ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ದಕ್ಷಿಣ ಕನ್ನಡ ಜಿಲ್ಲಾ ಘಟಕದ ಅಧ್ಯಕ್ಷ ಗೋಪಾಲಕೃಷ್ಣ ತಿಳಿಸಿದ್ದಾರೆ.
- Sunday
- September 22nd, 2024