Ad Widget

ಸಂಪಾಜೆ ; ಗಡಿಕಲ್ಲು ಮುಂಡಡ್ಕ -ಆಲಡ್ಕ ಭಾಗದ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆ


ಸಂಪಾಜೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ಶಕ್ತಿವೇಲು  ಅವರು ಗಡಿಕಲ್ಲು ಮುಂಡಡ್ಕ -ಆಲಡ್ಕ ಭಾಗದ ರಸ್ತೆ ಕಾಂಕ್ರಿಟ್ ಕಾಮಗಾರಿ ಉದ್ಘಾಟನೆಯನ್ನು ರಿಬ್ಬನ್ ಕತ್ತರಿಸುವ ಮೂಲಕ ನೆರವೇರಿಸಿದರು. ಈ ಸಂದರ್ಭದಲ್ಲಿ ತೆಕ್ಕಿಲ್ ಪ್ರತಿಷ್ಠಾನದ ಅಧ್ಯಕ್ಷ ಟಿ. ಎಂ. ಶಾಹಿದ್ ರವರು ತೆಂಗಿನ ಕಾಯಿ ಒಡೆದರು. ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸರಿತಾ ಡಿಸೋಜಾ, ಸಂಪಾಜೆ ಸೊಸೈಟಿಯ ಮಾಜಿ ವ್ಯವಸ್ಥಾಪಕ ಶಿವರಾಮ್ ಬಿ. ಆರ್, ಸಂಪಾಜೆ ಸೊಸೈಟಿ ನಿರ್ದೇಶಕರಾದ ಹಮೀದ್ ಪಾಂಬಾರ್ ಮಾತನಾಡಿದರು.  ಸ್ವಾಗತವನ್ನು ವಾರ್ಡ್ ಸದಸ್ಯರು ಹಾಗೂ ಮಾಜಿ ಅಧ್ಯಕ್ಷ ಜಿ. ಕೆ. ಹಮೀದ್ ಗೂನಡ್ಕ ರವರು ಮಾಡಿದರು. 

ಪಂಚಾಯತ್ ಉಪಾಧ್ಯಕ್ಷ ಎಸ್. ಕೆ. ಹನೀಫ್, ಸದಸ್ಯರಾದ ಸುಂದರಿ ಮುಂಡಡ್ಕ, ಜಗದೀಶ್ ರೈ.  ವಿಜಯಕುಮಾರ್ ಆಲಡ್ಕ, ರಜನಿ ಶರತ್,ವಿಮಲಾ ಪ್ರಸಾದ್, ಶೌವಾದ್ ಗೂನಡ್ಕ, ಅಬೂಸಾಲಿ ಪಿ. ಕೆ. ಮಾಜಿ ಪಂಚಾಯತ್ ಸದಸ್ಯರಾದ ತಾಜ್ ಮಹಮ್ಮದ್, ಕೆ. ಎಂ. ಆಶ್ರಫ್ ಗುತ್ತಿಗೆದಾರ ಅಶ್ರಫ್ ಸಂಟ್ಯಾರ್, ಯೂಸುಫ್ ಕಲ್ಲುಗುಂಡಿ, ಅಬ್ದುಲ್ ರಹಿಮಾನ್ ಎಸ್. ಪಿ. ಅಬ್ಬಾಸ್. ಕೆ. ಕೆ. ಸಂಪಾಜೆ ಬದ್ರ್ ಜುಮಾ ಮಸೀದಿ ಅಧ್ಯಕ್ಷ ಮಹಮ್ಮದ್ ಹಮೀದಿಯಾ ಅಂಗನವಾಡಿ ಕಾರ್ಯಕರ್ತರಾದ ಶೀಲಾವತಿ, ಪಂಚಾಯತ್ ಸಿಬ್ಬಂದಿ ಭರತ್, ಉಮೇಶ್, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು. ಕಾರ್ಯಕ್ರಮದ ಕೊನೆಗೆ ಉಪಾಧ್ಯಕ್ಷ ಎಸ್. ಕೆ. ಹನೀಫ್ ವಂದಿಸಿದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!