Ad Widget

ದೊಡ್ಡತೋಟ : ಅನಾರೋಗ್ಯದಿಂದ ಮೃತ್ಯು

ದೊಡ್ಡತೋಟದ ಅರ್ನೋಜಿ ಡಿಯಪ್ಪ ಗೌಡರ ಪುತ್ರ ರವಿಕುಮಾರ (48) ಅನಾರೋಗ್ಯದಿಂದ ಮೃತಪಟ್ಟ ಘಟನೆ ಇಂದು ನಡೆದಿದೆ. ಇವರು ಬೆಂಗಳೂರಿನಲ್ಲಿ ನೆಲೆಸಿದ್ದರು. ಮೃತರು ಪತ್ನಿ ಸುನಿತಾ, ಪುತ್ರಿ ಮೋಕ್ಷಿತಾ, ಪುತ್ರ ಮೋಹಿತ್, ತಂದೆ, ತಾಯಿ, ಸಹೋದರ, ಸಹೋದರಿ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾ ಆಗ್ರಹಿಸಿದೆ. ಈ ಕುರಿತು ಹೇಳಿಕೆ ನೀಡಿರುವ ಬಿಜೆಪಿ ಸುಳ್ಯ...
Ad Widget

ಕಡಬ ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ ಪ್ರಕರಣ ಸುಳ್ಯ ಶಾಸಕರಿಂದ ಖಂಡನೆ

ಕಡಬ ತಾಲೂಕಿನ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಮೂವರು ವಿದ್ಯಾರ್ಥಿನಿಯರ ಮೇಲೆ ನಡೆದ ಆ್ಯಸಿಡ್ ದಾಳಿ ಇದೊಂದು ಅಮಾನವೀಯ ಕೃತ್ಯ ಈ ಬಗ್ಗೆ ಸೂಕ್ತ ತನಿಖೆ ನಡೆಸಿ ಆರೋಪಿಗೆ ತಕ್ಕ ಶಿಕ್ಷೆ ವಿಧಿಸುವಂತೆ ಸರಕಾರ ಮತ್ತು ಪೊಲೀಸ್ ಇಲಾಖೆಗೆ ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ರವರು ಆಗ್ರಹಿಸಿದ್ದಾರೆ. ಆ್ಯಸಿಡ್ ದಾಳಿ ಒಳಗಾದ ವಿದ್ಯಾರ್ಥಿನಿಯರಿಗೆ ಸರಕಾರದಿಂದ ಸಂಪೂರ್ಣ...

ಗಂಗಾಧರ ಮಟ್ಟಿಗೆ ಹುಟ್ಟೂರ ಗೌರವ

ಕಟಪಾಡಿಯ ಮಟ್ಟು ಗ್ರಾಮದಲ್ಲಿ ಮಾಡಿದ ಗ್ರಾಮೀಣ ಅಭಿವೃದ್ಧಿ ಸಾಧನೆಗಾಗಿ ಹಿರಿಯ ಪತ್ರಕರ್ತ, ಮಟ್ಟು ಮಿತ್ರ ಮಂಡಳಿಯ ಸ್ಥಾಪಕಾದ್ಯಕ್ಷ ಗಂಗಾಧರ ಮಟ್ಟಿ ಅವರನ್ನು ಮಟ್ಟು ಮಿತ್ರ ಮಂಡಳಿ ಮತ್ತು ಸ್ನೇಹಾ ಮಹಿಳಾ ಮಂಡಳಿಯ ಸುವರ್ಣ ಸಂಭ್ರಮದಲ್ಲಿ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಗೌರವಿಸಿದರು. ಮಿತ್ರ ಮಂಡಳಿ ಅದ್ಯಕ್ಷ ಶ್ರೀನಿವಾಸ ಎ.ಅಮೀನ್, ಪ್ರಧಾನ ಕಾರ್ಯದರ್ಶಿ ಕರುಣಾಕರ...

