Ad Widget

ಕಾಯರ್ತೋಡಿ ಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವ ಲೆಕ್ಕಪತ್ರ ಮಂಡನಾ ಸಭೆ

ಸುಳ್ಯ ನಗರದ ಕಾಯರ್ತೋಡಿಮಹಾವಿಷ್ಣು ದೇವಸ್ಥಾನದ ಬ್ರಹ್ಮಕಲಶೋತ್ಸವವು ಇತ್ತೀಚೆಗೆ ಯಶಸ್ವಿಯಾಗಿ ನೆರವೇರಿದ್ದು, ಬ್ರಹ್ಮಕಲಶದ ಲೆಕ್ಕಪತ್ರ ಮಂಡನಾ ಸಭೆಯು ಜೂ.4ರಂದು ಸಂಜೆ ದೇವಸ್ಥಾನದಲ್ಲಿ ಜರುಗಿತು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬ್ರಹ್ಮಕಲಶೋತ್ಸವ ಸಮಿತಿಯ ಅಧ್ಯಕ್ಷ ಕೃಷ್ಣ ಕಾಮತ್ ಅರಂಬೂರು ಅವರು ವಹಿಸಿದ್ದರು. ಆರ್ಥಿಕ ಸಮಿತಿಯ ಸಂಚಾಲಕರಾದ ನಾರಾಯಣ ಕೇಕಡ್ಕ ಅವರು ಲೆಕ್ಕಪತ್ರ ಮಂಡಿಸಿದರು. ಬ್ರಹ್ಮಕಲಶೋತ್ಸವದ ಉಳಿಕೆಯ ಮೊತ್ತದಲ್ಲಿ ದೇವಸ್ಥಾನದ ಹೊರಂಗಣ ಗ್ರ್ಯಾನೈಟ್ ಅಳವಡಿಕೆ...

ಸುಳ್ಯ ರೆಪ್ಕೋ ಬ್ಯಾಂಕ್ ಪ್ರಧಾನ ವ್ಯವಸ್ಥಾಪಕರಾಗಿ ಕಲೈಅರಸನ್

ಸುಳ್ಯ ರೆಪ್ಕೋ ಬ್ಯಾಂಕ್ ನ ಪ್ರಧಾನ ವ್ಯವಸ್ಥಾಪಕರಾಗಿ ಕಲೈಅರಸನ್ ರವರು ಇತ್ತೀಚೆಗೆ ಅಧಿಕಾರ ವಹಿಸಿಕೊಂಡಿದ್ದಾರೆ. ಇವರು ತಮಿಳುನಾಡು ರೆಪ್ಕೋ ಬ್ಯಾಂಕ್ ನಲ್ಲಿ ಮೆನೇಜರ್ ಆಗಿ ಸೇವೆ ಸಲ್ಲಿಸಿ ಇತ್ತೀಚೆಗೆ ಪದೋನ್ನತಿಗೊಂಡು ಸುಳ್ಯ ಶಾಖೆಗೆ ವರ್ಗಾವಣೆಗೊಂಡು ಬಂದಿದ್ದಾರೆ. ಸುಳ್ಯ ರೆಪ್ಕೋ ಬ್ಯಾಂಕಿನಲ್ಲಿ ಮೆನೇಜರ್ ಆಗಿದ್ದ ಪದ್ಮನಾಭ ಶೆಟ್ಟಿಯವರು ಬೆಂಗಳೂರು ರೆಪ್ಕೋ ಬ್ಯಾಂಕಿಗೆ ವರ್ಗಾವಣೆಗೊಂಡಿದ್ದಾರೆ.
Ad Widget

ಸಂಪಾಜೆ : ಶಾಸಕಿ ಭಾಗೀರಥಿ ಮುರುಳ್ಯ ಭೇಟಿ, ಸನ್ಮಾನ

ಸುಳ್ಯ ವಿಧಾನ ಸಭಾಕ್ಷೇತ್ರದ ನೂತನ ಶಾಸಕಿ ಭಾಗೀರಥಿ ಮುರುಳ್ಯರು ಯಕ್ಷಗಾನ ಕಲಾವಿದಜಯಾನಂದ ಸಂಪಾಜೆ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಶಾಸಕರಿಗೆ ಗೌರವ ಸಲ್ಲಿಸಲಾಯಿತು. ಈ ಸಂದರ್ಭದಲ್ಲಿ ಸುಳ್ಯ ಮಂಡಲ ಪ್ರಮುಖರಾದ ಹರೀಶ್ ಕಂಜಿಪಿಲಿ, ರಾಕೇಶ್ ರೈ ಕೆಡೆಂಜಿ, ಸಂತೋಷ್ ಕುತ್ತಮೊಟ್ಟೆ ಮತ್ತು ಮಹಿಳಾ ಪ್ರಮುಖರು, ಮನೆಯವರು ಉಪಸ್ಥಿತರಿದ್ದರು.
error: Content is protected !!