Ad Widget

ವಳಲಂಬೆ : ದೇವಣ್ಣ ಗೌಡ ನಡುಮನೆ ನಿಧನ

ಗುತ್ತಿಗಾರು ಗ್ರಾಮದ ವಳಲಂಬೆ ನಡುಮನೆ ದೇವಣ್ಣ ಗೌಡರು ಜೂ. 20 ರಂದು ಅಲ್ಪ ಕಾಲದ ಅಸೌಖ್ಯದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರು ಪುತ್ರರಾದ ಸುಧೀರ್, ಕಿಶನ್, ಪುತ್ರಿ ಶ್ರೀಮತಿ ಮಧುರ, ಸಹೋದರ,ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.

ಉತ್ತರಕನ್ನಡದಿಂದ ಸುಳ್ಯಕ್ಕೆ ಬಂದಿದ್ದ ಮಹಿಳೆ ಊರಿನತ್ತ ಪ್ರಯಾಣ

ಉತ್ತರಕನ್ನಡ ಜಿಲ್ಲೆ ಹೊನ್ನಾವರದ ಮಹಿಳೆಯೊಬ್ಬರು ನಿನ್ನೆ ಸಂಜೆ ಸುಳ್ಯ ಬಸ್ ನಿಲ್ದಾಣದಲ್ಲಿ ಪತ್ತೆಯಾಗಿದ್ದು, ಪೋಲೀಸರಿಗೆ ಆಕೆಯನ್ನು ಠಾಣೆಗೆ‌ ಕರೆದುಕೊಂಡು ಹೋಗಿ ವಿಚಾರಿಸಿದರೂ ಯಾವುದೇ ಮಾಹಿತಿ ಆಕೆ ನೀಡುತ್ತಿರಲಿಲ್ಲ. ರಾತ್ರಿಯಾದುದರಿಂದ ಪೋಲೀಸರು ಆಕೆಯನ್ನು ಸುಳ್ಯದ ಸಾಂತ್ವನ ಕೇಂದ್ರಕ್ಕೆ ಸೇರಿಸಿದರು.ಮಹಿಳೆ ಹೊನ್ನಾವರದರೆಂದು ಆಕೆಯ ಆಧಾರ್ ಕಾರ್ಡ್ ನಿಂದ ಗೊತ್ತಾಗಿ ಅವರ ಮನೆಯವರ ಹುಡುಕಾಟ ನಡೆಸಲಾಗಿತ್ತು. ಮನೆಯವರು ಯಾರೆಂದು ಗೊತ್ತಾಗಿ...
Ad Widget

ನಾಗಪಟ್ಟಣ:ಯುವಕ ನೇಣು ಬಿಗಿದು ಆತ್ಮಹತ್ಯೆ

ಆಲೆಟ್ಟಿ ಗ್ರಾಮದ ನಾಗಪಟ್ಟಣ ಸಿ.ಆರ್.ಸಿ ಕಾಲನಿಯ ಯವಕನೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ವರದಿಯಾಗಿದೆ.ನಾಗಪಟ್ಟಣ ಸಿ .ಆರ್ .ಸಿ ಕಾಲನಿ ನಿವಾಸಿ ಮಣಿಕಂಠ ಎಂಬ ಯುವಕ ಸೋಮವಾರ ರಾತ್ರಿ ಮನೆಗೆ ಬಂದು ಬೈಕ್ ನಿಲ್ಲಿಸಿ ತಾಯಿಯ ಸೀರೆಯನ್ನು ತೆಗೆದುಕೊಂಡು ಹೋಗಿ ಸಮೀಪದ ಅಂಗನವಾಡಿ ಬಳಿಯ ಮಾವಿನಮರಕ್ಕೆ ನೇಣು ಹಾಕಿ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದುಬಂದಿದೆ.ಮಣಿಕಂಠ ಕಳೆದ...

ಶಾಸಕಿ ಭಾಗೀರಥಿ ಹಾಗೂ ಎ.ಸಿ.ಗಿರೀಶ್ ನಂದನ್ ಶಾಂತಿನಗರ ಕ್ರೀಡಾಂಗಣಕ್ಕೆ ಭೇಟಿ

ಸುಳ್ಯದ ಶಾಂತಿನಗರದಲ್ಲಿ ಕಾಮಗಾರಿ ನಡೆಯುತ್ತಿರುವ ತಾಲೂಕು ಕ್ರೀಡಾಂಗಣಕ್ಕೆ ವಿಧಾನಸಭಾ ಕ್ಷೇತ್ರದ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಪುತ್ತೂರು ವಿಭಾಗದ ಸಹಾಯಕ ಕಮಿಷನರ್ ಗಿರೀಶ್ ನಂದನ್ ರವರು ಜೂ.19ರಂದು ಭೇಟಿ ನೀಡಿ ಕಾಮಗಾರಿಯ ವೀಕ್ಷಣೆ ಮಾಡಿ ಅಧಿಕಾರಿಗಳಿಂದ ಸಂಪೂರ್ಣ ಮಾಹಿತಿಯನ್ನು ಪಡೆದುಕೊಂಡರು.ಕಾಮಗಾರಿಯನ್ನು ವೀಕ್ಷಿಸಿದ ಶಾಸಕರು ಕ್ರೀಡಾಂಗಣದ ಒಂದು ಭಾಗದಲ್ಲಿ ಹಾಕಿರುವ ಮಣ್ಣಿನಿಂದ ಸ್ಥಳೀಯ ಜನತೆ ಆತಂಕದಲ್ಲಿದ್ದು ಮಳೆಗಾಲದಲ್ಲಿ...

