Ad Widget

ಪೆರುವಾಜೆ ಜಾತ್ರೋತ್ಸವ: ಇಂದು ರಾತ್ರಿ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ,ಧ್ವಜಾವರೋಹಣ

ಇತಿಹಾಸ ಪ್ರಸಿದ್ಧ ಮಾಗಣೆ ಕ್ಷೇತ್ರವಾದ ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ವಾರ್ಷಿಕ ಜಾತ್ರೋತ್ಸವ ಹಾಗೂ ಬ್ರಹ್ಮರಥೋತ್ಸವದ ಅಂಗವಾಗಿ ಇಂದು ಬೆಳಗ್ಗೆ ಕವಾಟೋದ್ಘಾಟನೆ, ಶ್ರೀ ದೇವರಿಗೆ ತೈಲಾಭಿಷೇಕ, ಪಂಚಾಮೃತಾಭಿಷೇಕ, ಸೀಯಾಳಾಭಿಷೇಕ, ಮಹಾಪೂಜೆ, ಪ್ರಸಾದ ವಿತರಣೆ ನಡೆಯಲಿದೆ. ಮಧ್ಯಾಹ್ನ ಗಂಟೆ 12.00ಕ್ಕೆ ತುಲಾಭಾರ ಸೇವೆ, ಯಾತ್ರಾ ಹೋಮ, ಪ್ರಸಾದ ವಿತರಣೆಯಾಗಲಿದೆ. ರಾತ್ರಿ ಗಂಟೆ 7.00ಕ್ಕೆ ಶ್ರೀ ದೇವರ ಬಲಿ ಹೊರಟು ಕಟ್ಟೆಪೂಜೆ, ಅವಭೃತ ಸ್ನಾನ ನೆರವೇರಲಿದೆ. ಬಳಿಕ ಧ್ವಜಾವರೋಹಣಗೊಳ್ಳಲಿದೆ. ನಂತರ ಮಹಾಪೂಜೆ, ಪ್ರಸಾದ ವಿತರಣೆ, ನಂತರ ಉಳ್ಳಾಕುಲು, ಮೈಷಂತಾಯ, ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ದೈವದ ಭಂಡಾರ ತೆಗೆಯಲಾಗುವುದು.

ದಿನಾಂಕ 21-01-2024ನೇ ಆದಿತ್ಯವಾರ ಬೆಳಿಗ್ಗೆ ಗಂಟೆ 7.00ರಿಂದ ಮಹಾಗಣಪತಿ ಹೋಮ, ಕಲಶ ಪೂಜೆ, ಬೆಳಿಗ್ಗೆ ಗಂಟೆ 6.00ಕ್ಕೆ ಶ್ರೀ ಉಳ್ಳಾಕುಲು ಮತ್ತು ಮೈಷಂತಾಯ ದೈವಗಳ ನೇಮೋತ್ಸವ, ಪ್ರಸಾದ ವಿತರಣೆ, ಮಧ್ಯಾಹ್ನ ಗಂಟೆ 12.00ರಿಂದ ಶ್ರೀ ದೇವರಿಗೆ ಸಂಪ್ರೋಕ್ಷಣೆ ಕಲಶಾಭಿಷೇಕ, ಮಹಾಪೂಜೆ, ವೈದಿಕ ಮಂತ್ರಾಕ್ಷತೆ, ಪ್ರಸಾದ ವಿತರಣೆ ನಡೆಯಲಿರುವುದು. ಮಧ್ಯಾಹ್ನ ಗಂಟೆ 12.15ರಿಂದ ಶ್ರೀ ವ್ಯಾಘ್ರಚಾಮುಂಡಿ ದೈವ (ಪಿಲಿಭೂತ)ದ ನೇಮೋತ್ಸವ, ಪ್ರಸಾದ ವಿತರಣೆ ಬಳಿಕ ಅನ್ನಸಂತರ್ಪಣೆ ನಡೆಯಲಿದೆ. ಸಂಜೆ ಗಂಟೆ 7.00ಕ್ಕೆ ಶ್ರೀ ಕಲ್ಲುರ್ಟಿ, ಕಲ್ಕುಡ ದೈವದ ನೇಮ ನಡಾವಳಿ ಜರುಗಲಿರುವುದು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!