Ad Widget

ಕೊಲ್ಲಮೊಗ್ರು : ಅನಾರೋಗ್ಯದಿಂದ ಯುವಕ ಮೃತ್ಯು

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಕೊಲ್ಲಮೊಗ್ರು ಗ್ರಾಮದ ಚರಣ್ ಕುಞೇಟಿ ಎಂಬುವವರು ಫೆ.28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಕೆಲವು ತಿಂಗಳುಗಳಿಂದ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ.ಮೃತರಿಗೆ 29 ವರ್ಷ ವಯಸ್ಸಾಗಿದ್ದು, ಮೃತರು ತಂದೆ ಕೊಲ್ಲಮೊಗ್ರದ ಪೋಸ್ಟ್ ಮಾಸ್ಟರ್ ಚಂದ್ರಶೇಖರ, ತಾಯಿ ಕಲಾವತಿ, ಸಹೋದರ ವಚನ್ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.

ಕೊಲ್ಲಮೊಗ್ರು : ಅನಾರೋಗ್ಯದಿಂದ ಯುವಕ ಮೃತ್ಯು

ಅನಾರೋಗ್ಯದಿಂದ ಚಿಕಿತ್ಸೆ ಪಡೆಯುತ್ತಿದ್ದ ಕೊಲ್ಲಮೊಗ್ರು ಗ್ರಾಮದ ಚರಣ್ ಕುಞೇಟಿ ಎಂಬುವವರು ಫೆ.28 ರಂದು ಮಂಗಳೂರಿನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಇವರು ಕೆಲವು ತಿಂಗಳುಗಳಿಂದ ಹೊಟ್ಟೆಗೆ ಸಂಬಂಧಿಸಿದ ಅನಾರೋಗ್ಯಕ್ಕೆ ಚಿಕಿತ್ಸೆ ಪಡೆಯುತ್ತಿದ್ದರೆನ್ನಲಾಗಿದೆ.ಮೃತರಿಗೆ 29 ವರ್ಷ ವಯಸ್ಸಾಗಿದ್ದು, ಮೃತರು ತಂದೆ ಕೊಲ್ಲಮೊಗ್ರದ ಪೋಸ್ಟ್ ಮಾಸ್ಟರ್ ಚಂದ್ರಶೇಖರ, ತಾಯಿ ಕಲಾವತಿ, ಸಹೋದರ ವಚನ್ ಹಾಗೂ ಕುಟುಂಬಸ್ಥರು, ಬಂಧು-ಮಿತ್ರರನ್ನು ಅಗಲಿದ್ದಾರೆ.
Ad Widget

ಮಾ.1-7 ಶ್ರೀಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಕಳಿಯಾಟ ಮಹೋತ್ಸವದ ಸಂಭ್ರಮ

ಸುಳ್ಯ:ಪಾಟಾಳಿ ಯಾನೆ ವಾಣಿಯ ಗಾಣಿಗ ಸಮುದಾಯದ ಕುಲದೇವತೆ, ಕಾಸರಗೋಡು ಜಿಲ್ಲೆಯ ಕಣ್ಣೂರು ಸಮೀಪದ ಕುಂಬಳೆ ಶ್ರೀ ಪೆರ್ಣೆ ಮುಚ್ಚಿಲೋಟ್ ಭಗವತಿ ಕ್ಷೇತ್ರದಲ್ಲಿ ಸುಮಾರು 20 ವರ್ಷಗಳ ನಂತರ ನಡೆಯುವ ಕಳಿಯಾಟ ಮಹೋತ್ಸವು ಮಾ.1ರಂದು ಅದ್ದೂರಿಯಾಗಿ ಚಾಲನೆ ದೊರೆಯಲಿದೆ. https://youtube.com/@amarasuddiamarasuddi7408?si=ihQTNbajE7mlB6ls ಶ್ರೀ ಕ್ಷೇತ್ರವು ತನ್ನ ಶಾಂತಿಯುತ ಮತ್ತು ಕರುಣಾಮಯಿ ದೇವತೆಯಾದ ಶ್ರೀ ಪೆರ್ನೆ ಮುಚ್ಚಿಲೋಟ್ ಭಗವತಿಗೆ ಹೆಸರುವಾಸಿಯಾಗಿದೆ....

ಮಾ.01-ಮಾ.02: ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ 22ನೇ ವರ್ಷದ ಏಕಾಹ ಭಜನೆ

