Ad Widget

ಸುಳ್ಯ : ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ ವತಿಯಿಂದ ಸ್ವಾತಂತ್ರ್ಯೋತ್ಸವ ಆಚರಣೆ

ಸುಳ್ಯದ ಕೆವಿಜಿ ಪಾಲಿಟೆಕ್ನಿಕ್ ನ ಎನ್.ಎಸ್.ಎಸ್. ಹಿರಿಯ ವಿದ್ಯಾರ್ಥಿಗಳ ಸಂಘ ಎನ್.ಎಸ್.ಎಸ್. ಸೇವಾಸಂಗಮ ಟ್ರಸ್ಟ್ (ರಿ), ಸುಳ್ಯ ಇದರ ವತಿಯಿಂದ 77 ನೇ ಸ್ವಾತಂತ್ರ್ಯೋತ್ಸವ ಆಚರಣೆಯು ಸುಳ್ಯದ ಜ್ಯೋತಿ ವೃತ್ತ ಅಂಗನವಾಡಿ ಕೇಂದ್ರದಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸೇವಾ ಸಂಗಮದ ಗೌರವಾದ್ಯಕ್ಷರಾದ ಬಾಲಕ್ರಷ್ಣ ಬೊಳ್ಳೂರು ಧ್ವಜಾರೋಹಣ ನೆರವೇರಿಸಿ ಮಾತನಾಡುತ್ತಾ, “ಮಕ್ಕಳಿಗೆ ಸ್ವಾತಂತ್ರ್ಯದ ಮಹತ್ವ, ದೇಶಪ್ರೇಮ, ಸಂಸ್ಕಾರ ಇತ್ಯಾದಿ ವಿಚಾರಗಳನ್ನು ಮನೆಯಿಂದಲೇ ಕಲಿಸುವಂತಾಗಬೇಕು” ಎಂದರು. ಸೇವಾಸಂಗಮದ ಸಲಹಾ ಸಮಿತಿಯ ಸದಸ್ಯರಾದ ಡಾ. ಅನುರಾಧಾ ಕುರುಂಜಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ “ಬ್ರಿಟಿಷರ ದಾಸ್ಯದಿಂದ ಮುಕ್ತಗೊಂಡ ನಮ್ಮ ದೇಶವನ್ನು ಕಾಪಾಡಿಕೊಳ್ಳುವುದು ನಮ್ಮೆಲ್ಲರ ಜಪಾಬ್ದಾರಿ ಹಾಗೂ ಕರ್ತವ್ಯ. ಒಂದು ಕಡೆ ದೇಶ ಸ್ವತಂತ್ರಗೊಂಡ ಸಂಭ್ರಮದಲ್ಲಿ ನಾವಿದ್ದರೂ ಇನ್ನೊಂದು ಕಡೆ ಭ್ರಷ್ಟಾಚಾರ, ಭಯೋತ್ಪಾದನೆ, ಅತ್ಯಾಚಾರ, ಕೊಲೆ, ದರೋಡೆ ಸುಲಿಗೆಗಳು ತಾಂಡವವಾಡುತ್ತಿವೆ. ಮತ್ತೊಂದೆಡೆ ಮೌಲ್ಯಗಳ ಕುಸಿತ ದೇಶವನ್ನು ತಲ್ಲಣಗೊಳಿಸುತ್ತಿದೆ. ಹಾಗಾಗಿ ನಮ್ಮ ಹಕ್ಕುಗಳ ಜೊತೆಗೆ ಕರ್ತವ್ಯಗಳನ್ನು ಪಾಲಿಸಿದಾಗ ಸ್ವಸ್ಧ ಹಾಗೂ ಬಲಿಷ್ಠ ರಾಷ್ಟ್ರವನ್ನು ಕಟ್ಟಲು ಸಾಧ್ಯ. ಎಂದರು. ಸೇವಾಸಂಗಮದ ಗೌರವ ಸಲಹೆಗಾರರಾದ ಚಂದ್ರಶೇಖರ ಬಿಳಿನೆಲೆ ಮಾತನಾಡಿ. “ದೇಶಭಕ್ತಿ ಬೆಳೆಸಿಕೊಳ್ಳುವುದರ ಜೊತೆಗೆ ದೇಶದ ಗೌರವದ ಸಂಖೇತಗಳಾದ ರಾಷ್ಟ್ರಗೀತೆ, ರಾಷ್ಟ್ರ ಧ್ವಜ, ರಾಷ್ಟ್ರ ಲಾಂಛನಗಳಿಗೆ ಗೌರವ ನೀಡಬೇಕು ಎಂದರು. ಗೌರವ ಸಲಹೆಗಾರ ಪಾಲಚಂದ್ರ ವೈ ವಿ , ಅಂಗನವಾಡಿ ಶಿಕ್ಷಕಿ ಚಂದ್ರಾವತಿ ಉಪಸ್ಥಿತರಿದ್ದರು.
ಸೇವಾಸಂಗಮದ ಸದಸ್ಯರಾದ ಹೇಮನಾಥ್ ಸ್ವಾಗತಿಸಿ, ವಿಶ್ವಕಿರಣ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು ಆಕಾಶ್ ಕುದ್ಕುಳಿ, ಹೃತ್ವಿಕ್ ಕುದ್ಕುಳಿ , ಅಂಗನವಾಡಿ ಪುಟಾಣಿಗಳು, ಹಾಗೂ ಪೋಷಕರು ಉಪಸ್ಥಿತರಿದ್ದರು. ಸೇವಾ ಸಂಗಮದ ವತಿಯಿಂದ ಪುಟಾಣಿಗಳಿಗೆ ಮತ್ತು ಭಾಗವಹಿಸಿದವರಿಗೆ ಸಿಹಿತಿಂಡಿ ವಿತರಿಸಲಾಯಿತು.

. . . . . . . . .

Discover more from ಅಮರ ಸುದ್ದಿ

Subscribe to get the latest posts sent to your email.

. . . . . . .

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading