


ಗುತ್ತಿಗಾರು ಬಸ್ ನಿಲ್ದಾಣದ ಎದುರಿನಲ್ಲಿ ಗುತ್ತಿಗಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅನುದಾನದಿಂದ ನಿರ್ಮಾಣಗೊಂಡ ಆಟೋ ರಿಕ್ಷಾ ನಿಲ್ದಾಣದ ಮೇಲ್ಚಾವಣಿ ಜ.26 ಗಣರಾಜ್ಯೋತ್ಸವದ ಸುಸಂದರ್ಭದಲ್ಲಿ ಉದ್ಘಾಟನೆ ಗೊಂಡಿತು. ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾದ ವೆಂಕಟ್ ದಂಬೆಕೋಡಿ ಉದ್ಘಾಟಿಸಿ ಸಂಘಟನೆಗೆ ಶುಭ ಹಾರೈಸಿದರು. ಸಂಘದ ಮಾಜಿ ಅಧ್ಯಕ್ಷರಾದ ಬಿ.ಕೆ.ಬೆಳ್ಯಪ್ಪ ಗೌಡ ಕಡ್ತಲಕಜೆ ದೀಪ ಬೆಳಗಿಸಿ ಚಾಲನೆ ನೀಡಿದರು. ಈ ಸಂದರ್ಭದಲ್ಲಿ ಕೃಷಿ ಪತ್ತಿನ ಸಹಕಾರಿ ಸಂಘದ ಕಾರ್ಯನಿರ್ವಹಣಾಧಿಕಾರಿ ಶರತ್.ಎ., ಗುತ್ತಿಗಾರು ಪ್ರಾ.ಕೃ.ಪ.ಸ.ಸಂಘದ ನಿರ್ದೇಶಕರುಗಳಾದ ಮುಳಿಯ ಕೇಶವ ಭಟ್, ಕಿಶೋರ್ ಕುಮಾರ್ ಅಂಬೆಕಲ್ಲು, ನವೀನ್ ಬಾಳುಗೋಡು, ಕುಂಞ ಬಳ್ಳಕ್ಕ, ಮಾಜಿ ಅಧ್ಯಕ್ಷರಾದ ವೆಂಕಟ್ ವಳಲಂಬೆ, ಆಟೋ ರಿಕ್ಷಾ ಚಾಲಕರ ಸಂಘದ ಅಧ್ಯಕ್ಷರಾದ ವಿಶ್ವನಾಥ ಚತ್ರಪ್ಪಾಡಿ, ಗೌರವ ಅಧ್ಯಕ್ಷರಾದ ಮೋಹನ ಮುಕ್ಕೂರು , ಚಾಲಕರಾದ ಕೃಷ್ಣ ಗೌಡ ಪೈಕ, ಸತ್ಯನಾರಾಯಣ ಬಾಕಿಲ, ಲೋಕೇಶ್ ಪೈಕ, ಪ್ರದೀಪ್ ವಳಲಂಬೆ, ಸಹಕಾರಿ ಸಂಘದ ಸಿಬ್ಬಂದಿಗಳು, ಗ್ರಾ.ಪಂ.ಸದಸ್ಯರು ಉಪಸ್ಥಿತರಿದ್ದರು. ಬಿ ಯಂ ಎಸ್ ಘಟಕದ ಅಧ್ಯಕ್ಷರಾದ ವಿಶ್ವನಾಥ ಚತ್ರಪ್ಪಾಡಿ ಸ್ವಾಗತಿಸಿ, ವಂದಿಸಿದರು.
