂಭಗೊಳ್ಳುತ್ತಿದ್ದು, ಇದರಿಂದ ಉಂಟಾಗುವ‌ ಪ್ರಾಕೃತಿಕ ವಿಕೋಪದ ಬಗ್ಗೆ ಮುಂಜಾಗ್ರತಾ ಕ್ರಮ ಕೈಗೊಳ್ಳುವ ಕುರಿತು ಬುಧವಾರ ಸುಳ್ಯ ತಹಶೀಲ್ದಾರ್ ಮಂಜುನಾಥ್ ಅವರ ಅಧ್ಯಕ್ಷತೆಯಲ್ಲಿ ತಾಲೂಕು ಮಟ್ಟದ ಅಧಿಕಾರಿಗಳು, ಪಿಡಿಒ, ಗ್ರಾಮ ಲೆಕ್ಕಾಧಿಕಾರಿಗಳ ಸಭೆಯು ತಾಲೂಕು ಪಂಚಾಯತ್ ಸಭಾಂಗಣದಲ್ಲಿ ನಡೆಯಿತು. ವೇದಿಕೆಯಲ್ಲಿತಾಲೂಕು ಪಂಚಾಯತ್ ಇ.ಒ. ಭವಾನಿಶಂಕರ್ ಉಪಸ್ಥಿತರಿದ್ದರು.ಪ್ರಾಕೃತಿಕ ವಿಕೋಪ ಸಂಭವಿಸಿದರೆ ತಕ್ಷಣ ಕ್ರಮ ಕೈಗೊಳ್ಳಲು ಗ್ರಾಮ ಲೆಕ್ಕಾಧಿಕಾರಿಗಳು...

ತೋಟಕ್ಕೆ ಹೋಗಿದ್ದ ಮಹಿಳೆ ಕುಸಿದು ಬಿದ್ದು ಮೃತ್ಯು

ಸುಳ್ಯ: ಅಜ್ಜಾವರ ಗ್ರಾಮದ ಮಾರ್ಗ ಮನೆ ರಾಮಚಂದ್ರ ಎಂಬವರ ಪತ್ನಿ ಅನಿತಾ (40)ಎಂಬವರು ತಮ್ಮ ತೋಟಕ್ಕೆ ಹೋಗಿದ್ದಾಗ ಅಲ್ಲಿ ಕುಸಿದು ಬಿದ್ದು‌ ಮೃತಪಟ್ಟ ಘಟನೆ ಬುಧವಾರ ಸಂಭವಿಸಿದೆ. ರಾಮಚಂದ್ರರು ಬೆಳಗ್ಗೆ ಸುಳ್ಯಕ್ಕೆ ಹೋಗಿದ್ದಾಗ ಈ ಘಟನೆ ಸಂಭವಿಸಿದೆ. ಅವರು ಮಧ್ಯಾಹ್ನ ಮನೆಗೆ ಹೋದಾಗ ಪತ್ನಿ ಮನೆಯಲ್ಲಿ ಕಾಣಿಸಲಿಲ್ಲ. ತೋಟಕ್ಕೆ ಹೋಗಿರಬಹುದೆಂದು ಅವರನ್ನು ಹುಡುಕಿಕೊಂಡು ತೋಟಕ್ಕೆ ಹೋದಾಗ...

