Ad Widget

ಕೊಳ್ತಿಗೆ : ಪವರ್ ಟಿ.ವಿ. ರಾಕೇಶ್ ರೈ ಮೇಲೆ ಬೆಳ್ಳಾರೆ ಠಾಣೆಯಲ್ಲಿ ಪ್ರಕರಣ ದಾಖಲು


ಕೊಳ್ತಿಗೆಯಲ್ಲಿ ನಡೆದುಕೊಂಡು ಹೋಗುತ್ತಿರುವಾಗ ಅವಾಚ್ಯ ಶಬ್ದಗಳಿಂದ ಬೈದು ಜೀವಬೆದರಿಕೆ ಒಡ್ಡಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ಮಹಿಳೆಯೋರ್ವರು ದೂರು ದಾಖಲಿಸಿದ ಘಟನೆ ನಡೆದಿದೆ.

. . . . . . . . .

ಚಿತ್ರಪ್ರಭ ರೈ ಎಂಬವರು ಜ.05 ರಂದು ಪುತ್ತೂರು ತಾಲೂಕು ಕೊಳ್ತಿಗೆ ಗ್ರಾಮದ ಕೊಳಿಗೆ ಸ್ಥಳ ಮನೆ ಎಂಬಲ್ಲಿ ಮನೆಗೆ ಹೋಗುವ ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿರುವ ವೇಳೆ ಆರೋಪಿಗಳಾದ ಪ್ರದೀಶ್ ಶೆಟ್ಟಿ, ಭಾಸ್ಕರ ರೈ ಧರ್ಮಸ್ಥಳ, ರವೀಂದ್ರ ಶೆಟ್ಟಿ, ಬಾಲಕೃಷ್ಣ ಶೆಟ್ಟಿ, ಸರಳ ರೈ, ಜಯಶ್ರೀ ಶೆಟ್ಟಿ, ಕನ್ಯಾಕುಮಾರಿ ರೈ, ಕಾವ್ಯಾ ರೈ, ಅಮಿತಾ ರೈ, ವಾರಿಜ ರೈ, ಯತೀಂದ್ರನಾಥ ಶೆಟ್ಟಿ ಹಾಗೂ ಇತರ ಅಪರಿಚಿತ ಇಬ್ಬರು ಮಹಿಳೆಯರು ಹಾಗೂ 6 ಪುರುಷರು ಗುಂಪು ಸೇರಿ ನನ್ನನ್ನು ತಡೆದು ನಿಲ್ಲಿಸಿ ಪವರ್ ಟಿವಿಯ ರಾಕೇಶ್ ಶೆಟ್ಟಿ ಮತ್ತು ಪ್ರಶಾಂತ ಎಂಬವರ ವಿರುದ್ಧ ಬಾಗೇಪಲ್ಲಿ ಪೊಲೀಸ್ ಠಾಣೆಯಲ್ಲಿ ನೀಡಿದ ದೂರಿನಂತೆ ದಾಖಲಾದ ಪ್ರಕರಣವನ್ನುಹಿಂಪಡೆಯಬೇಕೆಂದು ಒತ್ತಾಯಿಸಿ ನಿಮಗೆ ಆಸಿಡ್ ಎರಚುತ್ತೇನೆ. ಹಾಗೂ ಕುಟುಂಬದವರ ಪ್ರಾಣ ತೆಗೆಯುತ್ತೇವೆ. ಮನೆಗೆ ಬೆಂಕಿ ಇಡುತ್ತೇವೆ ಎಂಬಿತ್ಯಾದಿ ಬೆದರಿಸಿ ಹಲ್ಲೆ ನಡೆಸಲು ಯತ್ನಿಸಿದ್ದು ಹಾಗೂ ಅವಾಚ್ಯ ಶಬ್ದಗಳಿಂದ ಬೈದಿರುತ್ತಾರೆ. ಆರೋಪಿಗಳು ವಾಹನ ನಂ KA19MH5201 KA2005373 & KA2102728 ನೇಯದ್ದರಲ್ಲಿ ಸ್ಥಳಕ್ಕೆಬಂದಿರುತ್ತಾರೆ. ಪವರ್ ಟಿವಿಯ ರಾಕೇಶ್ ಶೆಟ್ಟಿ ಹಾಗೂ ಪ್ರಶಾಂತ್ ಎಂಬವರ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಿದ ದ್ವೇಷದಿಂದ ಆರೋಪಿಗಳು ಈ ಕೃತ್ಯ ಎಸಗಿರುವುದಾಗಿ ಬೆಳ್ಳಾರೆ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದು ಪ್ರಕರಣ ದಾಖಲಾಗಿರುವುದಾಗಿ ತಿಳಿದು ಬಂದಿದೆ.

. . . . . . .

Discover more from ಅಮರ ಸುದ್ದಿ

Subscribe to get the latest posts sent to your email.

Related Posts

06.03.2026 e paper

e paper 16.01.2026

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!

Discover more from ಅಮರ ಸುದ್ದಿ

Subscribe now to keep reading and get access to the full archive.

Continue reading