- Wednesday
- April 2nd, 2025

ಸುಳ್ಯದಲ್ಲಿ ಇಂದು ಸಂಜೆ ದಿಢೀರನೆ ಬಂದ ಮಳೆಗೆ ಜನತೆ ಅಂಗಡಿ ಮುಂಗಟ್ಟುಗಳ ಮುಂಭಾಗದಲ್ಲಿ ಆಶ್ರಯ ಪಡೆಯಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿದೆ. ಸಂಜೆ 7.30 ರಿಂದ ಆರಂಭಗೊಂಡ ಮಳೆ ಒಂದು ಗಂಟೆಗೂ ಮಿಕ್ಕಿ ಭಾರಿ ಮಳೆಯು ಸುರಿದಿದ್ದು ಜನ ಸಂಕಷ್ಟ ಅನುಭವಿಸಬೇಕಾಯಿತುತಾಲೂಕಿನ ಹಲವೆಡೆ ಭಾರಿ ಮಳೆ ಸುರಿದಿದೆ ವಾಯುಭಾರತ ಕುಸಿತ ಹಿನ್ನೆಲೆಯಲ್ಲಿ ಮುಂದಿನ ಎರಡು ಮೂರು ದಿನಗಳು...

ಸುಳ್ಯದಲ್ಲಿ ಕೆಲವು ಕಿಡಿಗೇಡಿಗಳು ರಾಮ ಮಂದಿರ ಲೋಕಾರ್ಪಣೆ ಬ್ಯಾನರ್ ಹರಿದದ್ದು ಅತ್ಯಂತ ಆತಂಕದ ವಿಷಯ.. ಇದನ್ನು ಯುವ ಮೋರ್ಚಾ ಖಂಡಿಸುತ್ತದೆಹಲವಾರು ವರ್ಷಗಳ ಸತತ ಹೋರಾಟದ ನಂತರ ಅಯೋಧ್ಯೆಯಲ್ಲಿ ಈಗ ರಾಮ ಮಂದಿರ ನಿರ್ಮಾಣ ಆಗುತ್ತಿರುವುದು ಕೆಲವರಿಗೆ ಸಹಿಸಲು ಆಗುತ್ತಿಲ್ಲ... ಅದಕ್ಕೆ ಇಂತಹ ಕೃತ್ಯಕ್ಕೆ ಕೈ ಹಾಕುತ್ತಾರೆ.ಅಂಥವರನ್ನು ಪೊಲೀಸ್ ಇಲಾಖೆ ಶೀಘ್ರದಲ್ಲಿ ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು.ನೆನಪಿಡಿ,...

ಸುಳ್ಯದಲ್ಲಿ ಹಾಕಿದ್ದ ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬ್ಯಾನರ್ ಹಾನಿ ಮಾಡಿದ ಕಿಡಿಗೇಡಿಗಳು ವಿಕೃತಿ ಮೆರಿದಿರುವುದನ್ನು ಸುಳ್ಯ ಬ್ಲಾಕ್ ಕಾಂಗ್ರೆಸ್ ಖಂಡಿಸುತ್ತದೆ. ಮತ್ತು ಇಂತಹ ನೀಚ, ಹೀನ ಕೃತ್ಯವನ್ನು ಎಸಗುವವರು ಯಾರೇ ಆಗಿರಲಿ ಅವರ ವಿರುದ್ಧ ಕಠಿಣ ಶಿಸ್ತುಕ್ರಮ ಜರುಗಿಸುವಂತೆ ಸಂಬಂಧಪಟ್ಟ ಇಲಾಖೆಯನ್ನು ಒತ್ತಾಯಿಸುವುದಾಗಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಿ.ಸಿ.ಜಯರಾಮರು ಪತ್ರಿಕಾ ಹೇಳಿಕೆಯಲ್ಲಿ...

ಸುಳ್ಯದ ಹಳೆ ಬಸ್ಸು ನಿಲ್ದಾಣದ ಬಳಿಯಲ್ಲಿ ಇಂದು ಮುಂಜಾನೆ ಕೆಲ ದಿನಗಳ ಹಿಂದೆ ಅಳವಡಿಸಲಾಗಿದ್ದ ಬ್ಯಾನರ್ ಹರಿದ ಪ್ರಕರಣ ಬೆಳಕಿಗೆ ಬಂದಿದ್ದು ಈ ಕುರಿತಂತೆ ಹಿಂದು ಸಂಘಟನೆಯ ನಾಯಕರು, ಕಾರ್ಯಕರ್ತರು ಹಾಗೂ ಹಿಂದೂ ಸಮಾಜದಲ್ಲಿ ಭಾರಿ ಆಕ್ರೋಶ ವ್ಯಕ್ತವಾಗುತ್ತಿದೆ. ಕಿಡಿಗೇಡಿಗಳು ಹರಿದ ಬ್ಯಾನರ್ ತುಂಡು ವಿವೇಕಾನಂದ ವೃತ್ತದ ಬಳಿಯಲ್ಲಿ ಸಂಜೆ ವೇಳೆಗೆ ಪತ್ತೆಯಾದ ಘಟನೆ ವರದಿಯಾಗಿದೆ....

