Ad Widget


ಸುಬ್ರಹ್ಮಣ್ಯ: ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಬಸ್ಸು ಚಲಾಯಿಸಿ, ಮಹಿಳೆಗೆ ಗಾಯ!




ಬಸ್ ನಿಂದ   ಬಿದ್ದು  ಆಸ್ಪತ್ರೆಗೆ ದಾಖಲು!

ಸುಬ್ರಹ್ಮಣ್ಯ ಗ್ರಾಮದ ಬಿಲದ್ವಾರದಲ್ಲಿ ಕೆ.ಎಸ್.ಆರ್.ಟಿ.ಸಿ. ಬಸ್ಸಿನಿಂದ ಇಳಿಯುತ್ತಿದ್ದ ವೇಳೆ ಬಸ್ಸು ಚಲಾಯಿಸಿದ ಪರಿಣಾಮ ಮಹಿಳೆಯೋರ್ವರು ಕೆಳಕ್ಕೆ ಬಿದ್ದು ಗಾಯಗೊಂಡಿರುವ ಘಟನೆ ಫೆ.27ರಂದು ನಡೆದಿದೆ.
ಇವರು ತನ್ನ ಮಗಳೊಂದಿಗೆ ಕೆಎಸ್‌ಆರ್‌ಟಿಸಿ ಬಸ್ಸಿನಲ್ಲಿ ಪ್ರಯಾಣಿಸುತ್ತಿದ್ದವರು, ಸುಬ್ರಹ್ಮಣ್ಯ ಬಿಲದ್ವಾರದ ಬಳಿ ಬಸ್ ಇಳಿಯುತ್ತಿದ್ದಾಗ ನಿರ್ವಾಹಕ ಗಮನಿಸದೇ ಬಸ್ ಚಲಾಯಿಸಲು ಸೂಚನೆ ನೀಡಿದ್ದಾರೆ. ಈ ವೇಳೆ ಬಸ್‌ ಚಾಲಕ ಮಂಜುನಾಥರವರು ಬಸ್‌ ಚಲಾಯಿಸಿದ ಪರಿಣಾಮ ಮಹಿಳೆಗೆ ಬಸ್‌ನಿಂದ ಕೆಳಗೆ ರಸ್ತೆಗೆ ಬಿದ್ದು ಗಾಯಗೊಂಡಿದ್ದಾರೆ. ಸ್ಥಳೀಯರು ಸೇರಿ ಗಾಯಾಳುವನ್ನು ಆಸ್ಪತ್ರೆಗೆ ಕೊಂಡೊಯ್ಯವ ವ್ಯವಸ್ಥೆ ಮಾಡಿದ್ದಾರೆ.
ಗಾಯಾಳು ಕಡಬ ತಾಲೂಕು ಬಿಳಿನೆಲೆ ಗ್ರಾಮದ ಹೂವಪ್ಪ ಗೌಡರವರ ಪತ್ನಿ ವಸಂತಿ ಎಂದು ಗುರುತಿಸಲಾಗಿದೆ.
ವಸಂತಿ ಅವರನ್ನು ಚಿಕಿತ್ಸೆಗಾಗಿ ದೇರಳ ಕಟ್ಟೆ ಕೆ.ಎಸ್. ಹೆಗ್ಡೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ಕುರಿತು ಹೂವಪ್ಪ ಅವರು ನೀಡಿದ ದೂರಿನ ಮೇರೆಗೆ ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಐಪಿಸಿಯಂತೆ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!