Ad Widget

ಎಡಮಂಗಲ : ಕೊಲ್ಲರ್ನೂಜಿ ಕುಟುಂಬದ ಧರ್ಮನಡಾವಳಿ ಹಾಗೂ ಸಭಾ ಕಾರ್ಯಕ್ರಮ

ಎಡಮಂಗಲ ಗ್ರಾಮದ ಜಾಲ್ತಾರು ಕೊಲ್ಲರ್ನೂಜಿ ಕುಟುಂಬದ ತರವಾಡು ಮನೆಯಲ್ಲಿ ಕೊಲ್ಲರ್ನೂಜಿ ಕುಟುಂಬಸ್ಥರ ಧರ್ಮದೈವ ಮತ್ತು ಉಪದೈವಗಳ ಧರ್ಮನಡಾವಳಿಯು ಮಾ.24 ಹಾಗೂ ಮಾ.25ರಂದು ಜರುಗಿತು. ಧರ್ಮನಡಾವಳಿಯ ಪ್ರಯುಕ್ತ ಮಾ.24ರಂದು ಬೆಳಗ್ಗೆ ಗಣಹೋಮ ನೆರವೇರಿತು. ಸಂಜೆ ದೈವಗಳ ಭಂಡಾರ ತೆಗೆದು ಅನ್ನಸಂತರ್ಪಣೆ ನಡೆಯಿತು. ಬಳಿಕ ಸತ್ಯದೇವತೆ, ಕಲ್ಲುರ್ಟಿ, ವರ್ಣಾರ ಪಂಜುರ್ಲಿ, ಧರ್ಮದೈವ ರುದ್ರಚಾಮುಂಡಿ ಮತ್ತು ಗುಳಿಗ ದೈವಗಳ ನೇಮೋತ್ಸವ...

ಕುಕ್ಕೆ ಸುಬ್ರಮಣ್ಯ : ನಿರಂತರ ಸ್ವಚ್ಛತಾ ಕಾರ್ಯದಲ್ಲಿ ತೊಡಗಿದ ರವಿ ಕಕ್ಕೆಪದವು ಸಮಾಜ ಸೇವಾ ತಂಡ

ಕುಕ್ಕೆ ಸುಬ್ರಮಣ್ಯದ ರವಿ ಕಕ್ಕೆ ಪದವು ಸಮಾಜ ಸೇವಾ ಟ್ರಸ್ಟ್ ನವರು ಕುಮಾರಧಾರದ ದ್ವಾರದಿಂದ ಕಾಶಿ ಕಟ್ಟೆ ವರೆಗಿನ ಮುಖ್ಯರಸ್ತೆಯ ಎರಡು ಬದಿಗಳಲ್ಲಿ ಹಾಗೂ ಕಾಶಿ ಕಟ್ಟೆ ಸುತ್ತಮುತ್ತಲಿನ ಪರಿಸರದಲ್ಲಿ ಇದ್ದಂತಹ ಕಸ ಕಡ್ಡಿಗಳು, ಪ್ಲಾಸ್ಟಿಕ್ ಬಾಟಲಿಗಳು, ಪ್ಲಾಸ್ಟಿಕ್ ಚೀಲ ಹಾಗೂ ಇನ್ನಿತರ ಕಚ್ಚಾ ವಸ್ತುಗಳನ್ನು ಹೆಕ್ಕಿ ಸ್ವಚ್ಛತಾ ಕಾರ್ಯ ಕೈಗೊಂಡರು. ಪ್ರಸಿದ್ಧ ಪುಣ್ಯಕ್ಷೇತ್ರ ಕುಕ್ಕೆ...
Ad Widget

ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾ ಸಮಿತಿ, ಕುಕ್ಕನ್ನೂರು ಇದರ ಸಾಮಾನ್ಯ ಸಭೆ