ಪೆರುವಾಜೆ ಶ್ರೀ ಜಲದುರ್ಗಾದೇವಿ ದೇವಸ್ಥಾನದಲ್ಲಿ ಮಾ.01 ಶುಕ್ರವಾರ ಸೂರ್ಯೋದಯದಿಂದ ಮಾ.02 ಶನಿವಾರ ಸೂರ್ಯೋದಯದವರೆಗೆ ಶ್ರೀ ಜಲದುರ್ಗಾದೇವಿ ಭಜನಾ ಮಂಡಳಿ ಪೆರುವಾಜೆ ಹಾಗೂ ಶ್ರೀ ಜಲದುರ್ಗಾದೇವಿ ಮಹಿಳಾ ಭಜನಾ ಮಂಡಳಿ ಪೆರುವಾಜೆ ಇವರ ಸಂಯುಕ್ತ ಆಶ್ರಯದಲ್ಲಿ 22ನೇ ವರ್ಷದ ಏಕಾಹ ಭಜನೆ ಕಾರ್ಯಕ್ರಮ ನಡೆಯಲಿದೆ. ಈ ಕಾರ್ಯಕ್ರಮದಲ್ಲಿ ಭಗವದ್ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ದೇವಸ್ಥಾನದ ಆಡಳಿತಾಧಿಕಾರಿಗಳು ವಿನಂತಿಸಿದ್ದಾರೆ.

ಬಿಜೆಪಿ ಜಿಲ್ಲಾ ಯುವ ಮೋರ್ಚಾ ಕಾರ್ಯದರ್ಶಿಯಾಗಿ ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆ

ಭಾರತೀಯ ಜನತಾ ಪಕ್ಷದ ಜಿಲ್ಲಾ ಯುವ ಮೊರ್ಚಾ  ಕಾರ್ಯದರ್ಶಿಯಾಗಿ ಯುವ ನಾಯಕ  ಶ್ರೀಕಾಂತ್ ಮಾವಿನಕಟ್ಟೆ ಆಯ್ಕೆಯಾಗಿದ್ದಾರೆ.

ಸಂಪಾಜೆ ಅರಣ್ಯ ಇಲಾಖೆ ವತಿಯಿಂದ ಕಾಡ್ಗಿಚ್ಚು, ಬೆಂಕಿಯಿಂದ ಅರಣ್ಯ ರಕ್ಷಣೆ ಮತ್ತು ಸಾರ್ವಜನಿಕರ ಸಹಕಾರದ ಕುರಿತು ಕಾರ್ಯಕ್ರಮ

ಕೊಡಗು ಸಂಪಾಜೆ ಅರಣ್ಯ ಇಲಾಖೆ ವತಿಯಿಂದ, ಸುಳ್ಯ ಅಗ್ನಶಾಮಕದಳ ಸಹಯೋಗದೊಂದಿಗೆ ಶಾಲಾ ಮಕ್ಕಳಿಗೆ, ಸಾರ್ವಜನಿಕರಿಗೆ ಮತ್ತು ಗ್ರಾಮ ಅರಣ್ಯ ಸಮಿತಿಯ ಸದಸ್ಯರುಗಳಿಗೆ ಕಾಡ್ಗಿಚ್ಚು, ಬೆಂಕಿಯಿಂದ ಅರಣ್ಯವನ್ನು ಹೇಗೆ ರಕ್ಷಣೆ ಮಾಡಬಹುದು,  ಹಾಗೂ ಬೆಂಕಿ ನಂದಿಸುವಲ್ಲಿ ಸಾರ್ವಜನಿಕರ ಸಹಕಾರದ ಕುರಿತು ಮತ್ತು ಅಣಕು ಪ್ರದರ್ಶನ ಕಾರ್ಯಕ್ರಮವು ಫೆ.29 ರಂದು ಕೊಯನಾಡು ಶಾಲಾ ವಠಾರದಲ್ಲಿ ನಡೆಯಿತು.ಕಾರ್ಯಕ್ರಮದಲ್ಲಿ ಸಂಪಾಜೆ ಉಪವಲಯ...

ಸುಳ್ಯ ನಗರದಲ್ಲಿ ಅಸಮರ್ಪಕ ನೀರು ಸರಬರಾಜು ವಿಪಕ್ಷ ನಾಯಕ ಎಂ ವೆಂಕಪ್ಪ ಗೌಡರಿಂದ ಅಧಿಕಾರಿಗಳಿಗೆ ತರಾಟೆ

ಸುಳ್ಯ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಹಲವಾರು ದಿನಗಳಿಂದ ಅಸಮರ್ಪಕವಾಗಿ ನೀರು ಸರಬರಾಜಾಗುತ್ತಿರುವ ಮತ್ತು ಕಳೆದೆರಡು ದಿನಗಳಿಂದ ನಳ್ಳಿ ನೀರಿನ ಪೂರೈಕೆಯೇ ಇಲ್ಲದಿರುವ ಬಗ್ಗೆ ನಗರ ಪಂಚಾಯತ್ ವಿಪಕ್ಷ ನಾಯಕ ಎಂ ವೆಂಕಪ್ಪ ಗೌಡ ಇಂದು ನಗರ ಪಂಚಾಯತ್ ಗೆ ಭೇಟಿ ನೀಡಿ ನಗರ ಪಂಚಾಯತ್ ಮುಖ್ಯಾಧಿಕಾರಿ ಮತ್ತು ಅಭಿಯಂತರರನ್ನು ತರಾಟೆಗೆ ತೆಗೆದುಕೊಂಡು ಇಂದು ಸಂಜೆಯ ಒಳಗಾಗಿ...
error: Content is protected !!