Ad Widget

ಪೈಂಟಿಂಗ್ ಮಾಡುತ್ತಿದ್ದ ಯುವಕ ಬಿದ್ದು ಗಂಭೀರ ಜಖಂ

: ನಿರ್ಮಾಣ ಹಂತದಲ್ಲಿರುವ ಮನೆಗೆ ಪೈಂಟ್ ಮಾಡುತ್ತಿದ್ದ ಯುವಕನೋರ್ವ ಮೇಲಿನಿಂದ ಬಿದ್ದು ಗಂಭೀರ ಜಖಂಗೊಂಡ ಘಟನೆ ಸುಳ್ಯ ಸಮೀಪದ ಬೋರುಗುಡ್ಡೆ ಎಂಬಲ್ಲಿ ಬುಧವಾರ ಸಂಜೆ ಸಂಭವಿಸಿದೆ.ಪೈಂಟರ್ ಆಗಿ ವೃತ್ತಿ ನಿರ್ವಹಿಸುತ್ತಿರುವ ಸುಳ್ಯ ಜಯನಗರದ ಉಸ್ಮಾನ್ ಎಂಬ ಯುವಕ ನೂತನವಾಗಿ ನಿರ್ಮಿಸುತ್ತಿರುವ ಮನೆಯೊಂದರ ಮೊದಲನೆಯ ಅಂತಸ್ತಿನಲ್ಲಿ ಒಂದು ಭಾಗದಿಂದ ಮತ್ತೊಂದು ಭಾಗಕ್ಕೆ ಇಟ್ಟಿದ್ದ ಹಲಗೆ ತುಂಡಾಗಿ ಕೆಳಕ್ಕೆ...

ಅರಂತೋಡು: ಆರೋಗ್ಯಯುತ ಜೀವನಕ್ಕೆ ಯೋಗ ಸಹಕಾರಿ -ಕೆ.ಆರ್ ಗಂಗಾಧರ್

ನೆಹರು ಸ್ಮಾರಕ ಪದವಿಪೂರ್ವ ಕಾಲೇಜಿನಲ್ಲಿ 9ನೇ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸಲಾಯಿತು. ಉತ್ತಮ ಶಿಕ್ಷಕ ರಾಷ್ಟ್ರ ಪ್ರಶಸ್ತಿ ಪುರಸ್ಕತ ಹಾಗೂ ಕಾಲೇಜಿನ ಸಂಚಾಲಕರಾದ ಕೆ. ಆರ್. ಗಂಗಾಧರ್ ಗಿಡಕ್ಕೆ ನೀರು ಹಾಕುವ ಮೂಲಕ ನೆರವೇರಿಸಿ ಮಾತನಾಡಿ, ಜಗತ್ತಿಗೆ ಭಾರತದ ಪ್ರಮುಖ ಕೊಡುಗೆಗಲ್ಲಿ ಯೋಗ ಪ್ರಮುಖ ವಾಗಿದೆ. ಪ್ರಧಾನಿ ನರೇಂದ್ರ ಮೋದಿ ಭಾರತೀಯ ಯೋಗ ಪರಂಪರೆಗೆ ಅಂತಾರಾಷ್ಟ್ರೀಯ...
Ad Widget

ಬಿಳಿನೆಲೆ: ವಿಶ್ವ ಯೋಗ ದಿನಾಚರಣೆ

ಶ್ರೀ ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ ರಿಜಿಸ್ಟರ್ ಸುಬ್ರಮಣ್ಯ ಇದರ ಅಂಗಸಂಸ್ಥೆಯಾದ ಶ್ರೀ ವೇದವ್ಯಾಸ ವಿದ್ಯಾಲಯ ಬಿಳಿನೆಲೆ ಇಲ್ಲಿ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮವನ್ನು ದಿನಾಂಕ 21/06/2023 ಬುಧವಾರದಂದು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಶ್ರೀ ಕೃಷ್ಣ ಶರ್ಮ ಕಾರ್ಯದರ್ಶಿಗಳು, ಸುಬ್ರಹ್ಮಣ್ಯ ಮಠ ಎಜುಕೇಶನ್ ಸೊಸೈಟಿ (ರಿ) ಇವರು ಮಾತನಾಡಿ ಯೋಗವು ಮಾನವನ ಸರ್ವಾಂಗಿನ ಬೆಳವಣಿಗೆಗೆ ಹಾಗೂ...

ನಾಲ್ಕೂರು :- ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ ಸಿ ಟ್ರಸ್ಟ್ (ರಿ) ಸುಳ್ಯ ತಾಲೂಕು ಗುತ್ತಿಗಾರು ವಲಯ, ಶೌರ್ಯ ವಿಪತ್ತು ನಿರ್ವಹಣಾ ತಂಡ ನಾಲ್ಕೂರು, ಶಾಲಾಭಿವೃದ್ಧಿ ಸಮಿತಿ ನಡುಗಲ್ಲು ಇವುಗಳ ಸಂಯುಕ್ತ ಆಶ್ರಯದಲ್ಲಿ ನಡುಗಲ್ಲು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಶ್ರೀಮತಿ ಉಮೇಶ್ವರಿಯವರ ಅಧ್ಯಕ್ಷತೆಯಲ್ಲಿ ವಿಶ್ವ ಪರಿಸರ ದಿನಾಚರಣೆಯ ಕಾರ್ಯಕ್ರಮವನ್ನು ನಡೆಸಲಾಯಿತು....

