Ad Widget

ಸುಳ್ಯ : ಉರುಳಿಗೆ ಬಿದ್ದು ಚಿರತೆ ಮೃತಪಟ್ಟ ಪ್ರಕರಣ – ಇಬ್ಬರ ಮೇಲೆ ಪ್ರಕರಣ ದಾಖಲು,ಬಂಧನ

ಸುಳ್ಯ ತಾಲೂಕಿನ ಅಜ್ಜಾವರ ಗ್ರಾಮದ ಪಡ್ಡಂಬೈಲು ಎಂಬಲ್ಲಿ ಆ.29ರಂದು ಮಧ್ಯಾಹ್ನ ಸುಮಾರು 2 ಗಂಟೆ ವೇಳೆಗೆ ಸುಮಾರು ಒಂದುವರೆ ವರ್ಷದ ಚಿರತೆ ಮರಿ ಉರುಳಿಗೆ ಸಿಲುಕಿ ಮೃತಪಟ್ಟ ಘಟನೆ ವರದಿಯಾಗಿತ್ತು. ಇದೀಗ ಇಬ್ಬರ ಮೇಲೆ ಪ್ರಕರಣ ದಾಖಲಿಸಲಾಗಿದ್ದು ಆರೋಪಿತರನ್ನು ಬಂಧಿಸಲಾಗಿದೆ ಎಂದು ತಿಳಿದುಬಂದಿದೆ. ಬಂಧಿತರನ್ನು ಜಯರಾಮ ಪಡ್ಡಂಬೈಲು ಹಾಗೂ ಪೃಥ್ವಿ ಪಡ್ಡಂಬೈಲು ಎಂದು ಸುಳ್ಯ ರೇಂಜರ್ ಮಂಜುನಾಥ್ ತಿಳಿಸಿದ್ದಾರೆ.

ಘಟನೆಯ ಹಿನ್ನಲೆ :

ಆ.29 ರಂದು ಮಧ್ಯಾಹ್ನ ವೇಳೆಗೆ ಚಿರತೆ ಉರುಳಿಗೆ ಬಿದ್ದಿರುವ ಬಗ್ಗೆ ಅರಣ್ಯ ಇಲಾಖಾಧಿಕಾರಿಗಳಿಗೆ ಮಾಹಿತಿ ಲಭ್ಯವಾಗಿದೆ. ಕೂಡಲೇ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು ಚಿರತೆ ಮೃತಪಟ್ಟಿರುವುದು ಧೃಡಪಟ್ಟಿದೆ. ಅಧಿಕಾರಿಗಳ ತನಿಖೆ ನಡೆಸಿದಾಗ ಆರೋಪಿತರ ಬೇಲಿಯಲ್ಲಿ ಈ ಉರುಳು ಪತ್ತೆಯಾದ ಹಿನ್ನೆಲೆಯಲ್ಲಿ ಇಬ್ಬರ ಮೇಲೆ ಪ್ರಕರಣ ದಾಖಲಿಸಿ ಬಂಧನ ಮಾಡಲಾಗಿದ್ದು, ತನಿಖೆ ಚುರುಕುಗೊಂಡಿದ್ದು ವೈಲ್ಡ್ ಲೈಫ್ ಪ್ರೋಟೆಕ್ಟ್ ಆ್ಯಕ್ಟ್ ನಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!