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮದ ಅಂಗವಾಗಿ ರಿಕ್ಷಾ ಚಾಲಕರು ಸುಳ್ಯದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹರಿದು ಹಾಕಿದ್ದರು. ಇದನ್ನು ಖಂಡಿಸಿರುವ ಅಟೋ ರಿಕ್ಷಾ ಚಾಲಕರ ಸಂಘ ಆರೋಪಿಯನ್ನು ಶೀಘ್ರವಾಗಿ ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಕೈಗೊಳ್ಳಲು ಪೋಲೀಸರಿಗೆ ದೂರು ನೀಡಿ ಒತ್ತಾಯಿಸಿದ್ದಾರೆ. ಹಾಗೂ ಕಲ್ಕುಡ ದೇವಸ್ಥಾನದಲ್ಲಿ ಸೇರಿದ ರಿಕ್ಷಾ ಚಾಲಕರು ಆರೋಪಿಗಳಿಗೆ ಶೀಘ್ರ...

ಪೆರುವಾಜೆ : ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಾಲಯಕ್ಕೆ ಶನಿವಾರ ರಾಜ್ಯ ಧಾರ್ಮಿಕ ಪರಿಷತ್ ಸದಸ್ಯೆ ಮಲ್ಲಿಕಾ ಪ್ರಶಾಂತ್ ಪಕ್ಕಳ ಭೇಟಿ ನೀಡಿದರು.ಶ್ರೀ ದೇವರಿಗೆ ವಿಶೇಷ ಪ್ರಾರ್ಥನೆ ಸಲ್ಲಿಸಿದ ಅವರು ಶ್ರೀ ಕ್ಷೇತ್ರದಲ್ಲಿ 100 ವರ್ಷಗಳ ಬಳಿಕ ಬ್ರಹ್ಮರಥ ನಿರ್ಮಾಣಗೊಂಡು ಜ.19 ರಂದು ಬ್ರಹ್ಮರಥೋತ್ಸವ ನಡೆಯಲಿರುವ ಹಿನ್ನೆಲೆಯಲ್ಲಿ ಬ್ರಹ್ಮರಥದ ಬಗ್ಗೆ ಸಮಿತಿಯವರಿಂದ...

ಸಜ್ಜನ ಪ್ರತಿಷ್ಠಾನ ಬೀಜದಕಟ್ಟೆ ಆಶ್ರಯದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಸಹಕಾರೊಂದಿಗೆ ಸಜ್ಜನ ಸಭಾ ಭವನ ಬೀಜದಕಟ್ಟೆ ಗೂನಡ್ಕದಲ್ಲಿ ನಡೆದ ಸಜ್ಜನೋತ್ಸವ ಕಾರ್ಯಕ್ರಮದಲ್ಲಿ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಪಾಲ್ಗೊಂಡು ಸಭಾ ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಬ್ಯಾನರನ್ನು ಸುಳ್ಯ ಪೇಟೆಯಲ್ಲಿ ಕಿಡಿಗೇಡಿಗಳು ಹಾನಿ ಮಾಡಿರುವ ಬಗ್ಗೆ ಮಾನ್ಯ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಖಂಡನೆ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಸುಳ್ಯ ವೃತ್ತ ನಿರೀಕ್ಷಕ ರೊಂದಿಗೆ ಮಾತನಾಡಿ ಸಮಾಜದಲ್ಲಿ ಅಶಾಂತಿ ಕದಡಲು ಯತ್ನಿಸುತ್ತಿರುವ ಶಕ್ತಿಗಳನ್ನು ನಿಗ್ರಹಿಸಿ ಆರೋಪಿಗಳನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು ಎಂದು ಆಗ್ರಹಿಸಿದ್ದಾರೆ. ಹಾಗು...

ಸುಳ್ಯದ ಚೆನ್ನಕೇಶವ ದೇವಾಲಯದ ಜಾತ್ರೋತ್ಸವ ಹಿನ್ನಲೆಯಲ್ಲಿ ರಥಬೀದಿಯಲ್ಲಿ ಸಂತೆಗಳನ್ನು ಇರಿಸುವ ಸ್ಥಳಗಳ ಬಹಿರಂಗ ಏಲಂ ಪ್ರಕ್ರಿಯೆಯು ಇಂದು ನಡೆಯಿತು. https://youtu.be/11GqHdoyNKE?si=qybYowJo7vPkOKrK ಏಲಂನಲ್ಲಿ ಸುಮಾರು ಪ್ರತಿ ಅಂಗಡಿಗಳು 25 ರಿಂದ 35 ಸಾವಿರ ರೂಪಾಯಿಗಳಿಗೆ ಏಲಂ ನಡೆದವು.

ಅಯೋಧ್ಯೆ ರಾಮ ಮಂದಿರ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಶುಭಕೋರುವ ಬಗ್ಗೆ ಸುಳ್ಯದಲ್ಲಿ ಹಾಕಿದ್ದ ಬ್ಯಾನರ್ ಅನ್ನು ಕಿಡಿಗೇಡಿಗಳು ಹಾನಿ ಮಾಡಿರುವ ಘಟನೆಯ ಬಗ್ಗೆ ಹಿಂದು ಜಾಗರಣ ವೇದಿಕೆ ಖಂಡನೆ ವ್ಯಕ್ತಪಡಿಸಿದ್ದು, ಆರೋಪಿಗಳನ್ನು ಶೀಘ್ರ ಪತ್ತೆ ಹಚ್ಚಿ ಶಿಕ್ಷಿಸಬೇಕು ಎಂದು ಹಿ.ಜಾ.ವೇದಿಕೆಯ ಜಿಲ್ಲಾ ಸಂಪರ್ಕ ಪ್ರಮುಖ್ ಸತೀಶ್ ಮೂಕಮಲೆ ಹಾಗೂ ತಾಲೂಕು ಸಂಚಾಲಕ ಸಚಿನ್ ವಳಲಂಬೆ ಆಗ್ರಹಿಸಿದ್ದಾರೆ.

All posts loaded
No more posts