ಏನೆಕಲ್ಲು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಭಾಭವನದಲ್ಲಿ ಜೂ.15 ರಂದು ಯೋಗ ತರಬೇತಿ ಉದ್ಘಾಟನೆಗೊಂಡಿತು. ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ಭವಾನಿಶಂಕರ ಪೂಂಬಾಡಿ ಉದ್ಘಾಟಿಸಿದರು. ಉದ್ಘಾಟನಾ ಸಮಾರಂಭದ ಅತಿಥಿಗಳಾಗಿ ಕುಮಾರಸ್ವಾಮಿ ವಿದ್ಯಾಲಯದ ಸಂಚಾಲಕರಾದ ಚಂದ್ರಶೇಖರ.ಎನ್.ಕೆ ಉಪಸ್ಥಿತರಿದ್ದರು. ನಿರಂತರ ಯೋಗ ಕೇಂದ್ರದ ಶಿಕ್ಷಕರಾದ ಶರತ್ ಮರ್ಗಿಲಡ್ಕ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಯೋಗಪಟು ಅನ್ವಿತಾ ಶೆಟ್ಟಿ ಅವರು ಯೋಗ ನೃತ್ಯ ಮಾಡಿದರು. ಮೋಹಿತ್ ಜೇನುಕೋಡಿ ಕಾರ್ಯಕ್ರಮ ನಿರೂಪಣೆ ಮಾಡಿದರು. ಈ ಸಂದರ್ಭದಲ್ಲಿ ಪೋಷಕರು ಉಪಸ್ಥಿತರಿದ್ದರು. ಪ್ರತೀ ಗುರುವಾರ ಸಂಜೆ 5:00 ರಿಂದ 6:00 ರವರೆಗೆ ಯೋಗ ತರಗತಿಗಳು ನಡೆಯಲಿವೆ. ವಿಶೇಷವಾಗಿ ಯೋಗಾಸನ ಸ್ಪರ್ಧೆಗಳಿಗೆ ತರಬೇತಿ ನೀಡಲಾಗುವುದು ಎಂದು ಯೋಗ ಶಿಕ್ಷಕ ಶರತ್ ಮರ್ಗಿಲಡ್ಕ ಹೇಳಿದರು.
- Sunday
- September 22nd, 2024