Ad Widget

ಪೆರುವಾಜೆ : ಬಿಜೆಪಿಯ ಹಿರಿಯ ಕಾರ್ಯಕರ್ತರ ಜೊತೆ ಸಂವಾದ

ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ 9 ವರ್ಷಗಳನ್ನು ಪೂರೈಸಿದ ಹಿನ್ನೆಲೆಯಲ್ಲಿ ಸುಳ್ಯ ಮಂಡಲ ಮಟ್ಟದ ಹಿರಿಯ ಕಾರ್ಯಕರ್ತರೊಡನೆ ಸಂವಾದ ಕಾರ್ಯಕ್ರಮ ಇಂದು ಪೆರುವಾಜೆ ಜೆ ಡಿ ಆಡಿಟೋರಿಯಂ ನಲ್ಲಿ ನಡೆಯಿತು.


ಈ ಸಂವಾದ ಕಾರ್ಯಕ್ರಮವನ್ನು ರಾಜ್ಯ ಬಿಜೆಪಿ ವಕ್ತಾರ,ವಿಧಾನ ಪರಿಷತ್ ನ ಮಾಜಿ ಸದಸ್ಯರಾದ ಸನ್ಮಾನ್ಯ ಕ್ಯಾಪ್ಟನ್ ಗಣೇಶ್ ಕಾರ್ಣಿಕ್ ರವರು ನೆರವೇರಿಸಿದರು. ಈ ಕಾರ್ಯಕ್ರಮದಲ್ಲಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಆಧ್ಯಕ್ಷತೆಯನ್ನು ವಹಿಸಿದ್ದರು. ಮಂಡಲ ಪ್ರಮುಖರಾದ ಎ.ವಿ ತೀರ್ಥರಾಮ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪಕ್ಷದ ಹಿರಿಯ ಕಾರ್ಯಕರ್ತರು ವಿವಿಧ ರೀತಿಯಲ್ಲಿ ತಮ್ಮ ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡರು.
ಹಿರಿಯ ಕಾರ್ಯಕರ್ತರು, ಮಂಡಲ ಪ್ರಮುಖರು, ಮಹಾ ಶಕ್ತಿಕೇಂದ್ರ ,ಶಕ್ತಿಕೇಂದ್ರ, ಬೂತ್ ನ ಪ್ರಮುಖರು ಸಂವಾದ ಕಾರ್ಯಕ್ರಮದಲ್ಲಿ ಅವರು ಪಾಲ್ಗೊಂಡಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!