Ad Widget

15ನೇ ರಾಷ್ಟ್ರೀಯ ಮುಕ್ತ ಯೋಗಾಸನ ಸ್ಪರ್ಧೆಯಲ್ಲಿ ಬಹುಮಾನ ಸ್ಥಾನ ಪಡೆದ ಅಮರ ಯೋಗ ಕೇಂದ್ರ ಗುತ್ತಿಗಾರಿನ ವಿದ್ಯಾರ್ಥಿಗಳು

ಯೋಗಾಸನ ಸ್ಪೋರ್ಟ್ಸ್ ಫೆಡರೇಶನ್ ಆಫ್ ಇಂಡಿಯಾ ಇವರು ಆನ್ಲೈನ್ ನಲ್ಲಿ ನಡೆಸಿದ 15ನೇ ಮುಕ್ತ ರಾಷ್ಟ್ರ ಮಟ್ಟದ ಯೋಗಾಸನ ಚಾಂಪಿಯನ್ ಶಿಪ್ -2024ರಲ್ಲಿ 12ವರ್ಷದ ಒಳಗಿನ ವಯೋಮಿತಿ ವಿಭಾಗದಲ್ಲಿ ಅಮರ ತಾಲೂಕು ಪಬ್ಲಿಕ್ ಚಾರಿಟೇಬಲ್ ಟ್ರಸ್ಟ್ ಗುತ್ತಿಗಾರು ವತಿಯಿಂದ ನಡೆಸಲ್ಪಡುವ ಅಮರ ಯೋಗ ಕೇಂದ್ರ ಇದರ ವಿದ್ಯಾರ್ಥಿಗಳಾದ ಹವಿಕ್ಷಾ ಎಸ್. ಆರ್ ಮತ್ತು ಜಿಶಾ. ಕೆ....

ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ – ಕುಕ್ಕೆಯಲ್ಲಿ ಹೇಳಿಕೆ ನೀಡಿದ ಡಿ.ಕೆ. ಶಿವಕುಮಾರ್

ಉಪಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್ ಇಂದು ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ, ದೇವರ ದರ್ಶನ ಪಡೆದು ಪ್ರಸಾದ ಸ್ವೀಕರಿಸಿದರು. ತದನಂತರ ಹೊಸಳಿಗಮ್ಮ ದೈವದ ಪ್ರಸಾದ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಡಿಕೆಶಿ, ರಾಜ್ಯದಲ್ಲಿ ಕಾಂಗ್ರೆಸ್ ಅಲೆ ಇದೆ .ಅದರೊಂದಿಗೆ ದೇವರ ಆಶೀರ್ವಾದ ಬೇಡಲು ಧರ್ಮಸ್ಥಳ .ಕುಕ್ಕೆ ಸುಬ್ರಹ್ಮಣ್ಯ, ಕೊಲ್ಲೂರು,...
Ad Widget

ಕೋವಿ ಠೇವಣಾತಿಯಲ್ಲಿ ರೈತರಿಗೆ ವಿನಾಯಿತಿ ನೀಡಬೇಕೆಂದು ರೈತರ ಆಗ್ರಹ – ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗಿ

ಚುನಾವಣಾ ಸಂದರ್ಭದಲ್ಲಿ ರೈತರು ಕೋವಿ ಠೇವಣಾತಿ ಇಡುವುದನ್ನು  ವಿನಾಯಿತಿ ನೀಡಬೇಕೆಂದು ಒತ್ತಾಯಿಸಿ  ಕೋವಿ ಪರವಾನಗಿದಾರ ರೈತರ  ಹಕ್ಕೊತ್ತಾಯ ಸಭೆ ಮಾ.26ರಂದು  ತಾಲೂಕು ಕಚೇರಿ ಮುಂಭಾಗದಲ್ಲಿ ನಡೆಯಿತು. ಸಭೆಯಲ್ಲಿ ಮಾತನಾಡಿದ ನ್ಯಾಯವಾದಿ ಕೃಷಿಕ ಯಂ ವೆಂಕಪ್ಪ ಗೌಡ ಮಾತನಾಡಿ  ಬೆಳೆ ರಕ್ಷಣೆಗೆಂದು ನೀಡಿರುವ ಕೋವಿಗಳನ್ನು ಚುನಾವಣಾ ಸಂದರ್ಭದಲ್ಲಿ ಎರಡು ತಿಂಗಳಿಗೂ ಹೆಚ್ಚು ಸಮಯ ಡಿಪಾಸಿಟ್ ಇಡುವುದರಿಂದಕೃಷಿಕರಿಗೆ ಸಮಸ್ಯೆ...

