ದುಗ್ಗಲಡ್ಕದ ಕುಂಬೆತ್ತಿಬನ ನಿವಾಸಿ ಪುತ್ತೂರು ಡಿ ವೈ ಎಸ್ ಪಿ ಕಚೇರಿಯಲ್ಲಿ ಒಒಡಿಯಲ್ಲಿ ಕರ್ತವ್ಯ ನಿರ್ವಹಿಸಿ ತಮ್ಮ ಮಾತೃ ಠಾಣೆ ಸುಳ್ಯ ಠಾಣೆಯಲ್ಲಿ ನಿನ್ನೆ ಕರ್ತವ್ಯ ನಿರ್ವಹಿಸಿ ಮನೆಗೆ ತೆರಳಿದ್ದ ಬಾಲಕೃಷ್ಣ ಗೌಡ ಕೊಯಿಕುಳಿ ಇಂದು ಮುಂಜಾನೆ ಹೃದಯಾಘಾತದಿಂದ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ.
ಮುಂಜಾನೆ ಸುಮಾರು 5 ಗಂಟೆಯ ವೇಳೆಗೆ ಅಸ್ವಸ್ಥರಾದ ಅವರನ್ನು ಮನೆಯವರು ಸುಳ್ಯ ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದರು. ಅಲ್ಲಿ ಅವರು ಕೊನೆಯುಸಿರೆಳೆದರು. ಹೃದಯಾಘಾತದಿಂದ ಮೃತರಾಗಿರುವುದಾಗಿ ತಿಳಿದುಬಂದಿದೆ.
ಅವರು ಪತ್ನಿ ಮೀನಾಕ್ಷಿ, ಪುತ್ರರಾದ ಹೇಮಂತ್, ಜಯಂತ್, ಸಹೋದರ ಬಾಲಚಂದ್ರ ಹಾಗೂ ಅಪಾರ ಬಂಧು ಮಿತ್ರರನ್ನು ಅಗಲಿದ್ದಾರೆ.