
ದ.ಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಫೆ 10 ರಂದು ಕೊಲ್ಲಮೊಗ್ರದಲ್ಲಿ ಜರುಗಿದ ಪತ್ರಕರ್ತರ ಗ್ರಾಮ ವಾಸ್ತವ್ಯದ ಹಿನ್ನೆಲೆಯಲ್ಲಿ ಹಲವು ಬೇಡಿಕೆಗಳು ಅಲ್ಲಿ ಬಂದಿದ್ದು ಅದಕ್ಕೆ ಸಂಬಂಧಿಸಿದ ಮನವಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಶಿಕ್ಷಣ ಸಚಿವ ಮಧು ಬಂಗಾರಪ್ಪ, ವಿಧಾನ ಸಭಾ ಅಧ್ಯಕ್ಷರಾದ ಯು..ಟಿ ಖಾದರ್ ಅವರಿಗೆ ಶಾಸಕಿ ಭಾಗೀರಥಿ ಮುರಳ್ಯರವರ ಸಮ್ಮುಖದಲ್ಲಿ ಮನವಿ ನೀಡಲಾಯಿತು.
ಈ ಸಂದರ್ಬದಲ್ಲಿ ವಿದ್ಯಾರ್ಥಿಗಳು, ಶಿಕ್ಷಕರು ಹಾಗೂ ಪೋಷಕರು, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ ಇಂದಾಜೆ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ದಯಾನಂದ ಕಲ್ನಾರ್, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ನ ಲೋಕೇಶ್ ಬಿ.ಎನ್, ಕೊಲ್ಲಮೊಗ್ರುವಿನ ಮಾದವ ಚಾಂತಾಳ, ಉದಯ ಶಿವಾಲ, ಹರಿಪ್ರಸಾದ್ ಮಲ್ಲಾಜೆ, ಪದ್ಮನಾಭ ಮುಂಡಕಜೆ ಮತ್ತಿತರರು ಜತೆಗಿದ್ದರು.
ಬೆಂಡೋಡಿ ಶಾಲಾ ಮಕ್ಕಳಿಂದ ವಿಧಾನ ಮಂಡಲ ಅಧಿವೇಶನ ವೀಕ್ಷಣೆ.
ಕೊಲ್ಲಮೊಗ್ರು ಗ್ರಾಮದ ಬೆಂಡೋಡಿ ಕಿರಿಯ ಪ್ರಾಥಮಿಕ ಶಾಲಾ ಮಕ್ಕಳು ಫೆ.20 ರಂದು ಬೆಂಗಳೂರಿನಲ್ಲಿ ವಿಧಾನಮಂಡಲದ ಅಧಿವೇಶನ ವೀಕ್ಷಣೆಯನ್ನು ಮಾಡಿದರು.