Ad Widget

ಸೌಜನ್ಯಳ ಪರ ನ್ಯಾಯಕ್ಕಾಗಿ ಧರ್ಮಯುದ್ಧ – ರಾಜಕೀಯ ರಹಿತ ಹೋರಾಟಕ್ಕೆ ಸಾಕ್ಷಿಯಾಗಲಿದೆ ಸುಳ್ಯ – ಇಂದು ನಿಂತಿಕಲ್ಲಿನಿಂದ ಸುಳ್ಯಕ್ಕೆ ಜಾಥಾ – ಬೃಹತ್ ಪ್ರತಿಭಟನೆ

ಸುಮಾರು 11 ವರ್ಷಗಳ ಹಿಂದೆ ಧರ್ಮಸ್ಥಳ ಸಮೀಪ ಸೌಜನ್ಯಳನ್ನು  ಅತ್ಯಾಚಾರ ಮಾಡಿ ಕೊಲೆ ಮಾಡಲಾಗಿತ್ತು. ಈ ಪ್ರಕರಣದ ನೈಜ ಆರೋಪಗಳನ್ನು ಶಿಕ್ಷೆಕೆ ಒಳಪಡಿಸಬೇಕು,ಸೌಜನ್ಯಳ ಸಾವಿಗೆ ನ್ಯಾಯ ಒದಗಿಸಬೇಕು ಎಂಬ ಕೂಗು ರಾಜ್ಯದಾದ್ಯಂತ ಕೇಳಿ ಬರುತ್ತಿದೆ. ಈ ಹೋರಾಟದ ಭಾಗವಾಗಿ ಸುಳ್ಯದಲ್ಲಿ ಆ. 8ರಂದು ಸುಳ್ಯದ ನಿಂತಿಕಲ್ಲಿನಿಂದ ಸುಳ್ಯ ನಗರದವರೆಗೆ ವಾಹನ ಜಾಥಾ, ಪೈಚಾರಿನಿಂದ ಕಾಲ್ನಡಿಗೆ ಜಾಥಾ   ನಡೆಯಲಿದೆ. ಸಾಮಾಜಿಕ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಹಾಗೂ ಸೌಜನ್ಯ ತಾಯಿ ಕುಸುಮಾವತಿಯವರು ಭಾಗವಹಿಸಲಿದ್ದು, ಸುಳ್ಯ ನಗರದಲ್ಲಿ ಪ್ರತಿಭಟನಾ ಸಭೆ ನಡೆಯಲಿದೆ. ಬಳಿಕ ಪ್ರಕರಣದ ಮರುತನಿಖೆಗೆ ಒತ್ತಾಯಿಸಿ ತಹಶೀಲ್ದಾರ್ ಮೂಲಕ ಸಿಎಂಗೆ ನ್ಯಾಯಕ್ಕಾಗಿ ಮನವಿ ಸಲ್ಲಿಕೆಯಾಗಲಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!