ದೇವರಕೊಲ್ಲಿ : ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ  ಭೀಕರ ಅಪಘಾತ – ಓರ್ವ ಮೃತ್ಯು

ದೇವರಕೊಲ್ಲಿ ಬಳಿ ಸ್ವಿಫ್ಟ್ ಕಾರು ಹಾಗೂ ಕಂಟೈನರ್ ನಡುವೆ ಇಂದು ರಾತ್ರಿ  ಭೀಕರ ಅಪಘಾತ ನಡೆದಿದ್ದು ಗಂಭೀರ ಗಾಯಗೊಂಡಿದ್ದ ನಾಲ್ವರ ಪೈಕಿ ಕಾರಿನಲ್ಲಿದ್ದ ಒರ್ವ ಮೃತಪಟ್ಟ ಘಟನೆ ನಡೆದಿದೆ. ಗಾಯಾಳುಗಳನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಕಾರಿನಲ್ಲಿದ್ದವರು ಧರ್ಮಸ್ಥಳ ದೇವಸ್ಥಾನಕ್ಕೆ ಹೋಗಿ ಪುನಃ ಬೆಂಗಳೂರಿಗೆ ಹಿಂತಿರುಗುತ್ತಿದ್ದರೆನ್ನಲಾಗಿದೆ. ಕಾರಿನಲ್ಲಿ ಐವರು ಪ್ರಯಾಣಿಕರಿದ್ದು, ಇಬ್ಬರು ಅಪಾಯದಿಂದ ಪಾರಾಗಿದ್ದಾರೆ ಎಂದು...

ಸುಬ್ರಹ್ಮಣ್ಯ : ಕುಮಾರಸ್ವಾಮಿ ವಿದ್ಯಾಲಯದಲ್ಲಿ ವಿಶ್ವ ಯೋಗ ದಿನಾಚರಣೆ

ಸುಬ್ರಹ್ಮಣ್ಯದ ಕುಮಾರಸ್ವಾಮಿ ವಿದ್ಯಾಲಯದಲ್ಲಿ ಇಂದು ವಿಶ್ವ ಯೋಗ ದಿನವನ್ನು ಆಚರಿಸಲಾಯಿತು. ಕಾರ್ಯಕ್ರಮವನ್ನು ವಿಶ್ವನಾಥ ನಡುತೋಟ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿ ಯೋಗದ ಮಹತ್ವದ  ಮಕ್ಕಳಿಗೆ ತಿಳಿಸಿಕೊಟ್ಟರು. ನಂತರ ವಿದ್ಯಾರ್ಥಿಗಳಿಂದ ವಿವಿಧ ಯೋಗ ಪ್ರದರ್ಶನಗಳು ನಡೆದವು. ಈ ಸಂದರ್ಭದಲ್ಲಿ ಶಾಲಾ ಸಂಚಾಲಕರಾದ ಚಂದ್ರಶೇಖರ್ ನಾಯರ್, ಶಾಲಾ ಮುಖ್ಯ ಶಿಕ್ಷಕಿ ವಿದ್ಯಾರತ್ನ, ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲ ಸಂರ್ಕೀತ್ ಹೆಬ್ಬಾರ್...

ಗುತ್ತಿಗಾರು : ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮ

ಸರಕಾರಿ ಪದವಿಪೂರ್ವ ಕಾಲೇಜು ಗುತ್ತಿಗಾರು ಇದರ 2023-24 ನೇ ಶೈಕ್ಷಣಿಕ ಸಾಲಿನ ಪ್ರಥಮ ಪಿಯುಸಿ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ಕಾಲೇಜು ಸಭಾಂಗಣದಲ್ಲಿ ನಡೆಯಿತು. ಕಾರ್ಯಕ್ರಮ ಅಧ್ಯಕ್ಷತೆಯನ್ನು ಸಿಬಿಸಿ ಕಾರ್ಯಾಧ್ಯಕ್ಷರಾದ ಗಿರೀಶ್ ಮಾವಾಜಿ ವಹಿಸಿದ್ದರು. ಕಾರ್ಯಕ್ರಮದಲ್ಲಿ ಕಾಲೇಜು ಉಪನ್ಯಾಸಕರ ಹಾಗೂ ಪ್ರೌಢಶಾಲಾ ಶಿಕ್ಷಕ ವೃಂದ ಮತ್ತು ಸಿಬ್ಬಂದಿ ವರ್ಗ ಉಪಸ್ಥಿತರಿದ್ದು ಶುಭ ಹಾರೈಸಿದರು.ದ್ವಿತೀಯ ಪಿಯುಸಿ ವಿದ್ಯಾರ್ಥಿಗಳು ಕಾರ್ಯಕ್ರಮ...

