
ಸುಳ್ಯ ಪೊಲೀಸ್ ಠಾಣೆಗೆ ನೂತನ ಎಎಸ್ಐ ಆಗಿ ಸುಂದರ ಶೆಟ್ಟಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ.
ಮೂಲತ: ಪುತ್ತೂರು ತಾಲೂಕಿನ ನೆಲ್ಯಾಡಿ ಗ್ರಾಮದ ಇವರು ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ಟೇಬಲ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಪ್ರಸ್ತುತ ಎ ಎಸ್ ಐ ಆಗಿ ಭಡ್ತಿಗೊಂಡು ಸುಳ್ಯ ಠಾಣೆಗೆ ಬಂದಿರುತ್ತಾರೆ.
ಇವರು ಉಡುಪಿ, ಮಂಗಳೂರು, ಬಂಟ್ವಾಳ, ಮಂಗಳೂರು ಇಂಟೆಲಿಜೆನ್ಸ್ ವಿಭಾಗದಲ್ಲಿ ಕಳೆದ 28 ವರ್ಷಗಳಿಂದ ಪೊಲೀಸ್ ಇಲಾಖೆಯಲ್ಲಿ ಸೇವೆ ಸೇವೆ ಸಲ್ಲಿಸಿದ್ದರು.
ನೆಲ್ಯಾಡಿ ಗ್ರಾಮದ ದಿ. ರಾಮಣ್ಣ ಶೆಟ್ಟಿ ಮತ್ತು ದಿ ಯಮುನಾ ದಂಪತಿಗಳ ಪುತ್ರರಾಗಿದ್ದಾರೆ.