ಸುಳ್ಯ : ಬೆಳ್ಳಾರೆಯ ಉದ್ಯಮಿ, ಸಮಾಜ ಸೇವಕ, ಪ್ರಸಾದ್ ಹಾರ್ಡ್ ವೇರ್ಸ್ ಸಂಸ್ಥೆಯ ಮಾಲಕ ಸುಬ್ರಹ್ಮಣ್ಯ ಜೋಶಿಯವರ ಪುತ್ರ ಶರತ್ ಜೋಷಿ (21) ಶುಕ್ರವಾರ ರಾತ್ರಿ ಇದ್ದಕ್ಕಿದ್ದಂತೆ ಅಸೌಖ್ಯಕ್ಕೊಳಗಾಗಿ ಮೃತಪಟ್ಟ ಘಟನೆ ವರದಿಯಾಗಿದೆ. ಅವರು ಮಂಗಳೂರಿನ ಶ್ರೀನಿವಾಸ ಕಾಲೇಜಿನಲ್ಲಿ ಎಂ.ಬಿ.ಎ ವ್ಯಾಸಂಗ ಮಾಡುತ್ತಿದ್ದು, ಶುಕ್ರವಾರ ಪರೀಕ್ಷೆ ಬರೆದು ಮನೆಗೆ ಬಂದಿದ್ದರು.
ರಾತ್ರಿ ವೇಳೆ ತೀವ್ರ ಅಸೌಖ್ಯಕ್ಕೊಳಗಾಗಿ ಆಸ್ಪತ್ರೆಗೆ ತೆರಳುವ ಮೊದಲೇ ನಿಧನದಾರರೆಂದು ತಿಳಿದುಬಂದಿದೆ. ಮೃತರು ತಂದೆ ಸುಬ್ರಹ್ಮಣ್ಯ ಜೋಷಿ, ತಾಯಿ ಶ್ಯಾಮಲ ಎಸ್. ಜೋಶಿ, ಸಹೋದರಿ ಡಾ. ಶರಣ್ಯ ಅಖಿಲೇಶ್ ಸೇರಿದಂತೆ ಕುಟುಂಬಸ್ಥರು, ಬಂಧು ಮಿತ್ರರನ್ನು ಅಗಲಿದ್ದಾರೆ.
- Sunday
- September 22nd, 2024