Ad Widget

ಭಾವೈಕ್ಯ ಯುವಕ ಮಂಡಲದ ಮುಡಿಗೆ ರಾಜ್ಯ ಪ್ರಶಸ್ತಿಯ ಗರಿ

ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು ಕೊಡಮಾಡುವ ಸ್ವಾಮಿ ವಿವೇಕಾನಂದ ಸಾಂಘಿಕ ರಾಜ್ಯ ಪ್ರಶಸ್ತಿಗೆ ಭಾವೈಕ್ಯ ಯುವಕ ಮಂಡಲ ( ರಿ.) ಪೆರುವಾಜೆ ಭಾಜನವಾಗಿದೆ. ಇದೇ ಬರುವ ಜ.28ರಂದು ಕರ್ನಾಟಕ ರಾಜ್ಯ ಯುವ ಸಂಘಗಳ ಒಕ್ಕೂಟ ಬೆಂಗಳೂರು, ವಿಜಯಪುರ ಜಿಲ್ಲಾ ಹಾಗೂ ತಾಲೂಕು ಘಟಕ ಮುದ್ದೇಬಿಹಾಳ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವಿಜಯಪುರ, ಸಾಧನಾ ಮಹಿಳಾ ಒಕ್ಕೂಟ ಮುದ್ದೇಬಿಹಾಳ, ಧರ್ಮಯುದ್ಧ ದಿನಪತ್ರಿಕಾ ಬಳಗ ಮುದ್ದೇಬಿಹಾಳ ಇವುಗಳ ಸಂಯುಕ್ತ ಆಶ್ರಯದಲ್ಲಿ ವಿಬಿಸಿ ಹೈಸ್ಕೂಲ್ ಸಭಾಂಗಣದಲ್ಲಿ ನಡೆಯುವ ಸ್ವಾಮಿ ವಿವೇಕಾನಂದ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಪ್ರಶಸ್ತಿ ಸ್ವೀಕರಿಸಲಿದ್ದಾರೆ. ತಾಲೂಕಿನ ಅತೀ ಕ್ರಿಯಾಶೀಲ ಯುವಕ ಮಂಡಲಗಳಲ್ಲಿ ಒಂದಾದ ಭಾವೈಕ್ಯ ಯುವಕ ಮಂಡಲವು ಊರಿನ ಪ್ರಗತಿಗೆ ತನ್ನದೇ ಆದ ಕೊಡುಗೆ ನೀಡುತ್ತಿದೆ. ಸಾಮಾಜಿಕ, ಧಾರ್ಮಿಕ, ಕ್ರೀಡಾ ಹಾಗೂ ಶೈಕ್ಷಣಿಕ ಕ್ಷೇತ್ರಗಳಲ್ಲಿ ಹತ್ತು ಹಲವು ಕಾರ್ಯಕ್ರಮಗಳನ್ನು ಆಯೋಜಿಸುತ್ತಾ ಬಂದಿರುವ ಭಾವೈಕ್ಯ ಯುವಕ ಮಂಡಲವು ಜಿಲ್ಲೆಯಾದ್ಯಂತ ಜನರ ಸದಭಿಪ್ರಾಯ ಹೊಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!