Ad Widget

ಉದ್ಘಾಟನೆ ರದ್ದಾಗಿ ಭಾರಿ ಆಕ್ರೋಶಕ್ಕೆ ಕಾರಣವಾಗಿದ್ದ ಮೇನಾಲ ಶಾಲಾ ನೂತನ ಕೊಠಡಿ – ಇಂದು ಉದ್ಘಾಟನೆ ನೆರವೇರಿಸಿದ ಸಚಿವರು ಮತ್ತು ಶಾಸಕರಿಗೆ ಸನ್ಮಾನ

ಸುಳ್ಯ ಅಜ್ಜಾವರ ಗ್ರಾಮದ ಅಡ್ಪಂಗಾಯದಲ್ಲಿ ದ.ಕ ಜಿಲ್ಲಾ ಪಂಚಾಯತ್ ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸುಳ್ಯ ವತಿಯಿಂದ ಮೇನಾಲ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಕಾರ್ಯಕ್ರಮ ನಡೆಯಿತು . ಉದ್ಘಾಟನೆಯನ್ನು ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ನಡೆಸಿದರು ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕು. ಭಾಗೀರಥಿ ಮುರುಳ್ಯ, ಶಿಕ್ಷಣಾಧಿಕಾರಿಗಳಾದ ರಮೇಶ್ ಬಿ ಇ , ಶೀತಲ್ , ಶಾಲಾ ಮುಖ್ಯ ಶಿಕ್ಷಕಿ ಮತ್ತು ಶಿಕ್ಷಕರು ಉಪಸ್ಥಿತಿತರಿದ್ದರು ಈ ಸಂದರ್ಭದಲ್ಲಿ ಪ್ರಮುಖರಾದ ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಶೌಕತ್ ಆಲಿ , ರಂಜಿತ್ ರೈ ಮೇನಾಲ , ಸುಭೋದ್ ಶೆಟ್ಟಿ ಮೇನಾಲ , ಮಹೇಶ್ ರೈ ಮೇನಾಲ , ಧನಂಜಯ ಅಡ್ಪಂಗಾಯ , ಗ್ರಾ.ಪಂ ಅಧ್ಯಕ್ಷೆ ಬೇಬಿ ಕಲ್ತಡ್ಕ , ಸದಸ್ಯರಾದ ಪ್ರಸಾದ್ ರೈ ಮೇನಾಲ , ಲೀಲಾ ಮನಮೋಹನ್ , ಶ್ರೀಧರ ಮಣಿಯಾಣಿ ಮೇನಾಲ , ಗ್ರಾ.ಪಂ ಉಪಾಧ್ಯಕ್ಷ ಜಯರಾಮ ಅತ್ಯಡ್ಕ ಸೇರಿದಂತೆ ಊರವರು ಉಪಸ್ಥಿತಿತರಿದ್ದರು. ಇದೇ ಸಂದರ್ಭದಲ್ಲಿ ಶಾಲಾ ಎಸ್ ಡಿ ಎಂ ಸಿ ವತಿಯಿಂದ ಜಿಲ್ಲಾ ಉಸ್ತುವಾರಿ ಸಚಿವರಾದ ದಿನೇಶ್ ಗುಂಡುರಾವ್ ಮತ್ತು ಶಾಸಕಿ ಕು. ಭಾಗೀರಥಿ ಮುರುಳ್ಯರವನ್ನು ಶಾಲು ಹೊದಿಸಿ ಹಾರ ಹಾಕಿ ಸನ್ಮಾನಿಸಲಾಯಿತು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!