ಹರಿಹರ ಪಲ್ಲತ್ತಡ್ಕ : ಲ್ಯಾಂಡ್ ಲೈನ್ ಕೇಬಲ್ ಕಳವು

ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳಿಯರ ಆಗ್ರಹ ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ಎಂಬಲ್ಲಿ ಬಿ.ಎಸ್.ಎನ್.ಎಲ್ ಲ್ಯಾಂಡ್ ಲೈನ್ ಕೇಬಲ್ ಕಳವಾಗಿದ್ದು, ಮುಳ್ಳುಬಾಗಿಲು ಕಡೆಗೆ ಹೋಗುವ ರಸ್ತೆ ಪಕ್ಕದ ಬರೆಯಲ್ಲಿ ಅಳವಡಿಸಲಾಗಿದ್ದ ಡೆಡ್ ಲೈನ್ ಕೇಬಲ್ ಅನ್ನು ಎಳೆದು ಕತ್ತರಿಸಿ ಕಳವುಗೈಯಲಾಗಿದೆ ಎಂದು ತಿಳಿದುಬಂದಿದೆ.ಈ ಭಾಗದಲ್ಲಿ ಈ ಹಿಂದೆಯೂ ಎರಡು ಮೂರು ಬಾರಿ ಕೇಬಲ್...

ಐವರ್ನಾಡು : ವಿಷ ಸೇವಿಸಿ ಚಿಕಿತ್ಸೆ ಪಡೆಯುತ್ತಿದ್ದ ವಿದ್ಯಾರ್ಥಿನಿ ಮೃತ್ಯು

ವಿಷ ಸೇವಿಸಿದ ವಿದ್ಯಾರ್ಥಿನಿ ಚಿಕಿತ್ಸೆ ಫಲಕಾರಿಯಾಗದೇ ಇಂದು ಸುಳ್ಯದ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ವರದಿಯಾಗಿದೆ. ವಿದ್ಯಾರ್ಥಿನಿ ಆರತಿ 15 ದಿನಗಳ ಹಿಂದೆ ವಿಷ ಸೇವಿಸಿದ್ದರು ಇಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿದ ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಲಾಗುತ್ತಿತ್ತು ಅಲ್ಲದೇ ವೈಧ್ಯರ ಸಲಹೆಮೇರೆಗೆ ಸುಳ್ಯಕ್ಕೆ ತಂದು ಚಿಕಿತ್ಸೆ ನೀಡಲಾಗುತ್ತಿತ್ತು ಆದರೆ ಇಂದು ಚಿಕಿತ್ಸೆ ಫಲಕಾರಿಯಾಗದೇ...

ಕಡಬ : ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣ – ಆರೋಪಿಗೆ ಕಠಿಣ ಶಿಕ್ಷೆ ವಿಧಿಸಲು ವೆಂಕಟ್ ವಳಲಂಬೆ ಒತ್ತಾಯ

ಕಡಬ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದಲ್ಲಿ ಮೂವರು ವಿದ್ಯಾರ್ಥಿನಿಯರಿಗೆ ಆಸಿಡ್ ಎರಚಿರುವ ಪ್ರಕರಣವನ್ನು ಪೊಲೀಸ್ ಇಲಾಖೆ ಗಂಭೀರವಾಗಿ ತೆಗೆದುಕೊಂಡು ಆರೋಪಿಗೆ ಕಠಿಣ ಶಿಕ್ಷೆ ವಿಧಿಸುವಂತೆ ಬಿಜೆಪಿ ಮಂಡಲ ಅಧ್ಯಕ್ಷ ವೆಂಕಟ್ ವಳಲಂಬೆ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.ಕಡಬದಂತ ಸರ್ಕಾರಿ ಕಾಲೇಜ್ ಪ್ರದೇಶದಲ್ಲಿ ಮೂವರು ವಿದ್ಯಾರ್ಥಿ ನಿಗಳ ಮೇಲೆ ಅಸಿಡ್ ಎರಚಿ ಕಾನೂನು ಕೈಗೆತ್ತಿಕೊಂಡಿರುವ ಆರೋಪಿಗೆ ತಕ್ಕ...