ಸುಬ್ರಹ್ಮಣ್ಯ : ವೈದ್ಯಾಧಿಕಾರಿ ಡಾ.ತ್ರಿಮೂರ್ತಿಯವರಿಗೆ ಕಾಯಕ ರತ್ನ ಪ್ರಶಸ್ತಿ

ಕರ್ನಾಟಕ ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತು  ದೊಡ್ಡಬಳ್ಳಾಪುರ, ಬೆಂಗಳೂರು ವತಿಯಿಂದ ನೀಡುವ ರಾಜ್ಯಮಟ್ಟದ ಕಾಯಕ ರತ್ನ ಪ್ರಶಸ್ತಿಗೆ ವೈದ್ಯಕೀಯ ಕ್ಷೇತ್ರದಲ್ಲಿ ಸಲ್ಲಿಸಿದ ಸೇವೆಗಾಗಿ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ.ತ್ರಿಮೂರ್ತಿ ಅವರು ಆಯ್ಕೆಯಾಗಿದ್ದಾರೆ. ಜೂನ್ 25ರಂದು ದೊಡ್ಡಬಳ್ಳಾಪುರದಲ್ಲಿ ನಡೆಯುವ ಕಾಯಕ ರತ್ನ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ರಾಜ್ಯ ವೈಜ್ಞಾನಿಕ...

ಸುಬ್ರಹ್ಮಣ್ಯ : ಎಸ್.ಎಸ್.ಪಿ.ಯು. ನಲ್ಲಿ 1100 ವಿದ್ಯಾರ್ಥಿಗಳಿಂದ ಏಕಕಾಲದಲ್ಲಿ ಯೋಗಾಸನ ; ಚಿತ್ತ ಚಾಂಚಲ್ಯ ಹೋಗಲಾಡಿಸಿ  ಏಕಾಗ್ರತೆ ಸಾಧಿಸಲು ಯೋಗ ಅಡಿಗಲ್ಲು- ಸೋಮಶೇಖರ ನಾಯಕ್ ಅಭಿಮತ

ಚಿತ್ತ ಚಾಂಚಲ್ಯವನ್ನು ಹೋಗಲಾಡಿಸಲು ಯೋಗ ಪ್ರಧಾನ.  ಪ್ರಾಚೀನ ಖುಷಿ ಮುನಿಗಳಿಂದ ಸಂಜಾತ ಯೋಗವು ಸರ್ವರೋಗ ನಿವಾರಕವಾಗಿದೆ. ಪತಂಜಲಿ ಮುನಿಯಿಂದ ಭಾರತದಲ್ಲಿ  ಆರಂಭವಾದ ಯೋಗ ಇಂದು ವಿಶ್ವವ್ಯಾಪಿಯಾಗಿದೆ.ವಿಶ್ವ ಇದನ್ನು ಅನುಸರಿಸುತ್ತಿದೆ.ದೇವತೆಯ ಆರಾಧನೆಗೆ ಯೋಗಾಸನವನ್ನು ಬಳಸಲಾಗುತ್ತದೆ. ಸೂರ್ಯನ ಪೂಜನೆಮಾಡುವ  ಸೂರ್ಯ ನಮಸ್ಕಾರ ಅತ್ಯಂತ ಶ್ರೇಷ್ಠವಾದ ಆಸನವಾಗಿದೆ. ಯೋಗವು ಭಾರತವು ವಿಶ್ವಕ್ಕೆ ನೀಡಿದ ದೊಡ್ಡ ಕೊಡುಗೆಯಾಗಿದೆ. ಇದೀಗ ವಿಶ್ವಾದ್ಯಂತ ಯೋಗದ...

ಜೂ.23; ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ

ಸುಳ್ಯ ನಗರ ಪಂಚಾಯತ್ ನಲ್ಲಿ ಅಂಚೆ ಇಲಾಖೆ ವತಿಯಿಂದ ಜೂ. 23 ರಂದು ಆಧಾರ್ ನೋಂದಾವಣೆ ಮತ್ತು ತಿದ್ದುಪಡಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಜೊತೆಗೆ ಅಂಚೆ ಇಲಾಖೆಯ ಯೋಜನೆಗಳಾದ ಪಿಎಲ್‌ಐ, ಆರ್ ಪಿ ಎಲ್ ಐ, ಬಜಾಜ್ ಆಕ್ಸಿಡೆಂಟ್ ಇನ್ಸೂರೆನ್ಸ್ ಪಾಲಿಸಿಗಳು, ಮಹಿಳಾ ಸಮ್ಮಾನ್ ಐಪಿಪಿಬಿ ಖಾತೆಗಳನ್ನು ತೆರೆಯುವ ಸೇವೆಯೂ ಲಭ್ಯವಿರುತ್ತದೆ. ಸಾರ್ವಜನಿಕರು ಈ ಸೌಲಭ್ಯವನ್ನು ಪಡೆದುಕೊಳ್ಳಬೇಕಾಗಿ...
Loading posts...

All posts loaded

No more posts

error: Content is protected !!