ಮಾ. 24 ರವಿವಾರ ಸಂಜೆ ಗಂಟೆ 6.00ಕ್ಕೆ ಶ್ರೀ ಕಿನ್ನಿಮಾಣಿ ಪೂಮಾಣಿ ಸೇವಾಸಮಿತಿಯ ಸಾಮಾನ್ಯ ಸಭೆಯುಕುಕ್ಕನ್ನೂರಿನ ಕಟ್ಟಮುಚೀರ್ ಮಾಡದ ಬಳಿಯಲ್ಲಿ ನಡೆಯಿತು. ಈ ಸಭೆಯಲ್ಲಿ ಸಾರ್ವಜನಿಕ ಸತ್ಯನಾರಾಯಣ ಪೂಜೆ ಹಾಗೂ ಕುಕ್ಕನ್ನೂರು ಕಾಲಾವಧಿ ಉತ್ಸವ ದ ಪೂರ್ವ ತಯಾರಿಯ ಕುರಿತು ಚರ್ಚಿಸಲಾಯಿತು. ಸಭೆಯಲ್ಲಿ ಅಧ್ಯಕ್ಷರು, ಪದಾಧಿಕಾರಿಗಳು ಹಾಗೂ ಊರವರು ಸೇರಿದ್ದರು.

ಬೆಳ್ಳಾರೆ ವಲಯ ಕಾಂಗ್ರೇಸ್ ಚುನಾವಣ ಪ್ರಚಾರ ಕಛೇರಿ ಉದ್ಘಾಟಣೆ

ಮಾ.30ರ ಶನಿವಾರ ಮದ್ಯಾಹ್ನ  1 ಘಂಟೆಗೆ ಸರಿಯಾಗಿ ಬೆಳ್ಳಾರೆಯ ಕಲ್ಪವ್ರಕ್ಷ ಆರ್ಕೆಡ್ ನಲ್ಲಿ ಕಾಂಗ್ರೇಸ್ ಚುನಾವಣ ಪ್ರಚಾರ ಕಛೇರಿ ಉದ್ಘಾಟಣೆ ನಡೆಯಲಿದೆ. ಈ ಸಮಾರಂಭಕ್ಕೆ ಕಾಂಗ್ರೇಸ್ ಅಭ್ಯರ್ಥಿ ಪದ್ಮರಾಜ್ ರಾಮಯ್ಯಮತ್ತು ಜಿಲ್ಲಾ , ತಾಲೂಕಿನ ಪ್ರಮುಖ ನಾಯಕರು ಭಾಗವಹಿಸಲಿದ್ದಾರೆ. ಕಾಂಗ್ರೇಸ್ ಪಕ್ಷದ ನಾಯಕರು ಕಾರ್ಯಕತರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಭಾಗವಹಿಸಬೇಕಾಗಿ ಬೆಳ್ಳಾರೆ ವಲಯ ಕಾಂಗ್ರೇಸ್ ಮೂಲಗಳು...

ಪುಣ್ಚತ್ತಾರು- ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲಕ್ಕೆ ಗೊನೆ ಮುಹೂರ್ತ

ಕಾಣಿಯೂರು: ಪುಣ್ಚತ್ತಾರು ಕರಿಮಜಲು ಶ್ರೀ ವಿಷ್ಣುಮೂರ್ತಿ ದೈವಸ್ಥಾನ ಮತ್ತು ಶ್ರೀ ಕಾಳಿಕಾಂಬಾ ದೇವಿ ದೇವಸ್ಥಾನದಲ್ಲಿ ಎ.3,4ರಂದು  ಶ್ರೀ ವಿಷ್ಣುಮೂರ್ತಿ ದೈವದ ಒತ್ತೆಕೋಲ ನಡೆಯಲಿದೆ. ಇದರ ಗೊನೆ ಮುಹೂರ್ತ ಕಾರ್ಯಕ್ರಮವು ಮಾ 27ರಂದು ಕ್ಷೇತ್ರದಲ್ಲಿ ನಡೆಯಿತು.ಈ ಸಂದರ್ಭದಲ್ಲಿ ಕ್ಷೇತ್ರದ ಆಡಳಿತ ಸಮಿತಿ ಅಧ್ಯಕ್ಷ ಡಾ. ದೇವಿಪ್ರಸಾದ್ ಕಾನತ್ತೂರ್, ಮೊಕ್ತೇಸರ ವೆಂಕಟ್ರಮಣ ಆಚಾರ್ಯ ವಿಷ್ಣುಪುರ, ಜನಾರ್ದನ ಆಚಾರ್ಯ ವಿಷ್ಣುಪುರ,...