ಟಿ ಎಂ ಶಾಹಿದ್ ತೆಕ್ಕಿಲ್  ಅನಿವಾಸಿ ಉದ್ಯಮಿ ಎಂ ಎ ಯೂಸುಫ್ ಅಲಿ ಭೇಟಿ

  ಲುಲು ಗ್ರೂಪಿನ ಅಧ್ಯಕ್ಷರಾದ ಪದ್ಮಶ್ರೀ ಎಂ ಎ ಯೂಸುಫ್ ಅಲಿ ಅವರ ದುಬೈ ಔಟ್ಲೆಟ್ ಮಾಲ್ ನಲ್ಲಿ ಪ್ರಾರಂಭವಾದ ಲುಲು ಮಾಲ್ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೆಪಿಸಿಸಿ ಮುಖ್ಯ ವಕ್ತಾರ ಟಿ ಎಂ ಶಾಹಿದ್ ತೆಕ್ಕಿಲ್ ಭಾಗವಹಿಸಿದರು ನಂತರ ಒಂದು ಘಂಟೆಗಳ ಕಾಲ ಹಲವು ವಿಷಯಗಳ ಬಗ್ಗೆ ವಿಚಾರ ವಿನಿಮಯ ನಡೆಸಿದರು. ಈ ಸಂದರ್ಭದಲ್ಲಿಟಿ ಎಂ...

ಪಂಜ; ಮನೆಗೆ ನುಗ್ಗಿ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಕಳ್ಳರು ಪರಾರಿ!

ಮನೆಗೆ ನುಗ್ಗಿದ ಕಳ್ಳ ಮಹಿಳೆಯ ಕುತ್ತಿಗೆಯಿಂದ ಚಿನ್ನದ ಚೈನ್ ಕಸಿದು ಪರಾರಿಯಾದ ಘಟನೆ ಪಂಜ ಸಮೀಪದ ಪಂಬೆತ್ತಾಡಿ ಗ್ರಾಮದ ಡಬಲ್ ಕಟ್ಟೆಯಲ್ಲಿ ನಡೆದಿದೆ. ಸೀತಮ್ಮ ಎಂಬವರು ಪಕ್ಕದ ಮನೆಗೆ ಬಾಗಿಲು ಹಾಕಿ ಹೋಗಿದ್ದರು. ಈ ವೇಳೆ ಮನೆಯೊಳಗೆ ಸದ್ದು ಕೇಳಿತ್ತೆಂದು ಮನೆಗೆ ಹೋದಾಗ ಇಬ್ಬರು ಕಳ್ಳರು  ಮನೆಯ ಹಿಂಬಾಗಿಲಿನಿಂದ ನುಗ್ಗಿದ್ದು ಕಂಡು ಬಂದಿದೆ. ಇದೇ ವೇಳೆ...

ಸುಳ್ಯದ ಪ್ರತಿಷ್ಠಿತ ಖಾಸಗಿ ಹೋಟೆಲ್ ನಲ್ಲಿ ವ್ಯಕ್ತಿ ಆತ್ಮಹತ್ಯೆ

ಸುಳ್ಯದ ಜೂನಿಯರ್ ಕಾಲೇಜು ಬಳಿಯ ಸದರ್ನ್ ರೆಸಿಡೆನ್ಸಿಯಲ್ಲಿ ಲಾರಿ ಚಾಲಕ ನೇಣುಬಿಗಿದು ಆತ್ಮಹತ್ಯೆ ಮಾಡಿಕೊಂಡ ರೀತಿಯಲ್ಲಿ ಕಂಡು ಬಂದಿರುವುದಾಗಿ ತಿಳಿದುಬಂದಿದೆ . ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿಯನ್ನು ಇಸಾಕ್ ಬೆಟ್ಟಂಪ್ಪಾಡಿ ಎಂದು ಹೇಳಲಾಗುತ್ತಿದ್ದು ಇದೀಗ ಹೋಟೆಲ್ ಬಳಿಯಲ್ಲಿ ಜನ ಸೇರ ತೊಡಗಿದ್ದು  ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.
Loading posts...

All posts loaded

No more posts

error: Content is protected !!