Ad Widget

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಅಂಗವಾಗಿ ಕ್ರೀಡೋತ್ಸವ

ಕಂದ್ರಪ್ಪಾಡಿ ಶಾಲಾ ಶತಮಾನೋತ್ಸವದ ಪ್ರಯುಕ್ತ ಕ್ರೀಡೋತ್ಸವ ಕಾರ್ಯಕ್ರಮ ಜ.28 ರಂದು ಕಂದ್ರಪ್ಪಾಡಿ ಶಾಲಾ ಮೈದಾನದಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟನಾ ಕಾರ್ಯಕ್ರಮವನ್ನು ಕೆನಡಾದಲ್ಲಿ ಉದ್ಯಮಿಯಾಗಿರುವ ಉಮೇಶ್ ಮುಂಡೋಡಿ ನೆರವೇರಿಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಸ್.ಡಿ.ಎಂ.ಸಿ ಅಧ್ಯಕ್ಷ ಚಂದ್ರಶೇಖರ ಕಂದ್ರಪ್ಪಾಡಿ ವಹಿಸಿದ್ದರು. ವೇದಿಕೆಯಲ್ಲಿ ಶತಮಾನೋತ್ಸವ ಸಮಿತಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ಸಮಿತಿಯ ಗೌರವಾಧ್ಯಕ್ಷ ಕುಶಾಲಪ್ಪ ಮಾಸ್ಟರ್ ರುದ್ರಚಾಮುಂಡಿ, ಕ್ರೀಡಾ ಸಮಿತಿ ಸಂಚಾಲಕ ಜಯರಾಮ ಕಡ್ಲಾರ್, ದೇವಚಳ್ಳ ಗ್ರಾ.ಪಂ.ಮಾಜಿ ಅಧ್ಯಕ್ಷೆ ಸುಲೋಚನ ದೇವ , ಗ್ರಾ.ಪಂ.ಸದಸ್ಯ ರಮೇಶ್ ಪಡ್ಪು, ದೇವಚಳ್ಳ ಯುವಕ ಮಂಡಲದ ಅಧ್ಯಕ್ಷ ವಿನಯಕುಮಾರ್ ಮುಳುಗಾಡು, ಶ್ರೀ.ಕ್ಷೇ.ಧ.ಗ್ರಾ.ಯೋಜನೆಯ ಕಂದ್ರಪ್ಪಾಡಿ ಒಕ್ಕೂಟದ ಅಧ್ಯಕ್ಷ ಪ್ರದೀಪ್ ಕುತ್ಯಾಳ, ಪೆರಾಜೆ ಜ್ಯೋತಿ ಪ್ರೌಢಶಾಲಾ ನಿವೃತ್ತ ಮುಖ್ಯ ಶಿಕ್ಷಕ ನರೇಂದ್ರ ಮುಂಡೋಡಿ, ಶಾಲಾ ಮುಖ್ಯಶಿಕ್ಷಕಿ ಶ್ರೀಮತಿ ವಾಣಿ ಉಪಸ್ಥಿತರಿದ್ದರು.

ವಿಜೇಶ್ ಹಿರಿಯಡ್ಕ ಸ್ವಾಗತಿಸಿ, ಜಯರಾಮ ಮಾಸ್ಟರ್ ಕಡ್ಲಾರ್ ವಂದಿಸಿದರು. ಓಂಪ್ರಕಾಶ್ ಮುಂಡೋಡಿ ನಿರೂಪಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!