ರವಿ ಕಕ್ಕೆಪದವು ಸಮಾಜಸೇವಾ ಟ್ರಸ್ಟ್ ವತಿಯಿಂದ ಡಿಸಿಎಂ ಡಿಕೆ ಶಿವಕುಮಾರ್ ಗೆ ಮನವಿ

ಕುಕ್ಕೆ ಸುಬ್ರಹ್ಮಣ್ಯ ಮಾ.26: ಕುಕ್ಕೆ ಸುಬ್ರಹ್ಮಣ್ಯದಲ್ಲಿ ಪ್ರಾರ್ಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿ 24*7 ವೈದ್ಯಕೀಯ ಸೇವೆ ಸೌಲಭ್ಯವಾಗುವಂತೆ ಮಾಡಬೇಕೆಂದು ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ವತಿಯಿಂದ ಕರ್ನಾಟಕ ಸರ್ಕಾರ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಗೆ ಮಾರ್ಚ್ 26ರಂದು ಮನವಿ ನೀಡಲಾಯಿತು.ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನಕ್ಕೆ ಆಗಮಿಸಿದ ಡಿ.ಕೆ.ಶಿವಕುಮಾರ್ ಅವರಿಗೆ ಮನವಿ ನೀಡಲಾಗಿದ್ದು ಮಾನವಿ ಸ್ವೀಕರಿಸಿದ...

ಐವರ್ನಾಡು ಸಹಕಾರಿ ಸಂಘದ ಸಿ.ಇ.ಒ ರವಿಪ್ರಸಾದ್ ಸಿ.ಕೆಯವರಿಗೆ ಸಾರ್ವಜನಿಕ ಬೀಳ್ಕೊಡುಗೆ ಹಾಗೂ ಡಿ.ಸಿ.ಸಿ.ಬ್ಯಾಂಕ್ ನಿರ್ದೇಶಕ ಎಸ್.ಎನ್ .ಮನ್ಮಥರವರಿಗೆ ಸನ್ಮಾನ

ಐವರ್ನಾಡು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯನಿರ್ವಹಣಾಧಿಕಾರಿ ರವಿಪ್ರಸಾದ್ ಸಿ.ಕೆಯವರಿಗೆ ಸನ್ಮಾನ ಕಾರ್ಯಕ್ರಮವು ಮಾ.26 ರಂದು ಸಂಘದ ಸಭಾಭವನದಲ್ಲಿ ನಡೆಯಿತು. ಮಾ.31 ರಂದು ಸ್ವಯಂ ನಿವೃತ್ತಿಗೊಳ್ಳಲ್ಲಿರುವ ಇವರಿಗೆ ಸಾರ್ವಜನಿಕ ಬೀಳ್ಕೊಡುಗೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಎನ್ ಮನ್ಮಥ ರವರು ಮಾತನಾಡಿ ಸ್ವಯಂ ನಿವೃತ್ತಿಗೊಳ್ಳಲಿರುವ ರವಿಪ್ರಸಾದ್ ರವರು ಗ್ರಾಮದ ಎಲ್ಲಾ ಜನರ ಪ್ರೀತಿಗೆ ಪಾತ್ರರಾಗಿದ್ದಾರೆ. ಸಂಘದಿಂದ...

ಬಿಜೆಪಿ ಮಹಿಳಾ ಮೋರ್ಚಾದ ಸಭೆ – ಗ್ರಾಮ ಮಟ್ಟದಲ್ಲಿ ಚುನಾವಣಾ ಪ್ರಚಾರಕ್ಕೆ ತೀರ್ಮಾನ

ಲೋಕಸಭಾ ಚುನಾವಣೆಯ ಹಿನ್ನೆಲೆಯಲ್ಲಿ ಸುಳ್ಯಮಂಡಲ ಮಹಿಳಾ ಮೋರ್ಚಾದ ಸಭೆಯು ಈ ದಿನ ಬಿಜೆಪಿ ಕಚೇರಿಯಲ್ಲಿ ನಡೆಯಿತು. ಮಹಿಳಾ ಮೋರ್ಚದ ಜಿಲ್ಲಾಧ್ಯಕ್ಷೆ ಡಾ. ಮಂಗಳ , ಮಹಿಳಾ ಪ್ರಮುಖರಾದ ಶ್ರೀಮತಿ ಕಸ್ತೂರಿ ಪಂಜ, ಶ್ರೀಮತಿ ಧನಲಕ್ಷ್ಮಿ ಗಟ್ಟಿ, ಮಂಡಲ ಪ್ರಭಾರಿ ಯಶಸ್ವಿನಿ, ಜಿಲ್ಲಾ ಉಪಾಧ್ಯಕ್ಷ ಗುಣವತಿ ಕೊಲ್ಲಂತಡ್ಕ, ಜಾಹ್ನವಿ ಕಾಂಚೊಡು, ಮತ್ತಿತರರು ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರತಿ ಗ್ರಾಮದಲ್ಲೂ...