ಸುಳ್ಯ : ಸ. ಪ್ರ.ದರ್ಜೆ ಕಾಲೇಜಿನಲ್ಲಿ ಹೆಚ್ ಐ ವಿ ಮತ್ತು ಯುವಜನತೆ  ಕುರಿತು ಉಪನ್ಯಾಸ ಕಾರ‍್ಯಕ್ರಮ

ಸರಕಾರಿ ಪ್ರಥಮ ದರ್ಜೆ ಕಾಲೇಜು ಸುಳ್ಯ ಇಲ್ಲಿಯ ರಾಷ್ಟೀಯ ಸೇವಾ ಯೋಜನೆ ಮತ್ತು ರೆಡ್ ರಿಬ್ಬನ್ ಕ್ಲಬ್ ಇದರ ವತಿಯಿಂದ ಹೆಚ್ ಐ ವಿ ಮತ್ತು ಯುವಜನತೆ  ಕುರಿತು ಉಪನ್ಯಾಸ ಕಾರ‍್ಯಕ್ರಮವು ಮಾ-೨೫ರಂದು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು.ಉಪನ್ಯಾಸ ಕರ‍್ಯಕ್ರಮವನ್ನು ತಾಲೂಕು ಆಸ್ಪತ್ರೆ ಸುಳ್ಯ ಇಲ್ಲಿಯ ಐಸಿಟಿಸಿ ಸಮಾಲೋಚಕರಾದ ಬಾಲಕೃಷ್ಣ ಕೆ ಇವರು ನಡೆಸಿಕೊಟ್ಟರು. ಕರ‍್ಯಕ್ರಮದ ಅಧ್ಯಕ್ಷತೆಯನ್ನು...

ಅಯ್ಯನಕಟ್ಟೆ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಉಚಿತ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶ ಔಷಧಿಗಳ ವಿತರಣೆ

ಅಯ್ಯನಕಟ್ಟೆಯಲ್ಲಿರುವ ನಮ್ಮ ಆರೋಗ್ಯಧಾಮ ಮಲ್ಟಿಸ್ಪೆಷಾಲಿಟಿ ಮೆಡಿಕಲ್ ಸೆಂಟರ್ ನಲ್ಲಿ ಮಹಿಳೆಯರಿಗೆ ಉಚಿತವಾಗಿ ಕ್ಯಾಲ್ಸಿಯಂ ಹಾಗೂ ಕಬ್ಬಿಣಾಂಶವಿರುವ ಔಷಧಿಗಳ ವಿತರಣೆ ನಡೆಯಿತು. ಈ ಔಷಧಿ ಮಹಿಳೆಯರಿಗೆ ಮೂಳೆಗಳ ಸವೆತ ತಡೆಯಲು ಹಾಗೂ ಹಿಮೋಗ್ಲೋಬಿನ್ ರಕ್ತದಾಂಶ ವೃದ್ಧಿಸಲು ಸಹಕಾರಿಯಾಗಲಿದೆ. ಸುಮಾರು 50ಕ್ಕೂ ಹೆಚ್ಚಿನ ಮಹಿಳೆಯರು ಇದರ ಸದುಪಯೋಗವನ್ನು ಪಡೆದುಕೊಂಡರು. ಮುಂದಿನ ವಾರ ಮಕ್ಕಳಿಗೆ ವಿಟಮಿನ್ ಡಿ ಹಾಗೂ ಜಂತುಹುಳದ...

