Ad Widget

ಹಳೆಗೇಟು ರಿಕ್ಷಾ ಮತ್ತು ಓಮ್ನಿ ಕಾರ್ ಮಧ್ಯೆ ಡಿಕ್ಕಿ , ಆಟೋ ಚಾಲಕ ಮೃತ್ಯು .

ಸುಳ್ಯ ಪುತ್ತೂರು ರಸ್ತೆಯ ಹಳೆಗೇಟು ಎಂಬಲ್ಲಿ ರಿಕ್ಷಾ ಮತ್ತು ಓಮಿನಿ ಕಾರಿನ ನಡುವೆ ಡಿಕ್ಕಿ ಸಂಭವಿಸಿದ್ದು ಅಪಘಾತದ ತೀವೃತೆಗೆ ಅಟೋ ಚಾಲಕ ಮೃತಪಟ್ಟಿರುವುದಾಗಿ ತಿಳಿದು ಬಂದಿದೆ. ಮೃತಪಟ್ಟವರು ಜಾಲ್ಸೂರು ಗ್ರಾಮದ ಆಟೋ ಚಾಲಕ ಬಾಬು ಪಾಟಾಳಿ ಎಂದು ತಿಳಿದುಬಂದಿದ್ದು ಅವರನ್ನು ಸುಳ್ಯದ ಸರಕಾರಿ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡುತ್ತಿದ್ದ ವೇಳೆ ಮೃತಪಟ್ಟಿದ್ದಾರೆ ಎಂದು ಹೇಳಲಾಗುತ್ತಿದ್ದು ಹೆಚ್ಚಿನ...

ಪಾಂಡಿಚೇರಿಗೆ ಪ್ರವಾಸಕ್ಕೆ ತೆರಳಿದ್ದ ಪಂಜದ ಯುವಕ ಸಮುದ್ರಪಾಲು

ಬೆಂಗಳೂರಿನಲ್ಲಿ ಉದ್ಯೋಗಿಯಾಗಿರುವ ಪಂಜದ ಯುವಕನೊಬ್ಬ ಪಾಂಡಿಚೇರಿಯಲ್ಲಿ ಸಮುದ್ರ ಪಾಲಾದ ಘಟನೆ ವರದಿಯಾಗಿದೆ. ಕೂತ್ಕುಂಜ ಗ್ರಾಮದ ಚಿದ್ದಲ್ಲು ಗೋಪಾಲ್ ಮತ್ತು ಹೊನ್ನಮ್ಮ ದಂಪತಿಯ ಪುತ್ರ ಬಿಪಿನ್ ಜೀವ ಕಳೆದುಕೊಂಡ ಯುವಕ. ಬೆಂಗಳೂರಿನ ಕಂಪೆನಿಯೊಂದರಲ್ಲಿ ಇಂಜಿನಿಯರ್ ಆಗಿದ್ದ ಬಿಪಿನ್, ಗೆಳೆಯರೊಂದಿಗೆ ಪಾಂಡಿಚೇರಿಗೆ ಬೀಚ್‌ಗೆ ಹೋಗಿದ್ದ ವೇಳೆ ಸಮುದ್ರಪಾಲಾಗಿದ್ದು, ಇಂದು ಮೃತದೇಹ ಪತ್ತೆಯಾಯಿತೆಂದು ತಿಳಿದುಬಂದಿದೆ. ಮೃತರು ತಂದೆ ತಾಯಿ, ಸಹೋದರಿ...
Ad Widget

ಪಂಜ : ಲಯನ್ಸ್ ಕ್ಲಬ್ ವತಿಯಿಂದ ಚಿತ್ರಕಲಾ ಸ್ಪರ್ಧೆ

ಲಯನ್ಸ್ ಕ್ಲಬ್ ಪಂಜ ಇದರ ವತಿಯಿಂದ ಪೀಸ್ ಪೋಸ್ಟರ್ ಗೆ ಆಯ್ಕೆ ಮಾಡಲು ಸ್ಥಳೀಯ ಶಾಲೆಗಳ 25 ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆ ಶಾರದಾoಬ ಭಜನಾ ಮಂದಿರ ಪಂಜ ,ಇಲ್ಲಿ ನಡೆಯಿತು. ಕಾರ್ಯಕ್ರಮದ ಸಭಾಧ್ಯಕ್ಷತೆ ಯನ್ನ ಲಯನ್ಸ್ ಕ್ಲಬ್ ಪಂಜ ಇದರ ಅಧ್ಯಕ್ಷ ದಿಲೀಪ್ ಬಾಬ್ಲು ಬೆಟ್ಟು ವಹಿಸಿದ್ದರು .ಮುಖ್ಯ ಅತಿಥಿಯಾಗಿ ವೇದಿಕೆಯಲ್ಲಿ ಚಿತ್ರ ಕಲಾ ಶಿಕ್ಷಕ...

ಎಣ್ಮೂರು ಸರಕಾರಿ ಪ್ರೌಢ ಶಾಲೆಯಲ್ಲಿ ಮಹಿಳಾ ಸ್ವಾಸ್ಥ್ಯ ಕಾರ್ಯಾಗಾರ

ಇಂದು ಮಹಿಳೆಯರು ಸಮಾಜದ ವಿವಿಧ ಸ್ತರಗಳಲ್ಲಿ ಕ್ರಿಯಾಶೀಲರಾಗಿ ತೊಡಗಿಕೊಳ್ಳುತ್ತಿದ್ದು ತಮ್ಮ ಹಲವು ಒತ್ತಡದ ಮಧ್ಯೆ ಆರೋಗ್ಯದ ಕಡೆಗೆ ಹೆಚ್ಚು ಗಮನ ನೀಡಲು ಅಸಾಧ್ಯವಾಗಿದ್ದು, ವಿವಿಧ ಸಮಸ್ಯೆಗಳನ್ನು ಎದುರಿಸಬೇಕಾದ ಅನಿವಾರ್ಯತೆ ಇದೆ. ಇದರಿಂದ ಹೊರಬಂದು ಆರೋಗ್ಯಯುತ ಜೀವನಕ್ಕಾಗಿ ಇಂತಹ ಆರೋಗ್ಯ ಮಾಹಿತಿ ಕಾರ್ಯಾಗಾರ ಅತೀ ಅಗತ್ಯ ಎಂದು ಸುಳ್ಯದ ಕೆ.ವಿ.ಜಿ ಮೆಡಿಕಲ್ ಕಾಲೇಜಿನ ಖ್ಯಾತ ಹೆರಿಗೆ ಮತ್ತು...

ಚೊಕ್ಕಾಡಿ ಪ್ರೌಢ ಶಾಲಾ ವಿದ್ಯಾರ್ಥಿನಿಯರು ರಾಜ್ಯ ಮಟ್ಟಕ್ಕೆ ಆಯ್ಕೆ

ಚೊಕ್ಕಾಡಿ ಪ್ರೌಢ ಶಾಲೆ ಕುಕ್ಕುಜಡ್ಕ ಇಲ್ಲಿನ 10ನೇ ತರಗತಿ ವಿದ್ಯಾರ್ಥಿನಿ ರಚಿತ ಎಂ.ಪಿ ಈಟಿ ಎಸೆತದಲ್ಲಿ ಜಿಲ್ಲಾ ಮಟ್ಟದಲ್ಲಿ ದ್ವಿತಿಯ ಸ್ಥಾನ ಹಾಗು ಭಾನವಿ 9 ನೇ ತರಗತಿ 200 ಮೀ ಓಟದಲ್ಲಿ ದ್ವಿತಿಯ ಸ್ಥಾನದೊಂದಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
error: Content is protected !!