Ad Widget

ಮೊಸರು ಕುಡಿಕೆ ಉತ್ಸವ ಸಮಿತಿ ರಚನೆ : ಅಧ್ಯಕ್ಷ ತೀರ್ಥಕುಮಾರ್ ಕುಂಚಡ್ಕ – ಪ್ರ. ಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ – ಖಜಾಂಜಿ ನವೀನ್ ಎಲಿಮಲೆ

ವಿಶ್ವ ಹಿಂದೂ ಪರಿಷತ್ ಬಜರಂಗದಳ ಸುಳ್ಯ ಪ್ರಖಂಡ ಇದರ ವತಿಯಿಂದ ಸುಳ್ಯದಲ್ಲಿ ನಡೆಯಲಿರುವ 10 ನೇ ವರ್ಷದ ವಿಶ್ವ ಹಿಂದು ಪರಿಷತ್ತಿನ ಸ್ಥಾಪನಾ ದಿನಾಚರಣೆಯ ಅಂಗವಾಗಿ ಸೆ. 16 ರಂದು ನಡೆಯಲಿರುವ ಮೊಸರು ಕುಡಿಕೆ ಉತ್ಸವದ  ಸಭೆಯು ವಿ.ಹೆಚ್.ಪಿ.ಅಧ್ಯಕ್ಷ ಸೋಮಶೇಖರ ಪೈಕ ರವರ ಅಧ್ಯಕ್ಷತೆಯಲ್ಲಿ ಆ.15 ರಂದು ಸುಳ್ಳ ಚೆನ್ನಕೇಶವ ದೇವಸ್ಥಾನದ ಸಭಾಂಗಣದಲ್ಲಿ ನಡೆಯಿತು.
ವೇದಿಕೆಯಲ್ಲಿ ಬಜರಂಗದಳ ಸಂಚಾಲಕ ಹರಿಪ್ರಸಾದ್ ಎಲಿಮಲೆ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ಮೊಸರು ಕುಡಿಕೆ ಉತ್ಸವ ಸಮಿತಿಯ ನೂತನ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆಸಲಾಯಿತು.  ನೂತನ ಅಧ್ಯಕ್ಷರಾಗಿ ತೀರ್ಥಕುಮಾರ್ ಕುಂಚಡ್ಕ ರವರನ್ನು ಆಯ್ಕೆ ಮಾಡಲಾಯಿತು. ಪ್ರಧಾನಕಾರ್ಯದರ್ಶಿ ದೇವಿಪ್ರಸಾದ್ ಅತ್ಯಾಡಿ,  ಖಜಾಂಜಿ ನವೀನ್ ಎಲಿಮಲೆ,ಉಪಾಧ್ಯಕ್ಷರಾಗಿ ರಜತ್ ಅಡ್ಕಾರ್,  ಪ್ರಕಾಶ್ ಯಾದವ್ ಕಾರ್ಯದರ್ಶಿ ಭಾನುಪ್ರಕಾಶ್ ಪೆರುಮುಂಡ, ವ್ಯವಸ್ಥಾ ಪ್ರಮುಖರಾಗಿ ಭಾನುಪ್ರಕಾಶ್ ಪೆಲ್ತಡ್ಕ, ಸನತ್ ಚೊಕ್ಕಾಡಿ ಯವರನ್ನು ಆಯ್ಕೆ ಮಾಡಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!