Ad Widget

ರೈತ ವಿರೋಧಿ ಸರಕಾರದ ವಿರುದ್ದ ಬೀದಿಗಿಳಿದು ಹೋರಾಟ ಅನಿವಾರ್ಯ : ಭಾಗೀರಥಿ ಮುರುಳ್ಯ

ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ದ ಸುಳ್ಯದಲ್ಲಿ ನಡೆದ ಪ್ರತಿಭಟನೆಯನ್ನು ಉದ್ದೇಶಿಸಿ ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿದರು. ರಾಜ್ಯ ಹಾಗೂ ದೇಶದಲ್ಲಿ ಬಿಜೆಪಿಯು ಹೋರಾಟದ ಹಿನ್ನೆಲೆಯಿಂದಲೇ ಬಂದಿದ್ದು, ನಮ್ಮ ಸರಕಾರ ಇದ್ದ ಸಂದರ್ಭದಲ್ಲಿ ರೈತರ ಕಣ್ಣೀರು ಒರೆಸುವ ಹಾಗು ಬಡವರ ಬಂಧುವಾಗಿ ಕೆಲಸ ನಿರ್ವಹಿಸುತ್ತಿದ್ದೆವು. ಆದರೆ ಬದಲಾದ ಪರಿಸ್ಥಿತಿಯಲ್ಲಿ ಬಿಟ್ಟಿ ಭಾಗ್ಯಗಳನ್ನು ಕೊಟ್ಟು ರೈತ ವಿರೋಧಿಗಳಾಗಿದ್ದಾರೆ ಎಂದು ಕಾಂಗ್ರೆಸ್ ವಿರುದ್ದ ಕಿಡಿ ಕಾರಿದರು. ಅಲ್ಲದೇ ಇದೀಗ ಕಾಂಗ್ರೆಸ್ ಸರಕಾರದ ಯೋಜನೆಗಳಲ್ಲಿ ಒಂದಲ್ಲಾ ಒಂದು ಸಮಸ್ಯೆಗಳೇ ಉದ್ಬವಿಸಿದೆ ಅಲ್ಲದೇ ಮುಂದೆ ರೈತರು ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯ ಆಗಲಿದೆ. ಇಂದು ನಾವು ಸಾಂಕೇತಿಕ ಹೋರಾಟವನ್ನು ಮಾತ್ರ ಮಾಡಿದ್ದೇವೆ ಎಂದು ಕಾಂಗ್ರೆಸ್ ವಿರುದ್ದ ಕಿಡಿಕಾರಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!