ಶಾಸಕರಿಂದ ತಾಲೂಕು ಅಂಬೇಡ್ಕರ್ ಭವನ ಪರಿಶೀಲನೆ ಕಾಮಗಾರಿಯನ್ನು 6 ತಿಂಗಳಲ್ಲಿ ಪೂರ್ಣಗೊಳಿಸಲು ಇಂಜಿನಿಯರ್‌ರಿಗೆ ಸೂಚನೆ

ಸುಳ್ಯದಲ್ಲಿ ನಿರ್ಮಾಣ ಹಂತದಲ್ಲಿರುವ ತಾಲೂಕು ಅಂಬೇಡ್ಕರ್ ಭವನ ಕಾಮಗಾರಿಯನ್ನು ಶಾಸಕಿ ಕು.ಭಾಗೀರಥಿ ಮುರುಳ್ಯ ಜೂನ್ .20 ರಂದು ಪರಿಶೀಲನೆ ನಡೆಸಿದರು.ಕಟ್ಟಡದ ಕುರಿತು ನಿರ್ಮಿತಿ ಕೇಂದ್ರದ ಇಂಜಿನಿಯರ್ ಹರೀಶ್ ಮೆದು ಅವರಿಂದ ಮಾಹಿತಿ ಪಡೆದರು. ಬಳಿಕ ಮಾತನಾಡಿದ ಶಾಸಕರು ವಾರದೊಳಗೆ ಕಾಮಗಾರಿಯನ್ನು ಆರಂಭಿಸಿ ಮುಂದಿನ 6 ತಿಂಗಳಲ್ಲಿ ಕಾಮಗಾರಿ ಪೂರ್ಣಗೊಳಿಸಬೇಕು. ಈಗ ಇರುವ ಅನುದಾನದಲ್ಲಿ ಕೆಲಸ ನಿರ್ವಹಿಸಿ,...

ಡಾ. ಆರ್. ಕೆ. ನಾಯರ್ ಅವರಿಗೆ ಮುಂಬೈಯಲ್ಲಿ ಅರಣ್ಯ ಬ್ರಹ್ಮ ಪ್ರಶಸ್ತಿ ಪ್ರದಾನ

ಮುಂಬೈಯ ಭ್ರಾಮರಿ ಯಕ್ಷ ನೃತ್ಯ ಕಲಾ ನಿಲಯ ಚಾರಿಟೇಬಲ್ ಟ್ರಸ್ಟ್ ವತಿಯಿಂದ ನೀಡಲಾಗುವ ಅರಣ್ಯ ಬ್ರಹ್ಮ ಪ್ರಶಸ್ತಿಗೆ ಗ್ರೀನ್ ಹೀರೋ ಆಫ್ ಇಂಡಿಯಾ ಡಾ.‌ಆರ್. ಕೆ.‌ ಭಾಜನರಾಗಿದ್ದು, ಮುಂಬೈಯಲ್ಲಿ ನಡೆದ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದಾನ ಮಾಡಲಾಯಿತು

ರಕ್ತದಾನಿ, ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಸುಧಾಕರ ರೈ ಅವರ ಕಾರು ಅಪಘಾತ, ಸುಧಾಕರ ರೈ ಅವರು ಅಪಾಯದಿಂದ ಪಾರು

ರಕ್ತದಾನಿ, ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಸುಧಾಕರ ರೈ ಅವರ ಕಾರು ಅಪಘಾತ, ಸುಧಾಕರ ರೈ ಅವರು ಅಪಾಯದಿಂದ ಪಾರುಖ್ಯಾತ ರಕ್ತದಾನಿಗಳಾದ ಸುಳ್ಯ ತಾಲೂಕು ರೆಡ್ ಕ್ರಾಸ್ ಸಭಾಪತಿ ಹಾಗೂ ಸುಳ್ಯ ತಾಲೂಕು ವರ್ತಕರ ಸಂಘದ ಅಧ್ಯಕ್ಷರಾದ ಸುಧಾಕರ ರೈ ಅವರ ಕಾರು ಜೂ.19 ರಂದು ಪುತ್ತೂರಿನ ಕುಂಬ್ರದ ಬಳಿ ಅಪಘಾತಗೊಂಡಿದ್ದು, ಕಾರು ಜಂಖಂಗೊಂಡಿದ್ದು,...
error: Content is protected !!