ಸುಳ್ಯ ತಾ. ಬ್ರಾಹ್ಮಣ ಸಂಘದ ಮಹಾಸಭೆ

ಸುಳ್ಯ ತಾ. ಬ್ರಾಹ್ಮಣ ಸಂಘದ ಮಹಾಸಭೆಯು ಬ್ರಾಹ್ಮಣ ವಿದ್ಯಾರ್ಥಿ ನಿಲಯದ ಸಭಾಭವನದಲ್ಲಿ ಮಾ .26 ರಂದು ಸಂಘದ ಅಧ್ಯಕ್ಷ ಪಾಲೆಪ್ಪಾಡಿ ಡಾ|ಬಾಲಸುಬ್ರಹ್ಮಣ್ಯ ಭಟ್ ಇವರ ಅಧ್ಯಕ್ಷತೆಯಲ್ಲಿ ನಡೆಯಿತು. ವಿದ್ಯಾರ್ಥಿ ನಿಲಯ ಹಾಗೂ ಸಭಾಭವನದ ಅಭಿವೃದ್ಧಿ ಬಗ್ಗೆ ಸಾಕಷ್ಟು ಚರ್ಚೆ ನಡೆದು ಈ ಕುರಿತು ಕ್ರಮ ಕೈಗೊಳ್ಳಲು ನಿರ್ಧರಿಸಲಾಯಿತು. ಪ್ರಧಾನ ಕಾರ್ಯದರ್ಶಿ ಕೃಷ್ಣ ರಾವ್ ನಾವೂರು ವರದಿ,...

ನಿಷ್ಪಕ್ಷಪಾತ  ಚುನಾವಣೆಗೆ ಸಹಕರಿಸಿ : ಡಾ. ಚೂಂತಾರು

       ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ ಚುನಾವಣೆ ಎನ್ನುವುದು ಹಬ್ಬವಿದ್ದಂತೆ. ಪ್ರಜೆಗಳಿಂದ, ಪ್ರಜೆಗಳಿಗಾಗಿ, ಪ್ರಜೆಗಳೇ ಪ್ರಭುಗಳನ್ನು ಆಯ್ಕೆ ಮಾಡುವ ವಿಶಿಷ್ಟ ಅವಕಾಶ ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ಜನರಿಗಿದೆ. ಈ ಹಿನ್ನೆಲೆಯಲ್ಲಿ ಚುನಾವಣೆಗೆ ಪ್ರಜಾಪ್ರಭುತ್ವ ರಾಷ್ಟ್ರಗಳಲ್ಲಿ  ಅತ್ಯಂತ ಮಹತ್ವದ ಮತ್ತು ಪಾವಿತ್ರ್ಯತೆ ಇರುತ್ತದೆ. ಈ ಕಾರಣದಿಂದ  ಪಾರದರ್ಶಕ ಮತ್ತು  ನಿಷ್ಪಕ್ಷಪಾತ ಚುನಾವಣೆ ನಡೆಸಲು ಆಡಳಿತ ಯಂತ್ರ ಶ್ರಮಿಸುತ್ತದೆ. ಜಿಲ್ಲಾಡಳಿತ, ಪೊಲೀಸ್ ಇಲಾಖೆ...

ಅಯೋಧ್ಯ ಕರಸೇವಕ ಗಂಗಾಧರ ಮಾವಿನಗೊಡ್ಲು ನಿಧನ

ಅಯೋದ್ಯ ಕರಸೇವೆಯಲ್ಲಿ ಭಾಗವಹಿಸಿದ ಸಂಘದ ಹಿರಿಯ ಕಾರ್ಯಕರ್ತರಾದ ಮಾವಿನಗೊಡ್ಲು ಗಂಗಾಧರ ರವರು ಮಾ.26 ಹೃದಯಾಘಾತದಿಂದ ನಿಧನರಾದರು. ಮೃತರು ಪತ್ನಿ ರೋಹಿಣಿ, ಪುತ್ರರಾದ ಶನ್ವಿತ್ ಮತ್ತು ಶೃಜನ್ ಹಾಗೂ ಕುಟುಂಬಸ್ಥರನ್ನು ಅಗಲಿದ್ದಾರೆ.
Loading posts...

All posts loaded

No more posts

error: Content is protected !!