Ad Widget

ಕಡಮಕಲ್ಲಿಗೆ ಭೇಟಿ ನೀಡಿದ ಮಡಿಕೇರಿ ಶಾಸಕ ಮಂತರ್ ಗೌಡ

ದಕ್ಷಿಣ ಕನ್ನಡ ಜಿಲ್ಲೆ ಮತ್ತು ಕೊಡಗಿನ ಗಡಿಭಾಗವಾದ ಕಡಮಕಲ್ಲು ಭಾಗಕ್ಕೆ ಮಡಿಕೇರಿ ಶಾಸಕ ಮಂತರ್ ಗೌಡ ದಿಢೀರ್ ಭೇಟಿ ನೀಡಿದರು. ಈ ಸಂದರ್ಭ ಸ್ಥಳೀಯ ನಿವಾಸಿಗಳು ಮುಖ್ಯವಾಗಿ ಗಾಳಿಬೀಡು ಕಡಮಕಲ್ಲು ರಸ್ತೆ ಸಂಪರ್ಕ, ವಿದ್ಯುತ್ ಸಮಸ್ಯೆ ಮೊಬೈಲ್ ಟವರ್ ನ ಸಮಸ್ಯೆ ಕುಡಿಯುವ ನೀರಿನ ಸಮಸ್ಯೆ ಮತ್ತು ಜಮೀನಿನ ಮೂಲ ದಾಖಲೆಗಳನ್ನು ಸರಿಪಡಿಸುವ ಬಗ್ಗೆ ಚರ್ಚಿಸಿದರು. ಇದಕ್ಕೆ ಶಾಸಕರು ಸಕಾರಾತ್ಮಕವಾಗಿ ಸ್ಪಂದಿಸಿ ವಿದ್ಯುತ್ ಹಾಗೂ ಕುಡಿಯುವ ನೀರಿನ ಸಮಸ್ಯೆಯಾಗಿ ತಕ್ಷಣ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು. ರಸ್ತೆ ಸಂಪರ್ಕದ ಬಗ್ಗೆ ಈಗಾಗಲೇ ಪ್ರಕರಣ ನ್ಯಾಯಾಲಯದಲ್ಲಿ ಇರುವುದರಿಂದ ಈ ರಸ್ತೆಯ ಸಂಪರ್ಕಕ್ಕಾಗಿ ಈಗಾಗಲೇ ರಾಜ್ಯ ಸರ್ಕಾರಕ್ಕೆ ಸುಪ್ರೀಂ ಕೋರ್ಟಿನಿಂದ ಕೆಲವು ಆದೇಶಗಳು ಬಂದಿದ್ದು ಅವುಗಳನ್ನು ಪರಿಶೀಲಿಸಿ, ಮುಂದಿನ ದಿನಗಳಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು. ಅವರೊಂದಿಗೆ ಕೊಡಗು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರು, ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ಸಿನ ಪದಾಧಿಕಾರಿಗಳು, ಸುಳ್ಯ,ಕಲ್ಮಕಾರು ಕೊಲ್ಲಮೊಗ್ರ,ಬಾಳುಗೋಡು,ಹರಿಹರ ಪಲತ್ತಡ್ಕ, ಗುತ್ತಿಗಾರು ಭಾಗದ ಕಾಂಗ್ರೆಸ್ ಮುಖಂಡರುಗಳು ಉಪಸ್ಥಿತರಿದ್ದರು.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!