Ad Widget

ಕುಕ್ಕೆಗೆ ಹರಿದು ಬಂದ ಭಕ್ತ ಸಾಗರ : ರಜೆಯ ಹಿನ್ನೆಲೆಯಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರಿಂದ ದೇವರ ದರ್ಶನ

ಸುಬ್ರಹ್ಮಣ್ಯ: ಪುಣ್ಯಕ್ಷೇತ್ರ ಕುಕ್ಕೆ ಸುಬ್ರಹ್ಮಣ್ಯಕ್ಕೆ ಆದಿತ್ಯವಾರ ಭಕ್ತ ಸಾಗರವೇ ಹರಿದು ಬಂದಿತ್ತು.ಲಕ್ಷಕ್ಕೂ ಅಧಿಕ ಮಂದಿ ಶ್ರೀ ದೇವರ ದರುಶನ ಮಾಡಿ ಪ್ರಸಾದ ಸ್ವೀಕರಿಸಿದರು.ಜಾತ್ರಾ ಸಮಯಕ್ಕಿಂತಲೂ ಅಧಿಕ ಮಂದಿ ಆದಿತ್ಯವಾರ ಕ್ಷೇತ್ರಕ್ಕೆ ಆಗಮಿಸಿರಬಹುದೆಂದು ಅಂದಾಜಿಸಲಾಗಿದೆ. ಎರಡನೇ ಶನಿವಾರ, ವಾರದ ರಜಾದಿನ, ಕ್ರಿಸ್‌ಮಸ್ ರಜೆಯ ಕಾರಣ ಸೇರಿದಂತೆ ಕ್ಷೇತ್ರದ ಜಾತ್ರೋತ್ಸವ ಸಮಾಪನದ ಪುಣ್ಯ ದಿನವಾದುದರಿಂದ ಕ್ಷೇತ್ರಕ್ಕೆ ಭಕ್ತ ಸಂದೋಹವೇ...

ನವೀನ್ ಚಾತುಬಾಯಿಯವರಿಗೆ ಕೃಷಿ ವಿಜ್ಞಾನ ಕೇಂದ್ರದಿಂದ ಸಾಧಕ ರೈತ ಪುರಸ್ಕಾರ

ಐವರ್ನಾಡಿನ ಪ್ರಗತಿಪರ ಕೃಷಿಕರಾದ ಸಿ.ಕೆ.ನವೀನ್ ಜಾತುಬಾಯಿ ಅವರಿಗೆ ಮಂಗಳೂರಿನ ಕೃಷಿ ವಿಜ್ಞಾನ ಕೇಂದ್ರದಲ್ಲಿ ರಾಷ್ಟ್ರೀಯ ರೈತ ದಿನಾಚರಣೆಯ ಸಂದರ್ಭದಲ್ಲಿ ಸಾಧಕ ರೈತ ಪುರಸ್ಕಾರ ಮಾಡಿ ಗೌರವಿಸಲಾಯಿತು.ಈ ಕಾರ್ಯಕ್ರಮವನ್ನು ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥರಾದ ಡಾ. ಟಿ.ಜೆ. ರಮೇಶರವರು ಆಯೋಜಿಸಿದ್ದು, ಕೆ.ವಿ.ಕೆ.ಯ ಸಹಾಯಕ ಪ್ರಾಧ್ಯಾಪಕರಾದ ಡಾ. ಶಿವಕುಮಾರ್ ಅಧ್ಯಕ್ಷತೆಯನ್ನು ವಹಿಸಿ ದ್ದರು. ಡಾ. ಕೇದಾರನಾಥ್ ಮತ್ತು ಕೆವಿಕೆಯ...
Ad Widget

ಡಿ.29 ರಂದು ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ನೇಮೋತ್ಸವ

ಪೆರುವಾಜೆ ಕೊಲ್ಯ ಕೊರಗಜ್ಜ ದೇವಸ್ಥಾನದಲ್ಲಿ ಡಿ.29 ರಂದು ಗಣಹೋಮ ಮತ್ತು ಸತ್ಯನಾರಾಯಣ ಪೂಜೆ ಹಾಗೂ ಕೊರಗಜ್ಜನ ನೇಮೋತ್ಸವ ನಡೆಯಲಿದೆ. ಡಿ.29 ರಂದು ಬೆಳಿಗ್ಗೆ ಗಂಟೆ 8.00ಕ್ಕೆ ಗಣಪತಿಹೋಮ, ಬೆಳಿಗ್ಗೆ ಗಂಟೆ 9.00ಕ್ಕೆ  ಶ್ರೀ ಸತ್ಯನಾರಾಯಣ ಪೂಜೆ, ಮಧ್ಯಾಹ್ನ ಗಂಟೆ 1.00ಕ್ಕೆ ಅನ್ನಸಂತರ್ಪಣೆ, ರಾತ್ರಿ ಗಂಟೆ 7.00ಕ್ಕೆ ದೈವದ ಭಂಡಾರ ತೆಗೆಯುವುದು, ರಾತ್ರಿ ಗಂಟೆ 8.00ಕ್ಕೆ  ಅನ್ನಸಂತರ್ಪಣೆ,...

ಹರಿಹರಪಲತ್ತಡ್ಕ : ಅಯ್ಯಪ್ಪ ಮಂದಿರದಲ್ಲಿ ವಾರ್ಷಿಕ ಪೂಜೋತ್ಸವ ಹಾಗೂ  ಶ್ರೀ ಸತ್ಯನಾರಾಯಣ ದೇವರ ಪೂಜೆ

ಹರಿಹರಪಲ್ಲತ್ತಡ್ಕದ ಶ್ರೀ ಸಂಗಮ ಕ್ಷೇತ್ರ ಅಯ್ಯಪ್ಪ ಸ್ವಾಮಿ ಆರಾಧನಾ ಮಂದಿರದಲ್ಲಿ ಡಿ 24 ರಂದು 28ನೇ ವರ್ಷದ ಪೂಜೋತ್ಸವ ಮತ್ತು ಗಣಹೋಮ ಹಾಗೂ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಡಿ. 24 ರಂದು ಬೆಳಿಗ್ಗೆ ಗಣಹೋಮ ನಂತರ ಸಾಮೂಹಿಕ ಶ್ರೀ ಸತ್ಯನಾರಾಯಣ ದೇವರ ಪೂಜೆ ನಡೆಯಿತು. ಮಧ್ಯಾಹ್ನ ಮಹಾಪೂಜೆ, ಪ್ರಸಾದ ವಿತರಣೆ ಹಾಗೂ ಅನ್ನ...
error: Content is protected !!