ಕುಕ್ಕೆ ಸುಬ್ರಹ್ಮಣ್ಯಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಭೇಟಿ

ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನ ಕ್ಕೆ ಆಗಮಿಸಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ದೇವರ ದರ್ಶನ ಪಡೆದರು. ಸುಬ್ರಹ್ಮಣ್ಯ ಕ್ಕೆ ಬಂದು ದೇವರಿಗೆ ಪೂಜೆ ಸಲ್ಲಿಸಿ, ಹೊಸೋಳಿಗಮ್ಮನ ದರ್ಶನ ಪಡೆದರು. ದೇವಸ್ಥಾನಕ್ಕೆ ಆಗಮಿಸಿದ ಅವರನ್ನು ದೇವಸ್ಥಾನದ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭ ಕಡಬ ಬ್ಲಾಕ್ ನ ಅಧ್ಯಕ್ಷ ಸುಧೀರ್ ಕುಮಾರ್ ಶೆಟ್ಟಿ, ಧನಂಜಯ ಅಡ್ಪಂಗಾಯ, ಕೃಷ್ಣಪ್ಪ, ಮಾದವ...

ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಗ್ ವಿಭಾಗದ ವಿದ್ಯಾರ್ಥಿ ಸಂಘ (ಒಇಂ) ಪದಾಧಿಕಾರಿಗಳ ಪದಗ್ರಹಣ ಮತ್ತು ಫ್ರೆಶರ್ಸ್ ಡೇ ಆಚರಣೆ

ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಫ್ರೆಶರ್ಸ್ ಡೇ “ಆರೋಹಣ” ಕಾರ್ಯಕ್ರಮವು ಮಾ. ೨೩ ರಂದು ಕಾಲೇಜಿನ ಸಭಾಭವನದಲ್ಲಿ ನಡೆಯಿತು. ಋತಾಯು ಆಯುರ್ವೇದ ವೆಲ್‌ನೆಸ್ ಹೋಮ್, ಭಾರಧ್ವಜ್ ಆಶ್ರಮ್, ಸುಳ್ಯ ಇದರ ಸಂಸ್ಥಾಪಕಿ ಡಾ. ಯಶಸ್ವಿನಿ ಭಾರಧ್ವಜ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಕಾರ್ಯಕ್ರಮವನ್ನು ಉದ್ಘಾಟಿಸಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಯುವಜನತೆಗೆ...

ಪುತ್ತೂರು : ಲಹರಿ ಡ್ರೈಫ್ರೂಟ್ಸ್ & ಮೋರ್ ಹೊಸತನದೊಂದಿಗೆ ಉದ್ಘಾಟನೆ

ಸುಮಾರು ಹತ್ತು ವರುಷಗಳಿಂದ ಪುತ್ತೂರಿನ ಏಳ್ಮುಡಿ ಕೆವಿ ಶೆಣೈ ಪೆಟ್ರೋಲ್ ಪಂಪ್ ಎದುರು ಕಾರ್ಯಚರಿಸುತ್ತಿರುವ ಇರುವ ಶ್ರೀಮತಿ ಲಿಖಿತಾ ಕುಸುಮ್ ಮಾಲಕತ್ವದ ಲಹರಿ ಡ್ರೈಫ್ರೂಟ್ಸ್ & ಮೋರ್ ಪುನರಾರಂಭ ಮಾ.24 ರಂದು ನಡೆಯಿತು. ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನ ಸಾಧ್ವಿಶ್ರೀ ಮಾತಾನಂದಮಯಿ ದೀಪ ಬೆಳಗಿಸಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸುಳ್ಯ ಶಾಸಕಿ ಕುಮಾರಿ ಭಾಗೀರಥಿ ಮುರುಳ್ಯ,...

ಹರಿಶ್ಚಂದ್ರ ಕಜ್ಜೋಡಿ ನಿಧನ

ಹರಿಹರ ಪಲ್ಲತ್ತಡ್ಕ ಗ್ರಾಮದ ಕಜ್ಜೋಡಿ ಹರಿಶ್ಚಂದ್ರ ರವರು ಇಂದು ಮುಂಜಾನೆ ಹೃದಯಾಘಾತದಿಂದ ಸ್ವಗೃಹದಲ್ಲಿ ನಿಧನರಾದರು. ಮೃತರಿಗೆ 64 ವರ್ಷ ವಯಸ್ಸಾಗಿತ್ತು. ಮೃತರು ಪತ್ನಿ ಶ್ರೀಮತಿ ಲಲಿತಾ, ಪುತ್ರಿಯರಾದ ರಶ್ಮಿ, ಕೀರ್ತಿ ಹಾಗೂ ಸಹೋದರರಾದ ಪ್ರಭಾಕರ ಕಜ್ಜೋಡಿ, ಶಿವರಾಮ ಕಜ್ಜೋಡಿ, ರವೀಂದ್ರ ಕಜ್ಜೋಡಿ ಮತ್ತು ಸಹೋದರಿ ಸುಲೋಚನಾ ದೊಡ್ಡಿಹಿತ್ಲು ಹಾಗೂ ಕುಟುಂಬಸ್ಥರನ್ನು, ಬಂಧು-ಮಿತ್ರರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!