Ad Widget

ಪಂಜ : ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ಗೌರವ ಸಲಹೆಗಾರರಾಗಿ ನೇಮಕಗೊಂಡವರಿಗೆ ಗೌರವಾರ್ಪಣೆ

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನ ಸಮಿತಿಯ ಗೌರವ ಸಲಹೆಗಾರರಾಗಿ ನೇಮಕಗೊಂಡ ಮಹೇಶ್ ಕುಮಾರ್ ಕರಿಕ್ಕಳ, ಆನಂದ ಗೌಡ ಕಂಬಳ ಹಾಗೂ ಪರಮೇಶ್ವರ ಬಿಳಿಮಲೆ ಯವರಿಗೆ ಶ್ರೀ ದೇಗುಲದ ವತಿಯಿಂದ ಗೌರವಾರ್ಪಣೆ ಸಲ್ಲಿಸಲಾಯಿತು. ‌ಈ ಸಂದರ್ಭದಲ್ಲಿ ದೇವಸ್ಥಾನದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ದೇವಿಪ್ರಸಾದ್ ಕಾನತ್ತೂ‌ರ್, ಪ್ರಧಾನ ಅರ್ಚಕರಾದ ರಾಮಚಂದ್ರ ಬಟ್, ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಧರ್ಮಪಾಲ ಗೌಡ ಮರಕ್ಕಡ ಕಾಚಿಲ, ಸಂತೋಷ್ ಕುಮಾ‌ರ್ ರೈ ಬಳ್ಳ, ಧರ್ಮಣ್ಣ ನಾಯ್ಕ ಗರಡಿ, ಸತ್ಯನಾರಾಯಣ ಭಟ್ ಕಾಯಂಬಾಡಿ, ಮಾಯಿಲಪ್ಪ ಗೌಡ ಪಟ್ಟೆ, ಎಣ್ಮೂರು, ಶ್ರೀಮತಿ ಪವಿತ್ರ ಮಲ್ಲೆಟ್ಟಿ, ಶ್ರೀಮತಿ ಮಾಲಿನಿ ಕುದ್ವ, ಅರ್ಚಕರಾದ ನರೇಶ್ ಕೃಷ್ಣ ಉಪಸ್ಥಿತರಿದ್ದರು.

ಪಂಜ ಶ್ರೀ ಪರಿವಾರ ಪಂಚಲಿಂಗೇಶ್ವರ ದೇವಸ್ಥಾನದ ದಿನ ನಿತ್ಯ ಸೇವೆಗಳ ಹಾಗೂ ಕಲ್ಯಾಣ ಮಂಟಪ ಮಾಹಿತಿಗಾಗಿ ದೂರವಾಣಿ ಸಂಖ್ಯೆ 8431981889 ಯನ್ನು ನೀಡಲಾಗಿದೆ. ದಿನದ 24ಗಂಟೆ ಸೇವೆ ನೀಡಲು ಕರೆ ಮಾಡಿ ಮಾಹಿತಿ ಪಡಕೊಳ್ಳಬಹುದು ಎಂದು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾದ ಡಾ. ದೇವಿ ಪ್ರಸಾದ್ ಕಾನತ್ತೂರು ತಿಳಿಸಿದ್ದಾರೆ.

Related Posts

Ad Widget
https://www.google.com/adsense/new/u/7/pub-8317931258687044/home

Leave a Reply

Your email address will not be published. Required fields are marked *

error: Content is protected !!