Ad Widget

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ವಿವಿಧ ಧಾರ್ಮಿಕ ಕಾರ್ಯಕ್ರಮಗಳೊಂದಿಗೆ ಆರಂಭ

ಇಂದು ಸಂಜೆ ಜಾತ್ರೋತ್ಸವಕ್ಕೆ ವೈಭವದ ಹಸಿರುವಾಣಿ ಸಮರ್ಪಣೆ

ಅಯ್ಯನಕಟ್ಟೆ ಶ್ರೀ ಇಷ್ಟದೇವತಾ ಉಳ್ಳಾಕುಲು ಸೇವಾ ಸಮಿತಿ ಮೂರುಕಲ್ಲಡ್ಕ ಮತ್ತು ಅಯ್ಯನಕಟ್ಟೆ ಜಾತ್ರೋತ್ಸವ ಸಮಿತಿ ಆಶ್ರಯದಲ್ಲಿ ಶ್ರೀ ಇಷ್ಟದೇವತಾ ಉಳ್ಳಾಕುಲು ಹಾಗೂ ಸಪರಿವಾರ ದೈವಗಳ ಜಾತ್ರೋತ್ಸವ ಇಂದು ಆರಂಭಗೊಂಡಿದ್ದು, ಜ. 29ರ ವರೆಗೆ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ವಿಜೃಂಭಣೆಯಿಂದ ಜರುಗಲಿದೆ. ಇಂದು(ಜ. 26) ಬೆಳಿಗ್ಗೆ ಕಳಂಜ ಗ್ರಾಮದ ತಂಟೆಪ್ಪಾಡಿ ಶ್ರೀ ಶಿರಾಡಿ ದೈವದ ಸನ್ನಿಧಿಯಲ್ಲಿ ಗಣಪತಿ ಹವನ, ನಾಗತಂಬಿಲ, ವಿಶೇಷ ತಂಬಿಲ ನಡೆಯಿತು.
ಬಾಳಿಲ ಗ್ರಾಮದ ಮೂರುಕಲ್ಲಡ್ಕದಲ್ಲಿ ಬೆಳಿಗ್ಗೆ ಗಂಟೆ 11 ರಿಂದ ನಾಗತಂಬಿಲ ಆರಂಭಗೊಂಡಿದ್ದು, ತದನಂತರ ಅನ್ನ ಸಂತರ್ಪಣೆ ನಡೆಯಲಿದೆ.

ಇದು ಸಂಜೆ 5:00ರಿಂದ ಬಾಳಿಲ ಶ್ರೀ ಮಂಜುನಾಥೇಶ್ವರ ದ್ವಾರದ ಬಳಿಯಿಂದ ಮೂರುಕಲ್ಲಡ್ಕ ಶ್ರೀ ಉಳ್ಳಾಕುಲು ಸ್ಥಾನದವರೆಗೆ ವೈಭವದ ಹಸಿರುವಾಣಿ ಮೆರವಣಿಗೆ ನಡೆಯಲಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!