ಪಂಜ: ನಾಯರ್ ಕೆರೆಯಲ್ಲಿ ನಾಗದೇವರ ಪ್ರತಿಷ್ಠೆ

ಪಂಜದ ಅಳ್ಪೆ ನಾಯರ್ ಕೆರೆ ಕುಟುಂಬದ ನಾಗನಕಟ್ಟೆಯಲ್ಲಿ ನಾಗಬ್ರಹ್ಮ,ನಾಗಕನ್ನಿಕೆ, ನಾಗರಾಜ,ಒಂಟಿ ನಾಗರ ದೇವರುಗಳ ಪ್ರತಿಷ್ಠೆಯು ಅರ್ಚಕ ರಘುರಾಮ ಆಮ್ಮಣ್ಣಾಯ ರವರ ನೇತೃತ್ವದಲ್ಲಿ ಮೇ.24ರಂದು ಜರುಗಿತು.ಮೇ.20 ರಂದು ಆರಂಭಗೊಂಡು ಸರ್ಪಸಂಸ್ಕಾರ , ಆಶ್ಲೇಷ ಬಲಿ, ಗಣಹೋಮ ಮೊದಲಾದ ವೈಧಿಕ ಕಾರ್ಯಕ್ರಮಗಳು ಜರುಗಿತು.ಕುಟುಂಬಸ್ಥರು, ನೆಂಟರಿಷ್ಟರು, ಊರವರು ಉಪಸ್ಥಿತರಿದ್ದ

ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್ ಅವಿರೋಧ ಆಯ್ಕೆ

ನೂತನ ವಿಧಾನಸಭಾ ಸ್ಪೀಕರ್​ ಆಗಿ ಯು.ಟಿ. ಖಾದರ್​ ಅವರು ಅವಿರೋಧವಾಗಿ ಆಯ್ಕೆಯಾಗಿದ್ದು, ಸಭಾಧ್ಯಕ್ಷ ಪೀಠವನ್ನು ಅಲಂಕರಿಸಿದ್ದಾರೆ.ವಿಧಾನಸಭಾಧ್ಯಕ್ಷ ಸ್ಥಾನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಯು.ಟಿ. ಖಾದರ್​ ಅವರ ಹೆಸರನ್ನು ಸದನದಲ್ಲಿಂದು ಸೂಚಿಸಿದರು. ಬಳಿಕ ಉಪಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ಅವರು ಖಾದರ್​ ಹೆಸರನ್ನು ಅನುಮೋದಿಸಿದರು. ನಂತರ ಬಹುಮತದ ಮೂಲಕ ಖಾದರ್​ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಯಿತು. ಆಯ್ಕೆಯಾದ...

ಗುತ್ತಿಗಾರು : ಕಿರಣ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭ

ಗುತ್ತಿಗಾರಿನ ಕಿರಣ ರಂಗ ಅಧ್ಯಯನ ಸಂಸ್ಥೆಯ ವತಿಯಿಂದ ವಳಲಂಬೆ ಶ್ರೀ ಶಂಖಪಾಲ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಒಂದು ವಾರಗಳ ಕಾಲ ನಡೆದ ಯೋಗ ತರಬೇತಿ ಶಿಬಿರದ ಸಮಾರೋಪ ಸಮಾರಂಭವು ಮೇ.20 ರಂದು ನಡೆಯಿತು.ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಬಿ.ಕೆ ಬೆಳ್ಯಪ್ಪ ಗೌಡ ರವರು ಮಾತನಾಡುತ್ತಾ “ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕು. ಬೆಳಿಗ್ಗೆ...

ಅರಂತೋಡಿನಲ್ಲಿ ಕಾರು – ಸ್ಕೂಟಿ ಅಪಘಾತ : ನವೀನ್ ಸಂಕೇಶ ಸ್ಥಳದಲ್ಲೇ ಮೃತ್ಯು

ಅರಂತೋಡು ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಸ್ಕೂಟಿ ಡಿಕ್ಕಿಯಾದ ಪರಿಣಾಮ ಸ್ಕೂಟಿ ಸವಾರ ನವೀನ್ ಸಂಕೇಶ ರಸ್ತೆಗೆ ಎಸೆಯಲ್ಪಟ್ಟು ಸ್ಥಳದಲ್ಲೇ ಮೃತಪಟ್ಟಿದ್ದಾರೆ.ಮುತ್ತೂಟು ಫೈನಾನ್ಸ್ ಸಂಸ್ಥೆಯಲ್ಲಿ ಇವರು ಕೆಲಸ ನಿರ್ವಹಿಸುತ್ತಿದ್ದರು.
Loading posts...

All posts loaded

No more posts

error: Content is protected !!